ಕ್ಷೇತ್ರಗಳ ಅನುದಾನಕ್ಕೆ ಬೇಡಿಕೆ
ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿಶಾಸಕರಿಂದ ಸಿಎಂ ಬಿಎಸ್ವೈಗೆ ಮನವಿ
Team Udayavani, Sep 26, 2020, 11:34 AM IST
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕ್ಷೇತ್ರಗಳ ಅಭಿವೃದ್ಧಿ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಗುತ್ತಿಲ್ಲ ಎಂದು ಬಹುತೇಕ ಶಾಸಕರು ಪ್ರಸ್ತಾಪಿಸಿದಾಗ ಕೋವಿಡ್ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ತುಸು ವ್ಯತ್ಯಾಸವಾಗಿದ್ದು, ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕ್ಷೇತ್ರಗಳಲ್ಲಿ ಆಗಬೇಕಾದ ಕೆಲಸ ಕಾರ್ಯ ಹಾಗೂ ಪೂರಕವಾಗಿ ಸ್ಪಂದಿಸುವ ಅಧಿಕಾರಿಗಳ ನಿಯೋ ಜನೆ ವಿಚಾರವೂ ಪ್ರಸ್ತಾಪವಾದಾಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶಾಸಕರು, ಸಂಸದರು ಎಲ್ಲರೂ ಸಮನ್ವಯ ಸಾಧಿಸಿ ಒಮ್ಮತ ತೀರ್ಮಾನಕ್ಕೆ ಬಂದರೆ ಅದನ್ನು ಕಾರ್ಯಗತಗೊಳಿಸುವುದಾಗಿಯೂ ತಿಳಿಸಿದರು ಎನ್ನಲಾಗಿದೆ.
ಸಾಲ ಆದರೂ ಮಾಡಿ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕೊಡಿ. ನಮ್ಮ ಸರ್ಕಾರವೇ ಇದ್ದಾಗ ಅನುದಾನ ಕೊಡದಿದ್ದರೆ ಹೇಗೆ ಎಂದು ಕೆಲವು ಶಾಸಕರು ಪ್ರಶ್ನಿಸಿದರು. ಇದಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಹೇಳಲಾಗಿದೆ.
ಕ್ಷೇತ್ರದ ಅನುದಾನ ವಿಚಾರದಲ್ಲಿ ಪ್ರತಿಪಕ್ಷಗಳ ಸದಸ್ಯರು ದನಿ ಎತ್ತಿದಾಗ ಆಡಳಿತ ಪಕ್ಷದವರಾದ ನಾವು ನಮಗೂ ನೀಡಿಲ್ಲ.ನೆರೆ,ಕೋವಿಡ್ ಕಾರಣಕ್ಕೆಹಿನ್ನಡೆಯಾಗಿರುವ ವಿಚಾರವನ್ನು ತಿಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪಸ್ವರ : ಶಾಸಕಾಂಗ ಪಕ್ಷದ ಸಭೆ ಕರೆದಿರುವ ಬಗ್ಗೆ ಹಲವು ಶಾಸಕರಿಂದ ಸಭೆಯಲ್ಲಿ ಅಪಸ್ವರ ವ್ಯಕ್ತವಾಗಿದೆ ಎನ್ನಲಾಗಿದೆ. ಅಧಿವೇಶನ ಆರಂಭಕ್ಕೂ ಮೊದಲೇ ಸಭೆ ಕರೆದಿದ್ದರೆ ಮಂಡನೆಯಾಗಲಿರುವ ವಿಧೇಯಕರಗಳು, ಸರ್ಕಾರದ ನಿಲುವು, ಚರ್ಚೆ ಸಾಧ್ಯವಾಗುತ್ತಿತ್ತು. ಆದರೆ ಆ ರೀತಿ ನಡೆಯದ ಕಾರಣ ಭಿನ್ನಅಭಿಪ್ರಾಯಕ್ಕೆ ಎಡೆಯಾಗಿದೆ. ಮೊದಲು ಶಾಸಕರ ಅಹವಾಲು, ಅಭಿಪ್ರಾಯ ಆಲಿಸಲು ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು ಎನ್ನಲಾಗಿದೆ.
ಗೈರು : ಶಾಸಕಾಂಗ ಪಕ್ಷದ ಸಭೆಗೆ 116 ಶಾಸಕರಲ್ಲಿ 91 ಶಾಸಕರು ಹಾಜರಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ.ಯೋಗೇಶ್ವರ್ ಸಹ ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ