ಸೈಕಲ್ ರವಿ ಸಹಚರರ ಬಂಧನ
Team Udayavani, Jul 14, 2018, 12:15 PM IST
ಬೆಂಗಳೂರು: ರೌಡಿಯೊಬ್ಬನ ಹತ್ಯೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿಶೀಟರ್ ಸೈಕಲ್ ರವಿಯ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರೌಡಿಶೀಟರ್ಗಳಾದ ನವೀನ್ ಕುಮಾರ್ ಅಲಿಯಾಸ್ ಹ್ಯಾಂಡಿ ನವೀನ್, ನರಸಿಂಹಮೂರ್ತಿ ಅಲಿಯಾಸ್ ಬೇಕರಿ ಮೂರ್ತಿ ಹಾಗೂ ಲಕ್ಷ್ಮೀರಮಣ ಅಲಿಯಾಸ್ ರಮಣ ಬಂಧಿತರು. ಆರೋಪಿಗಳು ಇತ್ತೀಚೆಗೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸೆರೆಯಾಗಿದ್ದ ಸೈಕಲ್ ರವಿಯ ಸಹಚರರಾಗಿದ್ದು, ಈತನ ಸೂಚನೆ ಮೇರೆಗೆ ಕೆಲ ಉದ್ಯಮಿಗಳು,
ರಿಯಲ್ ಎಸ್ಟೇಟ್ ಏಜೆಂಟರ್ಗಳು, ಗಣ್ಯರನ್ನು ಅಪಹರಿಸಿ ದರೋಡೆ ಮಾಡುತ್ತಿದ್ದರು. ಅಲ್ಲದೆ ರವಿಯ ಮೀಟರ್ ಬಡ್ಡಿ ದಂಧೆ ಉಸ್ತುವಾರಿ ಹೊತ್ತಿದ್ದರು. ಕೆಲ ಉದ್ಯಮಿಗಳಿಂದ ನಿರಂತರಾಗಿ ಹಫ್ತಾ ವಸೂಲಿ ಮಾಡುತ್ತಿದ್ದರು. ಒಂದು ವೇಳೆ ಹಫ್ತಾ ಕೊಡದಿದ್ದರೆ ಕ್ರಿಕೆಟ್ ಬ್ಯಾಟ್ಗೆ ಮುಳ್ಳುತಂತಿ ಸುತ್ತಿ ಹಲ್ಲೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 12ರಂದು ಆರೋಪಿಗಳಾದ ರೌಡಿಶೀಟರ್ ರಾಘವೇಂದ್ರ ಅಲಿಯಾಸ್ ಬೇಕರಿ ರಘು ಹಾಗೂ ಇತರರು ರೌಡಿ ಶೀಟರ್ ರಿಜ್ವಾನ್ ಅಲಿಯಾಸ್ ಕುಳ್ಳ ಎಂಬಾತನನ್ನು ಹತ್ಯೆಗೈಯಲು ಮಾರಕಾಸ್ತ್ರಗಳನ್ನು ಹಿಡಿದು ಆವಲಹಳ್ಳಿಯ ಗ್ಲಾಸ್ ಫ್ಯಾಕ್ಟರಿ ಬಳಿ ಕಾಯುತ್ತಿದ್ದರು.
ಈ ಕುರಿತು ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ತಲೆಮರೆಸಿಕೊಂಡಿರುವ ರಾಘವೇಂದ್ರ, ಜಯಂತ್ ಹಾಗೂ ಉದಯ್ ಎಂಬುವರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ