9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ


Team Udayavani, Dec 7, 2022, 4:23 PM IST

9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ

ಬೆಂಗಳೂರು: ನಗರದಲ್ಲಿ ಪದೇ ಪದೆ ಸೃಷ್ಟಿಯಾಗುತ್ತಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ಈ ಎಲ್ಲದಕ್ಕೂ ಪರಿಹಾರ ನೀಡುವ ಸಲುವಾಗಿ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ 9 ಸಾವಿರಕ್ಕೂ ಹೆಚ್ಚಿನ ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ ರೂಪಿಸುತ್ತಿದೆ.

ಪ್ರಸಕ್ತ ಸಾಲಿನ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ ಬಿಬಿಎಂಪಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆಯನ್ನೂ ನೀಡಿದೆ. ಅದರಲ್ಲಿ 700ಕೋಟಿ ರೂ. ಮೊತ್ತದಲ್ಲಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮೀಸಲಿರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಅದರ ಜತೆಗೆ 135 ಕೋಟಿ ರೂ.ಗಳನ್ನು ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ ರಸ್ತೆಗಳಅಭಿವೃದ್ಧಿಗೆ ನಿಗದಿ ಮಾಡಲಾಗಿದೆ. ಹೀಗೆ ರಸ್ತೆಮೂಲಸೌಕರ್ಯ ಅಡಿಯಲ್ಲಿ ನಿಗದಿ ಮಾಡಿರುವ700 ಕೋಟಿ ರೂ. ಮೊತ್ತದ ಅನುದಾನದಲ್ಲಿ9,569 ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಚರ್ಚೆ ನಡೆಸಿದೆ.

ಬಿಬಿಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗದಿಂದ ರೂಪಿಸಲಾಗುತ್ತಿರುವ ಯೋಜನೆಯಂತೆ ನಗರದ ರಸ್ತೆಗಳನ್ನು 2 ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಅದರ ಪ್ರಕಾರ ರಸ್ತೆ ಗುಂಡಿಗಳುಸೃಷ್ಟಿಯಾಗುವುದು, ಪದೇ ಪದೆ ರಸ್ತೆ ಅಗೆದು ಹಾಳು ಮಾಡುವುದನ್ನು ತಪ್ಪಿಸಲು ವೈಟ್‌ಟಾಪಿಂಗ್‌ ಮಾದರಿಯಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳೇ ಹೆಚ್ಚಾಗಿವೆ. ಅದರ ಜತೆಗೆವಾರ್ಡ್‌ ರಸ್ತೆಗಳು ಸೇರಿ ಕೆಲ ಮುಖ್ಯ, ಉಪಮುಖ್ಯ ರಸ್ತೆಗಳನ್ನು ಬಿಟುಮಿನ್‌ ಮಿಕ್ಸ ಬಳಸಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ.

2,177 ಕಿ.ಮೀ. ಉದ್ದದ ರಸ್ತೆಗಳು: ಸದ್ಯ ಬಿಬಿ ಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗ ಸಿದ್ಧಪಡಿಸಿರುವ ಪಟ್ಟಿಯಂತೆ 371 ಕಿ.ಮೀ. ಉದ್ದದ 2,564 ರಸ್ತೆಗಳನ್ನು ವೈಟ್‌ಟಾಪಿಂಗ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದಂತೆ 1806.39 ಕಿ.ಮೀ. ಉದ್ದದ 7,005 ರಸ್ತೆಗಳನ್ನು ಮರುಡಾಂಬಾರೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಒಟ್ಟಾರೆ 2,177.39 ಕಿ.ಮೀ. ಉದ್ದದ 9,569 ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಟ್ಟಿ ಮಾಡಿಕೊಳ್ಳಲಾಗಿದೆ.

ದಾಸರಹಳ್ಳಿಯ ರಸ್ತೆಗಳ ಪರಿಗಣನೆಯಿಲ್ಲ: ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವಲಯವಾರು ಪಟ್ಟಿಯಲ್ಲಿ ದಾಸರಹಳ್ಳಿ ವಲಯ ವ್ಯಾಪ್ತಿಯ ಯಾವುದೇ ರಸ್ತೆಯನ್ನು ಪರಿಗಣಿಸಿಲ್ಲ. ಆದರೆ, ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿ ದಾಸರಹಳ್ಳಿಯ 47.34 ಕಿ.ಮೀ. ಉದ್ದದ 11 ರಸ್ತೆಗಳನ್ನು ಮರುಡಾಂಬರೀಕರಣ ಮಾಡಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಉಳಿದಂತೆ ಪಶ್ಚಿಮವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು 359.75 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ರೀತಿ ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿಯೇ 8 ವಲಯಗಳ 477.19 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಅದರಲ್ಲಿ 1.15 ಕಿ.ಮೀ. ಉದ್ದದ ರಸ್ತೆ ಮಾತ್ರವೈಟ್‌ಟಾಪಿಂಗ್‌ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ.

ಟೆಂಡರ್‌ಶ್ಯೂರ್‌ಗೆ 135 ಕೋಟಿ ರೂ. :

ವೈಟ್‌ಟಾಪಿಂಗ್‌ ಮತ್ತು ಡಾಂಬಾರು ರಸ್ತೆಗಳ ಅಭಿವೃದ್ಧಿ ಜತೆಗೆ ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ರಸ್ತೆ ಅಭಿವೃದ್ಧಿಗೆ ಬಿಬಿಎಂಪಿ 135.70ಕೋಟಿ ರೂ. ವ್ಯಯಿಸುತ್ತಿದೆ. ಅದರಲ್ಲಿ 85ಕೋಟಿ ರೂ. ವೆಚ್ಚದಲ್ಲಿ 5 ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಅಡಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಉಳಿದ 50.70 ಕೋಟಿ ರೂ.ಗಳಲ್ಲಿಜಂಕ್ಷನ್‌ಗಳನ್ನು ಟೆಂಡರ್‌ಶ್ಯೂರ್‌ನಿಯಮಾವಳಿಯಂತೆ ಅಭಿವೃದ್ಧಿ ಮತ್ತು ಸುಂದರೀಕರಣ ಮಾಡಲು ನಿರ್ಧರಿಸಲಾಗಿದೆ.

 

-ಗಿರೀಶ್‌ ಗರಗ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.