ದೇಸಿ ಸಂಸ್ಕೃತಿ ತುಳಿವ ಸಂಚು ಖಂಡನೀಯ 


Team Udayavani, Nov 22, 2017, 11:55 AM IST

krishnabyre.jpg

ಯಲಹಂಕ: ಇತ್ತೀಚೆಗೆ ಭಾರತೀಯತೆ ಎಂಬ ಪರಿಕಲ್ಪನೆಯನ್ನು ಸೀಮಿತ ಚೌಕಟ್ಟಿನೊಳಗೆ ಬಂಧಿಸಿ, ಅದಕ್ಕೆ ವ್ಯವಸ್ಥಿತ ರೀತಿಯಲ್ಲಿ ಪ್ರಚಾರ ನೀಡಿ, ಪ್ರಾದೇಶಿಕ ಹಾಗೂ ದೇಸಿ ಸಂಸ್ಕೃತಿಗಳನ್ನು ತುಳಿಯುವ ಸಂಚು ಉತ್ತಮ ಬೆಳವಣಿಗೆಯಲ್ಲ ಎಂದು ಕೃಷಿ ಸಚಿವ  ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಹಾಗೂ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳು ಆಯೋಜಿಸಿದ್ದ 62ನೇ ಕನ್ನಡ ರಾಜ್ಯೋತ್ಸವ ಹಾಗೂ ದೇಸೀ ದಿನದ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಮಾತನಾಡುತಾ ಭಾರತೀಯತೆ ಅನ್ನುವುದು ಎಲ್ಲಾ ಪ್ರಾದೇಶಿಕ ಭಾಷೆ, ಸಂಸ್ಕೃತಿ, ಉಪಸಂಸ್ಕೃತಿ, ಉಪಭಾಷೆಗಳು ಎಲ್ಲವನ್ನೂ ಒಳಗೊಳ್ಳುವಂಥದ್ದು ಎಂದರು.

ಭಾರತೀಯತೆಯನ್ನು ನಾವು ಸಂಕುಚಿತಗೊಳಿಸಿದರೆ, ಒಂದು ನಿರ್ದಿಷ್ಟ ಚೌಕಟ್ಟಿಗೆ ಅಳವಡಿಸಿದರೆ ಅದು ನಿಜವಾದ ಅರ್ಥದ ಭಾರತೀಯತೆ ಆಗುವುದಿಲ್ಲ. ಎಲ್ಲ ವೈವಿಧ್ಯತೆಗಳನ್ನೊಳಗೊಂಡಾಗ ಮಾತ್ರ. ಅದರ  ಸೊಗಡುಗಳನ್ನು ತನ್ನೊಡಲೊಳಗೆ ತುಂಬಿಸಿಕೊಂಡಾಗ ಮಾತ್ರ ಭಾರತೀಯತೆ ಮೈತಳೆಯುತ್ತದೆ. ನಾವು, ಕನ್ನಡಿಗರು, ಕನ್ನಡ ಭಾಷೆಯನ್ನಾಡುವುದಕ್ಕೆ, ನಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸುವುದಕ್ಕೆ ಹಿಂಜರಿಯಬಾರದು ಎಂದರು.

ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಎನ್‌.ಆರ್‌. ಶೆಟ್ಟಿ ಮಾತನಾಡಿ  ಬೆಂಗಳೂರು ಜಾಗತಿಕ ನಗರವಾಗಿ ಬೆಳೆದು ನಿಂತಿರುವ ಈ ಸಂದರ್ಭದಲ್ಲಿ ನಮ್ಮ ಸರ್ಕಾರ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನಗಳನ್ನಳವಡಿಸಿ ನಿರ್ಮಿಸಬೇಕು.

ಈ ನಿಟ್ಟಿನಲ್ಲಿ ಸೂಕ್ತ ಸಂಶೋಧನೆ ಹಾಗೂ ತಂತ್ರಜ್ಞಾನಗಳ ಅಭಿವೃದ್ಧಿಗೆ ನಮ್ಮಲ್ಲಿರುವ ಪ್ರಸಿದ್ಧ ಎಂಜಿನಿಯರಿಂಗ್‌ ಕಾಲೇಜ್‌ಗಳ ಪ್ರತಿಭಾವಂತರನ್ನು ಹಾಗೂ ಪ್ರಯೋಗಾಲಯಗಳನ್ನು ಬಳಸಿಕೊಳ್ಳಬೇಕು ಎಂದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಎಚ್‌.ಸಿ. ನಾಗರಾಜ್‌  ಪ್ರಾಧ್ಯಾಪಕಿ ಆಯೇಷ ಸಿದ್ದಿ ಹಾಜರಿದ್ದರು. ಕಾರ್ಯಕ್ರಮದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.