9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ


Team Udayavani, Dec 7, 2022, 4:23 PM IST

9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ

ಬೆಂಗಳೂರು: ನಗರದಲ್ಲಿ ಪದೇ ಪದೆ ಸೃಷ್ಟಿಯಾಗುತ್ತಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ಈ ಎಲ್ಲದಕ್ಕೂ ಪರಿಹಾರ ನೀಡುವ ಸಲುವಾಗಿ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ 9 ಸಾವಿರಕ್ಕೂ ಹೆಚ್ಚಿನ ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ ರೂಪಿಸುತ್ತಿದೆ.

ಪ್ರಸಕ್ತ ಸಾಲಿನ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ ಬಿಬಿಎಂಪಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆಯನ್ನೂ ನೀಡಿದೆ. ಅದರಲ್ಲಿ 700ಕೋಟಿ ರೂ. ಮೊತ್ತದಲ್ಲಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮೀಸಲಿರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಅದರ ಜತೆಗೆ 135 ಕೋಟಿ ರೂ.ಗಳನ್ನು ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ ರಸ್ತೆಗಳಅಭಿವೃದ್ಧಿಗೆ ನಿಗದಿ ಮಾಡಲಾಗಿದೆ. ಹೀಗೆ ರಸ್ತೆಮೂಲಸೌಕರ್ಯ ಅಡಿಯಲ್ಲಿ ನಿಗದಿ ಮಾಡಿರುವ700 ಕೋಟಿ ರೂ. ಮೊತ್ತದ ಅನುದಾನದಲ್ಲಿ9,569 ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಚರ್ಚೆ ನಡೆಸಿದೆ.

ಬಿಬಿಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗದಿಂದ ರೂಪಿಸಲಾಗುತ್ತಿರುವ ಯೋಜನೆಯಂತೆ ನಗರದ ರಸ್ತೆಗಳನ್ನು 2 ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಅದರ ಪ್ರಕಾರ ರಸ್ತೆ ಗುಂಡಿಗಳುಸೃಷ್ಟಿಯಾಗುವುದು, ಪದೇ ಪದೆ ರಸ್ತೆ ಅಗೆದು ಹಾಳು ಮಾಡುವುದನ್ನು ತಪ್ಪಿಸಲು ವೈಟ್‌ಟಾಪಿಂಗ್‌ ಮಾದರಿಯಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳೇ ಹೆಚ್ಚಾಗಿವೆ. ಅದರ ಜತೆಗೆವಾರ್ಡ್‌ ರಸ್ತೆಗಳು ಸೇರಿ ಕೆಲ ಮುಖ್ಯ, ಉಪಮುಖ್ಯ ರಸ್ತೆಗಳನ್ನು ಬಿಟುಮಿನ್‌ ಮಿಕ್ಸ ಬಳಸಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ.

2,177 ಕಿ.ಮೀ. ಉದ್ದದ ರಸ್ತೆಗಳು: ಸದ್ಯ ಬಿಬಿ ಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗ ಸಿದ್ಧಪಡಿಸಿರುವ ಪಟ್ಟಿಯಂತೆ 371 ಕಿ.ಮೀ. ಉದ್ದದ 2,564 ರಸ್ತೆಗಳನ್ನು ವೈಟ್‌ಟಾಪಿಂಗ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದಂತೆ 1806.39 ಕಿ.ಮೀ. ಉದ್ದದ 7,005 ರಸ್ತೆಗಳನ್ನು ಮರುಡಾಂಬಾರೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಒಟ್ಟಾರೆ 2,177.39 ಕಿ.ಮೀ. ಉದ್ದದ 9,569 ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಟ್ಟಿ ಮಾಡಿಕೊಳ್ಳಲಾಗಿದೆ.

ದಾಸರಹಳ್ಳಿಯ ರಸ್ತೆಗಳ ಪರಿಗಣನೆಯಿಲ್ಲ: ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವಲಯವಾರು ಪಟ್ಟಿಯಲ್ಲಿ ದಾಸರಹಳ್ಳಿ ವಲಯ ವ್ಯಾಪ್ತಿಯ ಯಾವುದೇ ರಸ್ತೆಯನ್ನು ಪರಿಗಣಿಸಿಲ್ಲ. ಆದರೆ, ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿ ದಾಸರಹಳ್ಳಿಯ 47.34 ಕಿ.ಮೀ. ಉದ್ದದ 11 ರಸ್ತೆಗಳನ್ನು ಮರುಡಾಂಬರೀಕರಣ ಮಾಡಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಉಳಿದಂತೆ ಪಶ್ಚಿಮವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು 359.75 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ರೀತಿ ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿಯೇ 8 ವಲಯಗಳ 477.19 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಅದರಲ್ಲಿ 1.15 ಕಿ.ಮೀ. ಉದ್ದದ ರಸ್ತೆ ಮಾತ್ರವೈಟ್‌ಟಾಪಿಂಗ್‌ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ.

ಟೆಂಡರ್‌ಶ್ಯೂರ್‌ಗೆ 135 ಕೋಟಿ ರೂ. :

ವೈಟ್‌ಟಾಪಿಂಗ್‌ ಮತ್ತು ಡಾಂಬಾರು ರಸ್ತೆಗಳ ಅಭಿವೃದ್ಧಿ ಜತೆಗೆ ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ರಸ್ತೆ ಅಭಿವೃದ್ಧಿಗೆ ಬಿಬಿಎಂಪಿ 135.70ಕೋಟಿ ರೂ. ವ್ಯಯಿಸುತ್ತಿದೆ. ಅದರಲ್ಲಿ 85ಕೋಟಿ ರೂ. ವೆಚ್ಚದಲ್ಲಿ 5 ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಅಡಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಉಳಿದ 50.70 ಕೋಟಿ ರೂ.ಗಳಲ್ಲಿಜಂಕ್ಷನ್‌ಗಳನ್ನು ಟೆಂಡರ್‌ಶ್ಯೂರ್‌ನಿಯಮಾವಳಿಯಂತೆ ಅಭಿವೃದ್ಧಿ ಮತ್ತು ಸುಂದರೀಕರಣ ಮಾಡಲು ನಿರ್ಧರಿಸಲಾಗಿದೆ.

 

-ಗಿರೀಶ್‌ ಗರಗ

ಟಾಪ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Lekhan Pandit appointed to Ayurveda Board

ಆಯುರ್ವೇದ ಮಂಡಳಿಗೆ ಡಾ.ಲೇಖನ ಪಂಡಿತ್‌ ನೇಮಕ

tdy-6

ಗಾಂಜಾ ಕೊಡುವಂತೆ ಪೀಡಿಸಿದ್ದಕ್ಕೆ ಯುವಕನ ಕೊಲೆ

tdy-5

ಸ್ನೇಹಿತನ ಕೈಕಾಲು ಕಟ್ಟಿ ಬಾಯಿಗೆ ಟೇಪ್‌ ಸುತ್ತಿ ಹತ್ಯೆ

tdy-4

ನೇಪಾಳಕ್ಕೆ ತೆರಳಿ ಕನ್ನಗ್ಯಾಂಗ್‌ ಬಂಧಿಸಿದ ಖಾಕಿ

rape

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರಿಂದ ಯುವತಿಯ ಗ್ಯಾಂಗ್ ರೇಪ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ