ಬನ್ನೇರುಘಟ್ಟ ಫೋರ್ಟಿಸ್ನಲ್ಲಿ ಡೆಂಘೀಗೆ ಯಶಸ್ವಿ ಚಿಕಿತ್ಸೆ
Team Udayavani, Aug 26, 2018, 12:26 PM IST
ಬೆಂಗಳೂರು: ಡೆಂಘೀ ಜ್ವರದಿಂದ (ಡೆಂಘೀ ಶಾಕ್ ಸಿಂಡ್ರೋಮ್) ಬಹು ಅಂಗ ವೈಫಲ್ಯಕ್ಕೆ ಒಳಗಾಗಿದ್ದ 13 ವರ್ಷದ ಬಾಲಕನಿಗೆ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ.
ಹಾಸನ ಜಿಲ್ಲಾ ಮೂಲದ ಮಾ. ಯೋಗೇಶ್ವರ್ ಮತ್ತು ಆತನ ತಂದೆ ಬಸವರಾಜ್ ಇಬ್ಬರೂ ಡೆಂಗ್ಯೂನಿಂದ ಬಳಲುತ್ತಿದ್ದರು. ಮಗನ ಸ್ಥಿತಿ ಗಂಭೀರವಾಗಿದ್ದರಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆಸ್ಪತ್ರೆಯ ಮಕ್ಕಳ ರೋಗಶಾಸ್ತ್ರ ಸಲಹಾತಜ್ಞ ಡಾ. ಯೋಗೇಶ್ ಗುಪ್ತಾ ಅವರ ನೇತೃತ್ವದ ತಂಡ ಡೆಂಗ್ಯೂ ಶಾಕ್ ಸಿಂಡ್ರೋಮ್ ಹಾಗೂ ಬಹು ಅಂಗ ಕಾರ್ಯಲೋಪವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ.
ಈ ಬಗ್ಗೆ ಮಕ್ಕಳ ರೋಗಶಾಸ್ತ್ರ ತಜ್ಞ ಡಾ. ಯೋಗೇಶ್ ಗುಪ್ತಾ ಮಾತನಾಡಿ, ಬಾಲಕ ಯೋಗೇಶ್ವರ್ ಬದುಕುಳಿಯುವ ಸಾಧ್ಯತೆ ಶೇ.10ಕ್ಕೂ ಕಡಿಮೆ ಇತ್ತು. ದೇಹದ ಐದು ಪ್ರಮುಖ ಅಂಗಗಳ ಪೈಕಿ ನಾಲ್ಕು ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿರಲಿಲ್ಲ. ಚಿಕಿತ್ಸೆ ನೀಡಿದ ತರುವಾಯ ಚೇತರಿಸಿಕೊಂಡರೂ ಆತನ ಮಿದುಳಿನಲ್ಲಿ ತೊಂದರೆ ಕಾಣಿಸಿಕೊಂಡಿತ್ತು.
ಮಿದುಳು ಕೆಲಸ ಮಾಡದೆ ಇರುವಂತಹ ಸಾಧ್ಯತೆ ಇತ್ತು. ಮಕ್ಕಳ ರೋಗಶಾಸ್ತ್ರ ತಜ್ಞ ಡಾ. ಕುಲದೀಪ್ ಪಿ ಅವರನ್ನೊಳಗೊಂಡ ವೈದ್ಯರ ತಂಡ ಹಾಗೂ ಸಿಬ್ಬಂದಿ ಪ್ರತಿ ಕ್ಷಣದಲ್ಲೂ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮಿದುಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲು ಆರಂಭಿಸಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ