ಲ್ಯಾಪ್ಟಾಪ್ ಕದ್ದ ಆರೋಪಿಗಳ ಬಂಧನ
Team Udayavani, Jul 23, 2018, 12:06 PM IST
ಬೆಂಗಳೂರು: ಬೆಳ್ಳಂದೂರಿನ ಹೊರ ವರ್ತುಲ ರಸ್ತೆಯಲ್ಲಿರುವ ಸಾಫ್ಟ್ವೇರ್ ಕಂಪನಿಯೊಂದಕ್ಕೆ ಕಿಟಕಿ ಸರಳಿನ ಮೂಲಕ ನುಗ್ಗಿ 10 ಲ್ಯಾಪ್ ಟಾಪ್ ಕಳವು ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪುರ ಮೂಲದ ಕೂಮ್ ಬಿನ್ ಪಾವ್ (20), ಮಾಂಗ್ ಮಿನ್ ಲೂನ್ (21) ಹಾಗೂ ಲ್ಯಾಪ್ಟಾಪ್ ಖರೀದಿ ಮಾಡಿದ್ದ ಬೆಳ್ಳಂದೂರಿನ ಜಾನಮ್ (25), ಸುನೀಲ್ (25) ಬಂಧಿತರು.
ಎವಿಎಸ್ ಇಡಿಯು ಸೊಲ್ಯೂಷನ್ಸ್ ಹೆಸರಿನ ಸಾಫ್ಟ್ವೇರ್ ಕಂಪನಿಯಲ್ಲಿ 10 ಲ್ಯಾಪ್ಲಾಪ್ಗ್ಳು ಕಳುವಾಗಿದ್ದ ಸಂಬಂಧ ಕಂಪನಿ ಮಾಲೀಕ ವಿವೇಕ್ ಸೋಮಾನಿ ನೀಡಿದ ದೂರಿನ ಅನ್ವಯ ತನಿಖೆ ನಡೆಸಿದ ಬೆಳ್ಳಂದೂರು ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸ್ಥಳೀಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಕೂಮ್ ಬಿನ್ ಪಾವ್ ಮತ್ತು ಮಾಂಗ್ ಮಿನ್ ಲೂನ್, ಹಣದ ಆಸೆಗಾಗಿ ಸಮೀಪದಲ್ಲಿಯೇ ಇರುವ ಕಂಪನಿಯಲ್ಲಿ ಲ್ಯಾಪ್ಟಾಪ್ ಕಳವು ಮಾಡಲು ಸಂಚು ರೂಪಿಸಿದ್ದರು.
ಅದರಂತೆ, ಜು.9ರಂದು ಕಂಪನಿ ಸಿಬ್ಬಂದಿ ಕೆಲಸ ಮುಗಿಸಿಕೊಂಡು ಹೋದ ಬಳಿಕ ಸೆಕ್ಯೂರಿಟಿ ಬಾಗಿಲು ಹಾಕುವುದನ್ನು ನೋಡಿಕೊಂಡಿದ್ದರು. ನಂತರ ಮಧ್ಯರಾತ್ರಿ 1.30ರ ಸುಮಾರಿಗೆ 4ನೇ ಮಹಡಿಯಲ್ಲಿರುವ ಕಿಟಕಿ ಮೂಲಕ ಇಬ್ಬರೂ ಕಂಪನಿ ಒಳಗೆ ನುಗ್ಗಿ ಲ್ಯಾಪ್ಟಾಪ್ ಕದ್ದು ತಂದಿದ್ದರು. ಬಳಿಕ ಒಂದು ಲ್ಯಾಪ್ಟಾಪ್ಗೆ 2 ಸಾವಿರ ರೂ. ಬೆಲೆಗೆ ಜಾನಮ್ ಮತ್ತು ಸುನೀಲ್ಗೆ ಮಾರಾಟ ಮಾಡಿದ್ದರು.
ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಕಂಪನಿಯ ಕಟ್ಟಡದಲ್ಲಿದ್ದ ಸಿಸಿಟವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿಗಳ ಗುರುತು ಪತ್ತೆಯಾಗಿತ್ತು. ಈ ಸುಳಿವು ಆಧರಿಸಿ ನಾಲ್ವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ