![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನಿಷೇಧಿತ ಮಾದಕ ವಸ್ತು ಪತ್ತೆ
Team Udayavani, Apr 19, 2018, 12:35 PM IST
![blore-2.jpg](https://www.udayavani.com/wp-content/uploads/2018/04/19/blore-2-456x465.jpg)
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 6.45 ಕೋಟಿ ರೂ. ಮೌಲ್ಯದ 12.9 ಕೆ.ಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬುಧವಾರ ಚೆನ್ನೈನಿಂದ ಮಲೇಷಿಯಾ ಹಾಗೂ ಕೌಲಾ ಲಂಪುರಕ್ಕೆ ಹೋಗುವ ಕೆಲ ಪಾರ್ಸಲ್ಗಳು ವಿಮಾನ ನಿಲ್ದಾಣ ಕಾರ್ಗೊ ಕೋರಿಯರ್ ವಿಭಾಗಕ್ಕೆ ಬಂದಿತ್ತು. ಈ ಪಾರ್ಸಲ್ಗಳ ಮೇಲೆ “ಪಾಮ್ ಶುಗರ್’ ಹಾಗೂ ಇದರ ಮೌಲ್ಯ 6 ಸಾವಿರ ಎಂದು ಬರೆಯಲಾಗಿತ್ತು. ಇದರಿಂದ ಅನುಮಾನಗೊಂಡ ವಿಮಾನ ನಿಲ್ದಾಣದ ಕೋರಿಯರ್ ವಿಭಾಗದ ಅಧಿಕಾರಿಗಳು, ಪರಿಶೀಲಿಸಿದಾಗ ನಿಷೇಧಿತ ಮೆಥಾಕ್ಯೂಲೋನ್ ಎಂಬ ಮಾದಕ ವಸ್ತು ಪತ್ತೆಯಾಗಿದೆ. ಇದರ ಮೌಲ್ಯ 6.45 ಕೋಟಿ ಎಂದು ಅಂದಾಜಿಸಲಾಗಿದೆ.
ಚೆನ್ನೈ ಮೂಲದ ವ್ಯಕ್ತಿ ಫೆಡೆಕ್ಸ್ ಕೋರಿಯರ್ ಮೂಲಕ ಚೆನ್ನೈನಿಂದ ಬೆಂಗಳೂರು ಮಾರ್ಗವಾಗಿ ಮಲೇಷಿಯಾ ಹಾಗೂ ಕೌಲಾಂಪುರಕ್ಕೆ ಈ ಮಾದಕ ವಸ್ತು ಕಳುಹಿಸಲು ಸಂಚು ರೂಪಿಸಿದ್ದ. ಈ ಸಂಬಂಧ ಆ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹೇಗೆ ರಫ್ತು?: ನಿಷೇಧಿತ ಮಾದಕ ವಸ್ತು ರವಾನಿಸಲು ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಪಾಮ್
ಶುಗರ್ ಎಂಬ ಪ್ಯಾಕೆಟ್ನಲ್ಲಿ ನಿಷೇಧಿತ ಮೆಥಾಕ್ಯೂಲೋನ್ ಅನ್ನು ಸಣ್ಣ-ಸಣ್ಣ ಪ್ಲಾಸ್ಟಿಕ್ ಕವರ್ಗಳಲ್ಲಿ ತುಂಬಿ ಪಾಮ್ ಶುಗರ್ ಜತೆ ಪ್ಯಾಕ್ ಮಾಡಿದ್ದರು.
ಎರಡು ಪ್ರಕರಣ, ಒಂದೇ ಕೊರಿಯರ್ ಕಂಪನಿ: ಜನವರಿ ಮೊದಲ ವಾರದಲ್ಲಿ ಭಾರತೀಯ ಸಿಹಿ ತಿಂಡಿಗಳ ಪ್ಯಾಕೆಟ್ಗಳಲ್ಲಿ ಕೆಟಾಮಿನ್ ಎಂಬ ಮಾದಕ ವಸ್ತು ಇಟ್ಟು ಮಲೇಷಿಯಾ ಹಾಗೂ ಕೌಲಾಂಪುರಕ್ಕೆ ಕಳುಹಿಸಲು ಆರೋಪಿಗಳ ಸಂಚು ರೂಪಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಒಂದು ಕೋಟಿ ರೂ. ಮೌಲ್ಯದ ಕೆಟಾಮಿನ್ ವಶಪಡಿಸಿಕೊಂಡಿದ್ದರು. ಮತ್ತೂಂದು
ಪ್ರಮುಖ ವಿಷಯವೆಂದರೆ, ಈ ಎರಡು ಪ್ರಕರಣದಲ್ಲೂ ಚೆನ್ನೈನ ಫೆಡೆಕ್ಸ್ ಎಂಬ ಕೋರಿಯರ್ ಮೂಲಕವೇ ರಫ್ತು ಆಗುತ್ತಿದ್ದು, ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.