ಒಂದೇ ತಿಂಗಳಲ್ಲಿ 203 ಮಂದಿಗೆ ಡೆಂಘೀ


Team Udayavani, May 25, 2019, 3:10 AM IST

onde

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ಒಂದು ತಿಂಗಳಲ್ಲಿ 203 ಮಂದಿಯಲ್ಲಿ ರೋಗ ದೃಢಪಟ್ಟಿದೆ. ಇದಕ್ಕೆ ಸಾಂಕ್ರಾಮಿಕ ರೋಗಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ ನಗರದ 63 ವಾರ್ಡ್‌ಗಳ ವ್ಯಾಪ್ತಿಯಲ್ಲಿ ವರ್ಷಾರಂಭದಿಂದ ಕೇವಲ 9 ಡೆಂಘೀ ಪ್ರಕರಣಗಳಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣಗಳು ದೃಢಪಟ್ಟಿಲ್ಲ. ಆದರೆ, ಬೆಂಗಳೂರಿನ ಹಳೆಯ ಹಾಗೂ ಕೇಂದ್ರ ಭಾಗ ಎಂದು ಕರೆಯಲ್ಪಡುವ ಬಿಬಿಎಂಪಿ ವ್ಯಾಪ್ತಿಗೆ ಬರುವ 135 ವಾರ್ಡ್‌ಗಳಲ್ಲಿ ಒಂದೇ ತಿಂಗಳಲ್ಲಿ 200ಕ್ಕೂ ಮಂದಿಗೆ ಡೆಂಘೀ ಸೋಂಕಿದೆ.

ಜನವರಿಯಿಂದ ಇದುವರೆಗಿನ ಸೋಂಕಿತರ ಸಂಖ್ಯೆ 457ಕ್ಕೆ ಏರಿಕೆಯಾಗಿದೆ. ಈ ರೀತಿ ಪ್ರಕರಣ ಹೆಚ್ಚಳಕ್ಕೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಜಾಗೃತೆ ಕಾರ್ಯಕ್ರಮ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಹಾಗೂ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಅಂಶಗಳು ಕಾರಣವಿರಬಹುದು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸುತ್ತವೆ.

ಕಳೆದ ತಿಂಗಳವರೆಗೂ ಬಿಬಿಎಂಪಿ ಆಸ್ಪತ್ರೆಗಳಲ್ಲಿ ಮಲೇರಿಯಾ ಸೋಂಕು ಪತ್ತೆ ಮಾಡುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದ್ದು, ಈ ಕುರಿತು ಆರೋಗ್ಯ ಇಲಾಖೆ ಸಭೆ ನಡೆಸಿ, ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಈಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಜಾಗೃತಿ ಕಾರ್ಯಕ್ರಮ ಕೂಡ ಸೂಕ್ತ ಸಮಯದಲ್ಲಿ, ಪರಿಣಾಮಕಾರಿಯಾಗಿ ಆಗುತ್ತಿಲ್ಲ ಎಂಬ ಆರೋಪಗಳ ಕೇಳಿಬಂದಿವೆ.

ಜಿಲ್ಲಾ ಆರೋಗ್ಯ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಭಾಗದಲ್ಲಿ ಮನೆ ಮನೆ ಭೆಟಿ ಕಾರ್ಯಕ್ರಮ ನಡೆಸುತ್ತಿದ್ದು, ಕಿರಿಯ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು ಕಳೆದ ಎರಡು ತಿಂಗಳಿನಿಂತ ನಿತ್ಯ 20ರಿಂದ 25 ಮನೆಗಳಿಗೆ ತೆರಳಿ ಸಾಂಕ್ರಾಮಿಕ ರೋಗಗಳ ಕುತಿರು ಜಾಗೃತಿ ಮೂಡಿಸುತ್ತಿದ್ದಾರೆ.

ಅಲ್ಲಲ್ಲಿ ಜಾಗೃತಿ ಸಭೆ, ಶಿಬಿರ ನಡೆಸುತ್ತಿದ್ದಾರೆ. ಈ ಕೆಲಸವನ್ನು ಬಿಬಿಎಂಪಿ ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ಇನ್ನು ನಗರದಲ್ಲಿ 2017ಕ್ಕೆ ಹೋಲಿಕೆ ಮಾಡಿದರೆ 2018ರಲ್ಲಿ ಡೆಂಘೀ ಪ್ರಕರಣಗಳು ಹತೋಟಿಗೆ ಬಂದಿದ್ದವು. ಆದರೆ ಈ ಬಾರಿ ಬೇಸಿಗೆಯಲ್ಲೇ ಹೆಚ್ಚಾಗಿದ್ದು, ಇನ್ನು ಮಳೆ ಆರಂಭವಾಗಿರುವುದರಿಂದ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಆತಂಕ ಮೂಡಿದೆ.

ಹೀಗಾಗಿ, ಡೆಂಘೀ ಕುರಿತು ಇನ್ನಾದರೂ ಬಿಬಿಎಂಪಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕಿದೆ. ತಿಂಗಳಿಂದ ನಗರದಲ್ಲಿ ಮಳೆ ಆಗುತ್ತಿರುವ ಕಾರಣ ಡೆಂಘೀ ಪ್ರಕರಣಗಳು ಹೆಚ್ಚಿವೆ. ಬಿಬಿಎಂಪಿ ವ್ಯಾಪ್ತಿಯ 85 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಿರಿಯ ಆರೋಗ್ಯ ಸಹಾಯಕಿಯರು,

ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದು, ಜಾಗೃತಿ ವೇಳೆ ಜ್ವರ ಲಕ್ಷಣ ಉಳ್ಳವರ ರಕ್ತ ಪರೀಕ್ಷೆ ಕಳುಹಿಸುತ್ತಿದ್ದಾರೆ. ಇದರಿಂದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಾರ್ವಜನಿಕರು ಮನೆಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಕಂಡು ಬಂದರೆ ಸೊಳ್ಳೆ ನಾಶಕ ಬಳಸಬೇಕು ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹೇಳುತ್ತಾರೆ.

ಡೆಂಘೀ ಜಾಗೃತಿಗೆ ನರ್ಸಿಂಗ್‌ ವಿದ್ಯಾರ್ಥಿಗಳ ಬಳಕೆ: “ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಬಿಎಂಪಿ ವಲಯ ಹಾಗೂ ವಾರ್ಡ್‌ ವ್ಯಾಪ್ತಿಯ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳ ಸಹಕಾರ ಪಡೆಯಲಾಗುತ್ತಿದೆ.

ಕಾಲೇಜು ವಿದ್ಯಾರ್ಥಿಗಳು ತಂಡ ಮಾಡಿಕೊಂಡು ಒಂದು ತಿಂಗಳ ಕಾಲ ಆ ವಲಯ ವ್ಯಾಪ್ತಿಯ ಮನೆ ಮನೆಗೆ ತೆರಳಿ ಸೋಂಕಿನ ಲಕ್ಷಣ, ಸೋಂಕು ಬಾರದಂತೆ ತಡೆಯಲು ಅಗತ್ಯ ಕ್ರಮಗಳೇನು, ಸೊಳ್ಳೆ ಪರದೆ ಬಳಕೆ, ಔಷಧ ಸಿಂಪಡಣೆ ರೀತಿಯ ಸುರಕ್ಷತಾ ಅಂಶಗಳ ಬಗ್ಗೆ ತಿಳಿಸಲಿದ್ದಾರೆ,’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಮನೋರಂಜನ್‌ ಹೆಗಡೆ ತಿಳಿಸಿದರು.

ಡೆಂಘೀ ಜ್ವರದ ಲಕ್ಷಣಗಳು: ದಿಢೀರ್‌ ಜ್ವರ, ತಲೆನೋವು, ನೆಗಡಿ, ಗಂಟಲು ನೋವು, ವಾಂತಿ, ಹೊಟ್ಟೆ ನೋವು, ಮೈ-ಕೈ ನೋವು, ಅತಿಸಾರ ಮೊದಲ ಹಂತದ ಲಕ್ಷಣಗಳು. ಸೋಂಕು ಗಂಭೀರ ಹಂತ ತಲುಪಿದಾಗ ಕರುಳಿನಲ್ಲಿ ರಕ್ತಸ್ರಾವವಾಗುತ್ತದೆ. ಒಮ್ಮೆ ಡೆಂಘೀ ಬಂದವರಿಗೆ ಪುನಃ ಬಂದಾಗ ಅದರ ಪರಿಣಾಮ ಗಂಭೀರವಾಗುತ್ತದೆ ಎನ್ನುತ್ತಾರೆ ವೈದ್ಯರು.

ಮುಂಜಾಗ್ರತಾ ಕ್ರಮಗಳು: ಈಡಿಸ್‌ ಈಜಿಪ್ಟೆ ಎಂಬ ಸೊಳ್ಳೆ ಕಚ್ಚುವುದರಿಂದ ಡೆಂಘೀ ಜ್ವರ ಬರುತ್ತದೆ. ನಿಂತ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಡುವುದರಿಂದ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಪರದೆ ಅಳವಡಿಸಿ, ಸೊಳ್ಳೆ ನಾಶಕ ಔಷಧ ಬಳಸಬೇಕು.

ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸುವುದು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚುಳವನ್ನು ಭದ್ರವಾಗಿ ಮುಚ್ಚಬೇಕು. ಮನೆಯಲ್ಲಿ ಹೆಚ್ಚು ದಿನಗಳವರಗೆ ನೀರು ಸಂಗ್ರಹಿಸಬಾರದು. ಜ್ವರ ಕಾಣಿಸಿಕೊಂಡಾಗ ನಿರ್ಲಕ್ಷಿಸದೆ, ರಕ್ತ ಪರೀಕ್ಷೆ ಮಾಡಿಸುವುದು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು

ಡೆಂಘೀ ಕುರಿತು ಸಾಕಷ್ಟು ಸಭೆ ನಡೆಸಿದ್ದು, ಪ್ರಕರಣಗಳ ಹತೋಟಿಗೆ ಬಿಬಿಎಂಪಿಗೆ ಸೂಚಿಸಿದ್ದೇವೆ. ಸಾರ್ವಜನಿಕರೂ ಅಗತ್ಯ ಮುಂಜಾಗ್ರತೆ ವಹಿಸಬೇಕು. ಸೊಳ್ಳೆಯಿಂದ ದೂರವಿರಬೇಕು, ಜ್ವರದ ಲಕ್ಷಣ ಕಂಡುಬಂದರೆ ಶೀಘ್ರ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಬೇಕು.
-ಡಾ.ಶಿವರಾಜ್‌ ಸಜ್ಜನ್‌ ಶೆಟ್ಟಿ, ಜಂಟಿ ನಿರ್ದೇಶಕರು, ಸಾಂಕ್ರಾಮಿಕ ರೋಗ ನಿಯಂತ್ರಣ ವಿಭಾಗ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.