ವೇತನಾನುದಾನಕ್ಕೆ ಆಗ್ರಹಿಸಿ ಧರಣಿ
Team Udayavani, Aug 19, 2018, 11:58 AM IST
ಬೆಂಗಳೂರು: ವೇತನಾನುದಾನಕ್ಕೆ ಆಗ್ರಹಿಸಿ ಕರ್ನಾಟ ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟ, ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿರುವ ಧರಣಿ ಶನಿವಾರ 33ನೇ ದಿನಕ್ಕೆ ಕಾಲಿರಿಸಿದೆ.
ಈ ಹಿಂದೆ, 1983ರಿಂದ 1994-95ರ ಅವಧಿಯಲ್ಲಿ ಪ್ರಾರಂಭವಾದ ಸುಮಾರು 94 ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು, ವೇತನಾನುದಾನಕ್ಕೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಶಿಫಾರಸು ಮಾಡಿ ಆರ್ಥಿಕ ಇಲಾಖೆ ಸಮ್ಮತಿಗೆ ಕಳುಹಿಸಿದ್ದರು.
ಆದರೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಸರ್ಕಾರಿ ಆದೇಶದಲ್ಲಿ ಇದು ಇಲ್ಲ ಎಂದು ಆಕ್ಷೇಪಣೆ ವ್ಯಕ್ತಪಡಿಸಿ ಕಡತಗಳನ್ನು ಹಿಂದಿರುಗಿಸಿದ್ದಾರೆ. ಹೀಗಾಗಿ, ಹಲವು ಶಿಕ್ಷಕರು ತೊಂದರೆಗೆ ಸಿಲುಕಿದ್ದಾರೆ ಎಂದು ಧರಣಿ ನಿರತರು ದೂರಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವರದರಾಜ್, 2007ರಲ್ಲಿ ಸರ್ಕಾರ 1600 ಶಾಲೆಗಳಿಗೆ ವೇತನಾನುದಾನ ನೀಡಿತ್ತು. ಇದೇ ರೀತಿ ಬಾಕಿ ಉಳಿದಿರುವ ಸುಮಾರು 94 ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೂ ನೀಡಬೇಕು. ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಧರಣಿ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ