ಬಜೆಟ್ಗೆ ದೇವೇಗೌಡರ ಸಲಹೆ ಪಡೆದ ಮೇಯರ್
Team Udayavani, Mar 19, 2017, 11:37 AM IST
ಬೆಂಗಳೂರು: ಬಿಬಿಎಂಪಿ ಬಜೆಟ್ ಅನ್ನು ಮಾರ್ಚ್ 25 ರಂದು ಮಂಡಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಮೇಯರ್ ಜಿ.ಪದ್ಮಾವತಿ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ನಿಯೋಗ ಶನಿವಾರ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರನ್ನು ಭೇಟಿ ಮಾಡಿ ಸಲಹೆ ಪಡೆಯಿತು.
ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತ ಇರುವುದರಿಂದ ಬೆಂಗಳೂರು ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿಯೋಗವು ದೇವೇಗೌಡರ ಜತೆ ಸಮಾಲೋಚನೆ ನಡೆಸಿತು. ಜನಸಾಮಾನ್ಯರು ಮತ್ತು ನಗರದಲ್ಲಿನ ಬಡವರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಘೋಷಿಸುವಂತೆ ದೇವೇಗೌಡರು ಮೇಯರ್ ನೇತೃತ್ವದ ನಿಯೋಗಕ್ಕೆ ಸೂಚಿಸಿದರು.
ಬೆಂಗಳೂರು ಅಭಿವೃದ್ಧಿಯೊಂದಿಗೆ ನಗರದ ಪರಿಸರ ಮತ್ತು ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವಂತೆ ಮತ್ತು ಪಾಲಿಕೆಯಲ್ಲಿ ಪಾರದರ್ಶಕ ಆಡಳಿತ ನೀಡಲು ಹೆಚ್ಚಿನ ಮಹತ್ವ ನೀಡುವಂತೆಯೂ ತಿಳಿಸಿದರು. ಬಜೆಟ್ ಅಂತಿಮಗೊಳಿಸುವ ಮೊದಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ಪಡೆಯುವಂತೆಯೂ ತಿಳಿಸಿದರು ಎನ್ನಲಾಗಿದೆ.
ಭೇಟಿ ನಂತರ ಮಾತನಾಡಿದ ಮೇಯರ್ ಜಿ.ಪದ್ಮಾವತಿ, ಬಿಬಿಎಂಪಿ ಬಜೆಟ್ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರ ಸಲಹೆಗಳನ್ನು ಪಡೆಯಲಾಗಿದೆ. ಅವರು ನಗರದ ಜನತೆಯ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಸೂಚಿಸಿದ್ದಾರೆ ಎಂದು ಹೇಳಿದರು. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಗುಣಶೇಖರ್, ಉಪಮೇಯರ್ ಎಂ.ಆನಂದ್, ಬಿಬಿಎಂಪಿ ಜೆಡಿಎಸ್ ಪಕ್ಷದ ನಾಯಕಿ ಆರ್.ರಮೀಳಾ ಉಮಾಶಂಕರ್, ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಭದ್ರೇಗೌಡ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ