ಕೊಡಗಿಗೆ ಪರಿಹಾರ ಸಾಮಗ್ರಿ ರವಾನೆ
Team Udayavani, Aug 21, 2018, 12:01 PM IST
ಬೆಂಗಳೂರು: ಬಿಬಿಎಂಪಿ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಂದ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಹೊತ್ತು ಕೊಡಗಿನತ್ತ ತೆರಳಿದ ಟ್ರಕ್ಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದರು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗು ಜಿಲ್ಲೆಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿ, ನೌಕರರು ಸಹ ನಿಂತಿದ್ದು, ಸಂತ್ರಸ್ತರ ನೆರವಿಗಾಗಿ 3.18 ಕೋಟಿ ರೂ. ನೀಡಿದ್ದಾರೆ. ಅದರಲ್ಲಿ 1 ಕೋಟಿ ರೂ. ಕೇರಳ ರಾಜ್ಯಕ್ಕೆ ಕಳುಹಿಸಿ, ಉಳಿದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಹಾಗೂ ಬಿಬಿಎಂಪಿಯಿಂದ ತಲಾ ಎರಡು ಟ್ರಕ್ ಬೆಡ್ಶೀಟ್, ನೀರು, ಬಿಸ್ಕೆಟ್ , ಬೇಳೆಕಾಳುಗಳು ಸೇರಿದಂತೆ ಇತರೆ ಸಾಮಗ್ರಿಗಳು ಹಾಗೂ ಪರಿಹಾರ ಪರಿಕರಗಳನ್ನು ಕಳುಹಿಸಿದ್ದು, ಮೈಸೂರು, ಮಂಗಳೂರು, ಹಾಸನದಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರ ನೆರವಿಗೆ ಧಾವಿಸುವ ದಾನಿಗಳು ಅಗತ್ಯ ಪದಾರ್ಥಗಳನ್ನು ಇಲ್ಲಿಗೆ ತಲುಪಿಸಿದರೆ, ಅಲ್ಲಿಂದ ಕೊಡಗಿನ ಜನರಿಗೆ ಪೂರೈಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಇದೇ ವೇಳೆ ಮೇಯರ್ ಆರ್.ಸಂಪತ್ರಾಜ್, ಉಪಮೇಯರ್ ಪದ್ಮಾವತಿ ಹಾಗೂ ಆಡಳಿತ ಪಕ್ಷ ನಾಯಕ ಎಂ.ಶಿವರಾಜು ಪಾಲಿಕೆಯ ವತಿಯಿಂದ ಕೊಡಗು ನಿರಾಶ್ರಿತರಿಗಾಗಿ 2.80 ಕೋಟಿ ರೂ. ಚೆಕ್ ಹಾಗೂ ಕೇರಳ ರಾಜ್ಯಕ್ಕೆ 1 ಕೋಟಿ ರೂ. ಮೊತ್ತದ ಚೆಕ್ಅನ್ನು ಪರಮೇಶ್ವರ್ ಅವರಿಗೆ ಹಸ್ತಾಂತರಿಸಿದರು. ಸಚಿವ ಸಾ.ರಾ.ಮಹೇಶ್, ಆಯುಕ್ತ ಮಂಜನಾಥ್ಪ್ರಸಾದ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಉಪಸ್ಥಿತರಿದ್ದರು.
ಸ್ವತ್ಛತಾ ಕಾರ್ಯಕ್ಕಾಗಿ 300 ಮಂದಿ ಪೌರಕಾರ್ಮಿಕರು: ಪಾಲಿಕೆಯಿಂದ ಈಗಾಗಲೇ 100 ಇ-ಶೌಚಾಲಯಗಳನ್ನು ಕಳುಹಿಸಲಾಗಿದ್ದು, ಪರಿಹಾರ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಬೆಂಗಳೂರಿನಿಂದ ಒದಗಿಸಲಾಗುವುದು. ಅದರಂತೆ ಕೊಡಗಿನಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಸ್ವತ್ಛತಾ ಕಾರ್ಯಕ್ಕಾಗಿ ಪಾಲಿಕೆಯ 300 ಮಂದಿ ಪೌರಕಾರ್ಮಿಕರು ಕುಶಾಲನಗರಕ್ಕೆ ಹೋಗಿದ್ದಾರೆ.
ಜತೆಗೆ ನೀರು, ಒಳಚರಂಡಿ ಸಮಸ್ಯೆಗಳ ನಿವಾರಣೆಗೆ ಜಲಮಂಡಳಿಯ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ಸಹ ಕಳುಹಿಸಿಕೊಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಫೋಟೋ ಕ್ಯಾಪ್ಷನ್: ಬಿಬಿಎಂಪಿ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಂದ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಹೊತ್ತು ಕೊಡಗಿನತ್ತ ತೆರಳಿದ ಟ್ರಕ್ಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೋಮವಾರ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…