ರೈತರ ಅನುಕೂಲಕ್ಕೆ ರೈಲು ಸೇವೆ ಆರಂಭಿಸಲು ಆಗ್ರಹ
Team Udayavani, Feb 17, 2019, 6:23 AM IST
ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರ ಸುತ್ತಲಿನ ರೈತರು ಮತ್ತು ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ದೆಹಲಿ, ಚೆನ್ನೈ ಮತ್ತು ಮುಂಬೈಗೆ ರೈಲು ಸೇವೆ ಆರಂಭಿಸಬೇಕು ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಆಗ್ರಹಿಸಿದರು.
ಯಶವಂತಪುರ ರೈಲು ನಿಲ್ದಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಂಗಾರಪೇಟೆ-ಮಾರಿಕುಪ್ಪಂ ಮತ್ತು ಚಿಕ್ಕಬಳ್ಳಾಪುರ-ಕೋಲಾರ ನಡುವೆ ನಿರ್ಮಿಸಲಾದ ರೈಲ್ವೆ ಕೆಳಸೇತುವೆಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸುತ್ತಲಿನ ರೈತರು ಅತಿ ಹೆಚ್ಚು ಪ್ರಮಾಣದಲ್ಲಿ ತರಕಾರಿ, ಹಣ್ಣುಗಳನ್ನು ಬೆಳೆಯುತ್ತಾರೆ.
ಆ ಉತ್ಪನ್ನಗಳು ದೇಶದ ನಾನಾ ಭಾಗಗಳಿಗೆ ಹೋಗುತ್ತವೆ ಹೀಗಾಗಿ, ಬೆಂಗಳೂರು-ದೇವನಹಳ್ಳಿ- ಚಿಕ್ಕಬಳ್ಳಾಪುರ-ಶಿಡ್ಲಘಟ್ಟ- ಚಿಂತಾಮಣಿ-ಶ್ರೀನಿವಾಸಪುರ- ಕೋಲಾರ-ಬಂಗಾರಪೇಟೆ- ತಿರುಪತಿ ಮಾರ್ಗವಾಗಿ ದೆಹಲಿ, ಚೆನ್ನೈ ಹಾಗೂ ಮುಂಬೈಗೆ ರೈಲು ಸಂಪರ್ಕ ಕಲ್ಪಿಸಬೇಕು.
ಇದರಿಂದ ಬೆಳೆಗಾರರ ಶೇ.80ರಷ್ಟು ಸಾರಿಗೆ ವೆಚ್ಚ ಹಾಗೂ ಸಮಯ ಉಳಿತಾಯ ಆಗುವುದರ ಜತೆಗೆ ವಾಯುಮಾಲಿನ್ಯ ಕೂಡ ಕಡಿಮೆ ಆಗಲಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದ ಪಿ.ಸಿ.ಮೋಹನ್, ಶಾಸಕ ಎಸ್.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ