ಗಣೇಶನಿಗೆ ರೂಪ ಕೊಟ್ಟ ಭಕ್ತರು


Team Udayavani, Aug 26, 2019, 3:09 AM IST

ganeshani

ಬೆಂಗಳೂರು: ಪಿಒಪಿ (ಪ್ಲಾಸ್ಟರ್‌ ಆಫ್ ಪ್ಯಾರಿಸ್‌) ಬಿಟ್ಟು ಮಣ್ಣಿನ ಗಣೇಶನನ್ನು ತರುವುದು ಇತ್ತೀಚಿನ ದಿನಗಳಲ್ಲಿ ಟ್ರೆಂಡ್‌ ಆಗುತ್ತಿದೆ. ಈ ಮಧ್ಯೆ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ನಿಮ್ಮ ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶನನ್ನು ನೀವೇ ತಯಾರಿಸುವ ಪ್ರಯೋಗ ಭಾನುವಾರ ನಗರದಲ್ಲಿ ನಡೆಯಿತು. ಇದಕ್ಕಾಗಿ ನ್ಯಾಷನಲ್‌ ಕಾಲೇಜು ಮೈದಾನ ಸಾಕ್ಷಿಯಾಯಿತು.

ಬೃಹತ್‌ ಮೈದಾನದಲ್ಲಿ ಏಕಕಾಲದಲ್ಲಿ ಸುಮಾರು ಎರಡು-ಮೂರು ಸಾವಿರ ಜನ ಒಂದೇ ವೇದಿಕೆಯಲ್ಲಿ ಬಂದು, ಗಣೇಶ ಮೂರ್ತಿಗಳನ್ನು ತಯಾರಿಸಿದರು. ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು, ಮಕ್ಕಳು, ಮಹಿಳೆಯರೆಲ್ಲರೂ ಭಾಗವಹಿಸಿ ಗಮನಸೆಳೆದರು. ಈ ಮೂಲಕ ಗಿನ್ನಿಸ್‌ ದಾಖಲೆ ಬರೆಯಿತು. ಬೆಂಗಳೂರು ಗಣೇಶ ಉತ್ಸವ (ಬಿಜಿಯು) ಸಮಿತಿ ಈ ಕಾರ್ಯಕ್ರಮ ಆಯೋಜಿಸಿತ್ತು.

ಕಳೆದ 57 ವರ್ಷಗಳಿಂದ ಗಣೇಶ ಉತ್ಸವವನ್ನು ನೆರವೇರಿಸುತ್ತಾ ಬಂದಿರುವ ಬೆಂಗಳೂರು ಗಣೇಶ ಉತ್ಸವ ಸಮಿತಿ, 2010ರಿಂದ ಪ್ಲಾಸ್ಟಿಕ್‌ ಮುಕ್ತ ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸುತ್ತಿದೆ. 57ನೇ ವರ್ಷದ ಈ ಹಬ್ಬವನ್ನು ವಿಭಿನ್ನವಾಗಿ ಆಚರಿಸಲು ಉದ್ದೇಶಿಸಲಾಗಿತ್ತು. ಯಾವುದೇ ವಯೋಮಿತಿಯಿಲ್ಲದೆ ಒಂದೇ ಸ್ಥಳದಲ್ಲಿ ಎರಡರಿಂದ ಮೂರು ಸಾವಿರ ಜನ ಉಚಿತವಾಗಿ ಮಣ್ಣು ಪಡೆದು ಒಂದೇ ಕಡೆ ಮೂರ್ತಿಗಳನ್ನು ತಯಾರಿಸಲು ವೇದಿಕೆ ಕಲ್ಪಿಸಲಾಗಿತ್ತು.

ಈ ರೀತಿಯ ಗಣೇಶ ಹಬ್ಬ ಆಚರಣೆ ದೇಶದಲ್ಲೇ ಇದೇ ಮೊದಲ ಬಾರಿಗೆ ನಡೆಯುತಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಗಣೇಶ ಮೂರ್ತಿ ತಯಾರಿಸಲು ಆಸಕ್ತಿ ತೋರಿದರು. ಆಸಕ್ತರಿಗೆ ಸ್ಥಳದಲ್ಲೇ ಪ್ರಾಥಮಿಕ ತರಬೇತಿ ನೀಡಲಾಯಿತು. ಇನ್ನು ಕೆಲವರು ಗಣೇಶ ತಯಾರಿಸುವ ವಿಧಾನವನ್ನು ಯ್ಯೂಟೂಬ್‌ನಿಂದ ಮಾಹಿತಿ ಪಡೆದು, ತಯಾರಿಸಿದರು. ಇದೊಂದು ವಿನೂತನ ಪ್ರಯೋಗ ಎಂದು ಸಮಿತಿ ನಿರ್ದೇಶಕ ಎಸ್‌.ಎಂ. ನಂದೀಶ್‌ ತಿಳಿಸಿದರು.

ಪರಿಸರ ಸ್ನೇಹಿ ಜತೆಗೆ ಇದು ನಾಡಿನ ಸಂಸ್ಕೃತಿ, ಕಲೆ ಮತ್ತು ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನವೂ ಆಗಿದೆ. ಇಲ್ಲಿ ಮಣ್ಣಿನ ಬೀಜದ ಉಂಡೆ (ಕ್ಲೇ ಸೀಡ್‌ ಬಾಲ್‌ ಗಣೇಶ) ತಯಾರಿಸಲು ಅವಕಾಶ ನೀಡಲಾಗಿತ್ತು. ಇದೇ ರೀತಿಯ ಮತ್ತೂಂದು ಪ್ರಯತ್ನ ಶೀಘ್ರದಲ್ಲೇ ವಿದ್ಯಾರಣ್ಯ ಯುವಕ ಸಂಘ ಕೂಡ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಗಣೇಶ ಮೂರ್ತಿ ಮರುಬಳಕೆ: 2010ರಲ್ಲಿ ಪರಿಸರ ಸ್ನೇಹಿ ಗಣೇಶನನ್ನು ಬಳಸಲು ಮುಂದಾದ ಬೆಂಗಳೂರು ಗಣೇಶ ಉತ್ಸವ ಸಮಿತಿ, ಅಲ್ಲಿಂದ ಈವರೆಗೆ 9 ವರ್ಷಗಳ ಕಾಲ ಒಂದೇ ಗಣೇಶನನ್ನು ಮರು ಬಳಕೆ ಮಾಡುತ್ತಿದೆ. ಇದೇ ಮೂರ್ತಿಯನ್ನು ಮುಂದಿನ 20ವರ್ಷಗಳ ಕಾಲ ಬಳಸಲು ತೀರ್ಮಾನಿಸಲಾಗಿದೆ.

ಕಳೆದ ಒಂಬತ್ತು ವರ್ಷಗಳಿಂದ ಹಳೆಯ ದೊಡ್ಡ ಗಣಪತಿ ಮೂರ್ತಿ ಜತೆಗೆ ಮಣ್ಣಿನ ಚಿಕ್ಕ ಮೂರ್ತಿಯನ್ನು ಕೂರಿಸಲಾಗುತಿದ್ದು, 11 ದಿನಗಳ ಪೂಜೆ ಬಳಿಕ ಮಣ್ಣಿನ ಗಣೇಶ ಮೂರ್ತಿಯನ್ನು ಸಾಂಕೇತಿಕವಾಗಿ ನೀರಿನ ಟ್ಯಾಂಕರ್‌ಗಳಲ್ಲಿ ಮುಳುಗಿಸಲಾಗುತ್ತಿದೆ. ನಂತರ ಟ್ಯಾಂಕರ್‌ ನೀರನ್ನು ಗಿಡಗಳಿಗೆ ಸಿಂಪಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದೆ.

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.