ಕಿರುತೆರೆ ನಟನ ಬಂಧನ
Team Udayavani, Apr 4, 2018, 10:55 AM IST
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮುಂಬೈ ಮೂಲದ ರೂಪದರ್ಶಿ ಜತೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಿರುತೆರೆ ನಟನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚನ್ನಸಂದ್ರದ ನಿವಾಸಿ ಕಿರಣ್ ಕುಮಾರ್ (25) ಬಂಧಿತ.
ಮುಂಬೈನಲ್ಲಿ ಶೂಟಿಂಗ್ ವೇಳೆ ಆರೋಪಿ ಕಿರಣ್ ಕುಮಾರ್ ಸಂತ್ರಸ್ತೆಯನ್ನು ಪರಿಚಯಸಿಕೊಂಡು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ. ಬಳಿಕ ಬೆಂಗಳೂರಿನಲ್ಲಿ ಕೆಲ ಸಮಯ ಲಿವಿಂಗ್ ಟುಗೆದರ್ ಸಂಬಂಧದಡಿ ಇಬ್ಬರು ಒಟ್ಟಿಗೆ ಇದ್ದರು. ನಂತರ ಕೆಲಸದ ಮೇಲೆ ಸಂತ್ರಸ್ತೆ ಮುಂಬೈಗೆ ತೆರಳಿದ್ದಳು. ಈ ಮಧ್ಯೆ ಮಾ.28ರಂದು ವಾಪಸ್ ಬಂದ ಸಂತ್ರಸ್ತೆಯನ್ನು ಆರೋಪಿ ಚಿನ್ನಸಂದ್ರದಲ್ಲಿರುವ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಅನಂತರ ಮಾ.29ರಂದು ರಾತ್ರಿ ಕಾರಿನಲ್ಲಿ ಹೋಗುವಾಗ ಸಂತ್ರಸ್ಥೆ ಮದುವೆ ವಿಚಾರ ಪ್ರಸ್ತಾಪಿಸಿದಾಗ ಕಿರಣ್ ಮದುವೆಗೆ ನಿರಾಕರಿಸಿದ್ದು, ಇಬ್ಬರ ನಡುವೆ ಜಗಳವಾಗಿದೆ. ಒಂದು ಹಂತದಲ್ಲಿ ಕಿರಣ್ ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾನೆ. ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ