‘ದಾಸೋಹ ಕಂಟ್ರೋಲ್ ರೂಂ’ ಕಾರ್ಮಿಕರಿಗೆ ಆಹಾರ ಒದಗಿಸುವ ವ್ಯವಸ್ಥೆ: ಡಾ. ಅಶ್ವತ್ಥನಾರಾಯಣ
ಕಾರ್ಮಿಕ ಮತ್ತು ಶ್ರಮಿಕ ವರ್ಗದ ಸಮಸ್ಯೆಗಳಿಗೆ 155214 ಸಹಾಯವಾಣಿಯನ್ನು ಸಂಪರ್ಕಿಸಬಹುದು...
Team Udayavani, Apr 3, 2020, 7:56 PM IST
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಬಡ ಕಾರ್ಮಿಕರಿಗೆ ಆಹಾರ ಒದಗಿಸುವ ‘ದಾಸೋಹ’ ಕಾರ್ಯಕ್ರಮ ತಂತ್ರಜ್ಞಾನದ ಉತ್ತಮ ಬಳಕೆಗೆ ಉದಾಹರಣೆ. ಇಂಥ ಪಾರದರ್ಶಕ ವ್ಯವಸ್ಥೆ ಎಲ್ಲ ಇಲಾಖೆಗಳಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಾರ್ತಾ ಭವನದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ನೂತನವಾಗಿ ರೂಪಿಸಲಾಗಿರುವ ‘ದಾಸೋಹ ಕಂಟ್ರೋಲ್ ರೂಂ’ಗೆ ಶುಕ್ರವಾರ ಚಾಲನೆ ನೀಡಿದ ನಂತರ ಡಾ. ಅಶ್ವತ್ಥನಾರಾಯಣ ಮಾಧ್ಯಮಗಳ ಜತೆ ಮಾತನಾಡಿದರು.
“ಕೋವಿಡ್ 19 ವೈರಸ್ ತಂದೊಡ್ಡಿರುವ ಸಂಕಷ್ಟದ ಸಮಯದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡಿದ್ದಾರೆ. ಸ್ವಿಗ್ಗಿ ಹಾಗೂ ವಾರ್ತಾ ಇಲಾಖೆಯ ಮೂಲ ಸೌಕರ್ಯ ಬಳಸಿಕೊಂಡು ಬಡ ಕೂಲಿ ಕಾರ್ಮಿಕರು ಇರುವಲ್ಲಿಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಆಹಾರ ಪಡೆದವರ ಸಂಖ್ಯೆ ಹಾಗೂ ಅದರ ಲೆಕ್ಕ ಎಲ್ಲವನ್ನೂ ಪಾರದರ್ಶಕವಾಗಿ ಜನರ ಮುಂದಿಡುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ. ಈ ಕೆಲಸ ಬೇರೆ ಇಲಾಖೆಗಳಿಗೂ ಮಾದರಿ,”ಎಂದು ಸಚಿವರು ಹೇಳಿದರು.
“ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ತೋಟಗಾರಿಕೆ ಸಚಿವ ನಾರಾಯಣ ಗೌಡ ಅವರ ಸಹಕಾರದಿಂದ ಈ ದಾಸೋಹ ಕಂಟ್ರೋಲ್ ರೂಂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ವಿಶ್ವಾಸ ಇದೆ. ಎಲ್ಲ ಸಚಿವರು ಈ ಸವಾಲನ್ನು ಅತ್ಯಂತ ಸಮರ್ಥವಾಗಿ ಎದುರಿಸುತ್ತಿದ್ದಾರೆ.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಹಾರ ತಲುಪಿಸುವ ಕಾಯಕ ಒಂದರೆಡು ದಿನಕ್ಕೆ ಸೀಮಿತ ಅಲ್ಲ. ಲಾಕ್ಡೌನ್ ಅವಧಿ ಮುಗಿಯುವರೆಗೂ ನಿರಂತರವಾಗಿ ಆಗಬೇಕಾದ ಕೆಲಸ. ಅಸಹಾಯಕರು, ನಿರಾಶ್ರಿತರು ಹಾಗೂ ಬಡ ಕೂಲಿ ಕಾರ್ಮಿಕರಿಗೆ ಆಹಾರದ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗುವುದು’ ಎಂದು ಅವರು ಹೇಳಿದರು.
ಕಾರ್ಮಿಕ ಸಹಾಯವಾಣಿ
ಕಾರ್ಮಿಕರ ಅಗತ್ಯಗಳನ್ನು ಪೂರೈಸಲು ಮತ್ತು ಆಹಾರ ಸರಬರಾಜು ಮಾಡುವ ನಿಟ್ಟಿನಲ್ಲಿ ಈ ವಾರ್ರೂಂ ನೆರವಾಗಲಿದೆ. ಕಾರ್ಮಿಕ ಮತ್ತು ಶ್ರಮಿಕ ವರ್ಗದ ಸಮಸ್ಯೆಗಳಿಗೆ 155214 ಸಹಾಯವಾಣಿಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ