ಪಾನಮತ್ತ ಸ್ಕೂಲ್ ಬಸ್ ಚಾಲಕನ ಬಂಧನ
Team Udayavani, Jul 23, 2017, 11:20 AM IST
ಬೆಂಗಳೂರು: ಕುಡಿದು ಶಾಲಾ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಚಾಲಕನೊಬ್ಬನನ್ನು ಎಚ್ಎಎಲ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಾರತ್ತ್ಹಳ್ಳಿ ನಿವಾಸಿ ಮುಕುಂದ್ (30) ಬಂಧಿತ. ಶಾಲಾ ವಾಹನ ವಶಕ್ಕೆ ಪಡೆದ ಪೊಲೀಸರು ಮಕ್ಕಳಿಗೆ ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅವರನ್ನೆಲ್ಲ ಮನೆಗೆ ಕಳುಹಿಸಿದ್ದಾರೆ.
ಮುಕುಂದ್ ಮಾರತ್ಹಳ್ಳಿಯ ಮುನೇಕೊಳಲುನಲ್ಲಿರುವ ವಾಗೆವಿ ವಿಲಾಸ್ ಶಾಲಾ ವಾಹನ ಚಾಲಕನಾಗಿದ್ದು, ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಸುಮಾರು 25 ವಿದ್ಯಾರ್ಥಿಗಳನ್ನು ಮನೆಗೆ ಬಿಡಲು ಶಾಲಾ ವಾಹನದಲ್ಲಿ ಕರೆದೊಯ್ಯುತ್ತಿದ್ದ. ಮಧ್ಯಾಹ್ನ 1.30ರ ಸುಮಾರಿಗೆ ಯಮಲೂರು ಜಂಕ್ಷನ್ ಬಳಿ ಎಚ್ಎಎಲ್ ಸಂಚಾರ ಠಾಣೆ ಇನ್ಸ್ಪೆಕ್ಟರ್ ಮೊಹಮ್ಮದ್ ಅವರು ತಮ್ಮ ಸಿಬ್ಬಂದಿ ಜತೆ ವಾಹನ ತಪಾಸಣೆ ನಡೆಸುತ್ತಿದ್ದರು.
ಈ ವೇಳೆ ಮಾರತ್ತಹಳ್ಳಿ ಮಾರ್ಗವಾಗಿ ಮುಕುಂದ್ ವೇಗವಾಗಿ ಶಾಲಾ ವಾಹನ ಓಡಿಸಿಕೊಂಡು ಬಂದ್ದಿದ. ಈ ಹಿನ್ನೆಲೆಯಲ್ಲಿ ವಾಹನ ತಡೆದ ಪೊಲೀಸರು ಚಾಲಕನನ್ನು ಪ್ರಶ್ನಿಸಿದ್ದರು. ಅಲ್ಲದೆ, ಆತನ ವರ್ತನೆಯಿಂದ ಅನುಮಾನಗೊಂಡು ಅಲ್ಕೋ ಮೀಟರ್ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?