ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ವಿಳಂಬ: ವಿದ್ಯಾರ್ಥಿಗಳಲ್ಲಿ ಆತಂಕ


Team Udayavani, Jul 19, 2017, 4:40 AM IST

Medical-18-7.jpg

ಬೆಂಗಳೂರು: ರಾಜ್ಯ ಸರಕಾರ ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸದೇ ಇರುವುದರಿಂದ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆ ವಿಳಂಬವಾಗಲಿದೆ. ನೀಟ್‌ನಲ್ಲಿ ತೇರ್ಗಡೆಯಾಗಿ, ಕೆಇಎ ಮೂಲಕ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಆರಂಭವಾಗಿದೆ. ಆದರೆ, ಈ ವರ್ಷ ಎಷ್ಟು ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳು ರಾಜ್ಯದಲ್ಲಿ ಲಭ್ಯವಿವೆ ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಸೀಟು ಸಿಗಬಹುದು ಎಂಬಿತ್ಯಾದಿ ಅಂಶಗಳನ್ನು ಒಳಗೊಂಡಿರುವ ಸೀಟ್‌ ಮ್ಯಾಟ್ರಿಕ್ಸ್‌ ಅನ್ನು ರಾಜ್ಯ ಸರಕಾರ ಇನ್ನೂ ಕೆಇಎಗೆ ನೀಡಿಲ್ಲ. ಇದರಿಂದ ಬಹುತೇಕ ವಿದ್ಯಾರ್ಥಿಗಳಲ್ಲಿ ಹಾಗೂ ಹೆತ್ತವರಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಷ್ಟು ಸೀಟುಗಳು ಲಭ್ಯವಿವೆ ಹಾಗೂ ಯಾವ ರ್‍ಯಾಂಕ್‌ಗೆ ಯಾವ ಕಾಲೇಜು ಲಭ್ಯವಾಗಬಹುದು ಎಂಬ ಯಾವ ಮಾಹಿತಿಯೂ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಆಪ್ಶನ್‌ ಎಂಟ್ರಿ ಆರಂಭವಾದ ಅನಂತರವೇ ಕಾಲೇಜುಗಳ ಮಾಹಿತಿ ಲಭ್ಯವಾಗಲಿದೆ.

ನೀಟ್‌ ರ್‍ಯಾಂಕ್‌ ಆಧಾರದಲ್ಲಿ ಸೀಟು ಲಭ್ಯವಾಗದೇ ಇದ್ದರೆ, ಸಿಇಟಿ ರ್‍ಯಾಂಕ್‌ ಆಧಾರದಲ್ಲೇ ಎಂಜಿನಿಯರಿಂಗ್‌ ಅಥವಾ ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ ಸೇರಬಹುದೆಂದು ಆಶಾಭಾವನೆ ಹೊಂದಿದ್ದ ವಿದ್ಯಾರ್ಥಿಗಳಿಗೂ ನಿರಾಸೆಯಾಗಿದೆ. ವೈದ್ಯಕೀಯ ಕೋರ್ಸ್‌ನ ಮೊದಲ ಹಂತದ ಸೀಟು ಹಂಚಿಕೆ ಅನಂತರ ಎಂಜಿನಿಯರಿಂಗ್‌ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಬೇಕು ಎಂದು ಹಲವು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ಆದರೆ, ಕೆಇಎ ಇದಕ್ಕೆ ಅವಕಾಶ ನೀಡಿಲ್ಲ. ಎಂಜಿನಿಯರಿಂಗ್‌ 2ನೇ ಸುತ್ತಿನ ಸೀಟು ಹಂಚಿಕೆ ಮುಗಿದೆ. ಎಂಜಿನಿಯರಿಂಗ್‌ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಲ್ಲಿ ಕೆಲವರು ವೈದ್ಯಕೀಯ ಕೋರ್ಸ್‌ಗೆ ನೀಟ್‌ ಅಡಿಯಲ್ಲಿ ಸೀಟು ಪಡೆದು, ಎಂಜಿನಿಯರಿಂಗ್‌ ಸೀಟನ್ನು ಕೆಇಎಗೆ ಒಪ್ಪಿಸುವ ಸಾಧ್ಯತೆ ಇದೆ. ಉಳಿಕೆಯಾಗಿರುವ ಎಲ್ಲ ಸೀಟುಗಳನ್ನು ಎಂಜಿನಿಯರಿಂಗ್‌ 2ನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆ ಮಾಡುವುದಕ್ಕೆ ಪ್ರಾಧಿಕಾರ ನಿರ್ಧರಿಸಿದೆ.

ಈ ಮಧ್ಯೆ, ವಿದ್ಯಾರ್ಥಿಗಳಿಗೆ ಸಂಕಟ ಎದುರಾಗಿದೆ. ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್‌ ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು. ಇಲ್ಲವಾದರೆ ಸೀಟು ರದ್ದಾಗಲಿದೆ ಎಂಬ ಸಂದೇಶ ಪ್ರಾಧಿಕಾರ ನೀಡಿದೆ. ಹಾಗೆಯೇ ನೀಟ್‌ ಅಡಿಯಲ್ಲಿ ಸೀಟು ಲಭ್ಯವಾಗುವುದಿಲ್ಲ ಎಂಬ ಸಂದೇಶವನ್ನು ಕೆಲವು ವಿದ್ಯಾರ್ಥಿಗಳಿಗೆ ಕಳುಹಿಸಲಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.

ಶುಲ್ಕ ವಿವರ ಪ್ರಾಧಿಕಾರಕ್ಕೆ ಇನ್ನೂ ಬಂದಿಲ್ಲ
ಪ್ರಸಕ್ತ ಸಾಲಿನಿಂದಲೇ ವೈದ್ಯಕೀಯ ಶಿಕ್ಷಣದ ಪ್ರವೇಶ ಶುಲ್ಕ ಶೇ. 10ರಷ್ಟು ಏರಿಸಲು ಸರಕಾರ ನಿರ್ಧರಿಸಿದ್ದು, ಶುಲ್ಕದ ವಿವರವನ್ನು ಇನ್ನೂ ಪ್ರಾಧಿಕಾರಕ್ಕೆ ನೀಡಿಲ್ಲ. ಶೇ. 10ರಷ್ಟು ಹೆಚ್ಚಳದಿಂದ ಈ ವರ್ಷ ಸರಕಾರಿ ಕಾಲೇಜು ಪ್ರವೇಶ ಶುಲ್ಕ 77 ಸಾವಿರ ರೂ. ಹಾಗೂ ಖಾಸಗಿ ಸೀಟಿಗೆ 6.35 ಲಕ್ಷ ರೂ. ಶುಲ್ಕವಾಗಲಿದೆ. ಸರಕಾರಿ ವೈದ್ಯಕೀಯ ಕಾಲೇಜಿನ ಶುಲ್ಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 16,000 ರೂ. ಶುಲ್ಕ ಇರಲಿದೆ. ಆದರೆ, ಈ ಬಗ್ಗೆ ಅಧಿಕೃತ ಆದೇಶ ಇನ್ನೂ ಪ್ರಾಧಿಕಾರಕ್ಕೆ ಸಿಕ್ಕಿಲ್ಲ. ಹಾಗೆಯೇ ಈ ಬಾರಿ ರಾಜ್ಯದಲ್ಲಿ ಆರು ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು 100ರಿಂದ 150ಕ್ಕೆ ಹಾಗೂ ಕಿಮ್ಸ್‌ ವೈದ್ಯಕೀಯ ಕಾಲೇಜಿನಲ್ಲಿ 150ರಿಂದ 200ಕ್ಕೆ  ಏರಿಸಲಾಗಿದೆ. ಇದರಿಂದ ಹೆಚ್ಚುವರಿ 350 ಸರಕಾರಿ ಸೀಟುಗಳು ಲಭ್ಯವಾಗಿವೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.