ಎಂಟು ತಿಂಗಳ ಬಳಿಕ ಕೊಲೆ ಆರೋಪಿಗಳ ಬಂಧನ


Team Udayavani, Nov 28, 2021, 1:06 PM IST

ಎಂಟು ತಿಂಗಳ ಬಳಿಕ ಕೊಲೆ ಆರೋಪಿಗಳ ಬಂಧನ

ಬೆಂಗಳೂರು: 8 ತಿಂಗಳ ಹಿಂದೆ ಆಸ್ತಿ ವಿಚಾರವಾಗಿ ಮಹಿಳೆಯೊಬ್ಬರ ಕೊಲೆಗೈದಿದ್ದ ಇಬ್ಬರು ಆರೋಪಿ ಗಳನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ.

ಮಂತ್ರಾಲಯ ಮೂಲದ ನೂರ್‌ ಅಹಮ್ಮದ್‌ (43), ಸತ್ಯ (48) ಬಂಧಿತರು. ಆರೋಪಿಗಳು ತಮ್ಮ ಸಹಚರರ ಜತೆ ಸೇರಿ ರಾಜಾಜಿನಗರ ನಿವಾಸಿ ಸೀತಾ ಎಂಬಾಕೆಯನ್ನು 8 ತಿಂಗಳ ಹಿಂದೆ ಕೊಲೆಗೈ ದಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿ ಕುಮಾರ್‌ ಮತ್ತು ಮೆಂಟಲ್‌ ರಘು ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ವಿ

ಧವೆ ಸೀತಾ ತನ್ನ ಸಹೋದರ ಸಂಬಂಧಿ ಮನೆ ಯಲ್ಲಿ ವಾಸವಿದ್ದರು. ಮಾ.25 ರಂದು ಹೊರಗೆ ಹೋಗಿ ಬರುವುದಾಗಿ ಹೇಳಿದ್ದ ಸೀತಾ ನಿಗೂಢ ವಾಗಿ ನಾಪತ್ತೆಯಾಗಿದ್ದರು. ಮಂತ್ರಾಲಯ ಮೂಲದ ಸಹೋದರ ವೆಂಕಟೇಶ್‌ ಆಚಾರ್‌ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದೂರು ದಾಖಲಿಸಿ ದ್ದರು. ಪೊಲೀಸರು ಸಿಡಿಆರ್‌ ಪರಿಶೀಲಿಸಿದಾಗ ಕೊನೆಯದಾಗಿ ಸೀತಾ ಅವರ ಮೊಬೈಲ್‌ಗೆ ಆರೋಪಿಗಳಾದ ನೂರ್‌ ಅಹಮ್ಮದ್‌, ಸತ್ಯ, ಕುಮಾರ್‌, ಮೆಂಟಲ್‌ ರಘು ಕರೆ ಮಾಹಿತಿ ಸಿಕ್ಕಿತ್ತು. ಆ ಹಿನ್ನೆಲೆಯಲ್ಲಿ ಸೀತಾ ಅವರ ಸಹೋದರ ವೆಂಕಟೇಶ್‌ ಅವರನ್ನು ವಿಚಾರಿಸಿದಾಗ ಆರೋಪಿಗಳು ಹಾಗೂ ಅವರ ಸ್ನೇಹಿತರು, ತನಗೆ ಪ್ರಾಣ ಬೆದರಿಕೆ ಹಾಕಿ ಮಂತ್ರಾಲಯದಲ್ಲಿರುವ ಜಮೀನನ್ನು ಅವರ ಹೆಸರಿಗೆ ಬರೆಸಿಕೊಂಡಿದ್ದರು ಎಂದರು. ಮಂತ್ರಾಲಯಕ್ಕೆ ತೆರಳಿ ನೂರ್‌ ಅಹಮ್ಮದ್‌ನ್ನು ವಶಕ್ಕೆ ಪಡೆದು ವಿಚಾರಿಸಿದ್ದರು.

“ವೆಂಕಟೇಶ್‌ ಆಚಾರ್‌ಗೆ ಸೇರಿದ ಆಸ್ತಿಯಲ್ಲಿ 2 ಎಕರೆ ಜಮೀನನ್ನು 53 ಲಕ್ಷ ರೂ.ಗೆ ತಾನೂ, ಉದಯ್‌ ಕುಮಾರ್‌ ರೆಡ್ಡಿ, ಅಮೀನ್‌ ಬಾಷಾ ಖರೀದಿಸಿ ಮಾ.8ರಂದು ಸೀತಾಗೆ ಗೊತ್ತಿಲ್ಲದಂತೆ ರಿಜಿಸ್ಟ್ರಾರ್‌ ಮಾಡಿಸಿಕೊಂಡಿದ್ದೆವು. ಜಮೀನನ್ನು ಸೂಗೂರಿನ ಆನಂದ್‌ಗೆ 80 ಲಕ್ಷ ರೂ.ಗೆ ಮಾರಲು ಒಪ್ಪಂದ ವಾಗಿತ್ತು. ಆದರೆ, ಜಮೀನನ್ನು ರಿಜಿಸ್ಟ್ರರ್‌ ವೇಳೆ ಸೀತಾ ಸಹಿ ಬೇಕೆಂದಾಗ, ಸಹಿ ಪಡೆಯುವ ಕುಮಾರ್‌ಗೆ ಒಪ್ಪಿಸಿದ್ದೆವು ಎಂದು ತಿಳಿಸಿದ್ದಾರೆ.

ಸೈನೆಡ್‌ ಕೊಟ್ಟು ಕೊಲೆ : ಮಾ.25ರಂದು ಆರೋಪಿಗಳು ಚಿನ್ನಾಭರಣ ಖರೀದಿಸುವ ನೆಪದಲ್ಲಿ ಸೀತಾ ಅವರನ್ನು ಕರೆ ದೊಯ್ದು, ಮಾರ್ಗ ಮಧ್ಯೆ ಆಸ್ತಿ ವಿಚಾರ ಕೇಳಿದಾಗ ಆಕೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿ ಆಕೆಯನ್ನು ಕೊಲೆಗೈಯಲು ನಿರ್ಧರಿಸಲಾಗಿತ್ತು. ನಂತರ ಕುಣಿಗಲ್‌ ಮಾರ್ಗದಿಂದ ಹಾಸನಕ್ಕೆ ಕರೆ ದೊಯ್ದು, ಅಲ್ಲಿಂದ ಹೊಸಪೇಟೆಗೆ ಹೋಗುವ ಮಾರ್ಗಮಧ್ಯೆ ತಲೆ ನೋವಿನ ಮಾತ್ರೆ ಎಂದು ಸೈನೆಡ್‌ ಕೊಟ್ಟು ಹತ್ಯೆಗೈದಿದ್ದರು. ನಂತರ ಹುಲಿಗೆಮ್ಮ ದೇವಿ ನೀರಿನ ಕಾಲುವಿಗೆ ಮೃತದೇಹ ಎಸೆದು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.