ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿನ್ನು ರೋಗಪತ್ತೆ ಪರೀಕ್ಷೆಗಳು ಉಚಿತ


Team Udayavani, Oct 20, 2018, 6:50 AM IST

govt-hospital-s.jpg

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ವಿವಿಧ 58 ಬಗೆಯ “ರೋಗಪತ್ತೆ ಪರೀಕ್ಷೆ ಸೌಲಭ್ಯ’ ಉಚಿತವಾಗಿ ಲಭ್ಯವಾಗುತ್ತಿವೆ. ಈ ಹಿಂದೆ ಕೇವಲ ಬಿಪಿಎಲ್‌ ಕುಟುಂಬಗಳಿಗೆ ಮಾತ್ರ ಸೀಮಿತವಾಗಿದ್ದ ಈ ಸೌಲಭ್ಯವನ್ನು ರಾಷ್ಟ್ರೀಯ ಆರೋಗ್ಯ ಮಿಷನ್‌ನ ಅಡಿಯಲ್ಲಿ ಎಲ್ಲಾ ವರ್ಗದ ಜನರಿಗೂ ವಿಸ್ತರಿಸಲಾಗಿದೆ.

ಈ ಹಿಂದೆ ಜಿಲ್ಲಾಸ್ಪತ್ರೆಗಳಲ್ಲಿ ಬಿಪಿಎಲ್‌ ಕುಟುಂಬ ಸದಸ್ಯರಿಗೆ ಒಂದಿಷ್ಟು ರೋಗ ಪತ್ತೆ ಪರೀಕ್ಷೆಗಳು ಉಚಿತವಾಗಿದ್ದವು. ಇನ್ನು ಕೆಲವು ಪರೀಕ್ಷೆಗಳಿಗೆ ಶೇ.50ರಷ್ಟು ಶುಲ್ಕ ಪಾವತಿಸಬೇಕಿತ್ತು. ಪ್ರಸ್ತುತ ಅದರ ವ್ಯಾಪ್ತಿಯನ್ನು 2018 -19 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಮಿಷನ್‌ ಯೋಜನೆಯ “ಉಚಿತ ರೋಗಪತ್ತೆ ಪರೀಕ್ಷೆಗಳು’ ಎಂಬ ಕಾರ್ಯಕ್ರಮದಡಿ ಎಲ್ಲಾ ವರ್ಗದ ಜನರಿಗೂ ಸಂಪೂರ್ಣ ಉಚಿತ ರೋಗಪತ್ತೆ ಪರೀಕ್ಷೆ ಸೇವೆ ನೀಡುವಂತೆ ವಿಸ್ತರಣೆ ಮಾಡಿ ರಾಜ್ಯ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಯೋಜನೆಯ ಪಟ್ಟಿಯಲ್ಲಿರುವ 58 ರೋಗಪತ್ತೆ ಪರೀಕ್ಷೆಗಳಲ್ಲಿ ತಮ್ಮಲ್ಲಿ ಲಭ್ಯವಿರುವ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಬೇಕಿದೆ. ಕಳೆದ ವಾರದ ಮಧ್ಯಭಾಗದಿಂದಲೇ ರಾಜ್ಯದ ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಆದೇಶ ಪಾಲನೆಯಾಗುತ್ತಿದ್ದು, ಈಗಾಗಲೇ ರೋಗಿಗಳು ಉಚಿತ ಸೇವೆಯನ್ನು ಪಡೆಯುತ್ತಿದ್ದಾರೆ.

ಯಾವ್ಯಾವ ಪರೀಕ್ಷೆಗಳು ಉಚಿತ:
ದುಬಾರಿ ಶುಲ್ಕದ ಎಂಆರ್‌ಐ, ಸಿಟಿ ಸ್ಕ್ಯಾನ್‌, ಥೈರಾಡ್‌ ಪರೀಕ್ಷೆ ಸೇರಿದಂತೆ ಹೃದ್ರೋಗ ಪರೀಕ್ಷೆಗಳಾದ ಇಸಿಜಿ ಹಾಗೂ ಎಕೋ, ಯಕೃತ್‌, ಕಿಡ್ನಿ ತಪಾಸಣಾ ಪರೀಕ್ಷೆ,  ಕ್ಷ-ಕಿರಣ, ರಕ್ತ ಗುಂಪಿನ ಪರೀಕ್ಷೆಯಿಂದ ಹಿಡಿದು ಎಲ್ಲಾ ಬಗೆಯ ರಕ್ತ ಪರೀಕ್ಷೆಗಳು, ಮೂತ್ರ ಪರೀಕ್ಷೆ,  ಮಲೇರಿಯಾ, ಡೆಂಗ್ಯೂ ಪರೀಕ್ಷೆಗಳು, ಅಲ್ಟಾಸೌಂಟ್‌ ಸ್ಕ್ಯಾನಿಂಗ್‌, ಕೊಬ್ಬಿನಾಂಶ ಪರೀಕ್ಷೆಗಳು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಎಲ್ಲಾ 58 ಪರೀಕ್ಷೆಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. ಈಗಾಗಲೇ ಈ ಉಚಿತ ಪರೀಕ್ಷೆ ಸೇವೆಯನ್ನು ನಮ್ಮ ಆಸ್ಪತ್ರೆಯಲ್ಲಿ ಅ.08 ರಿಂದಲೇ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆ ಅಧೀಕ್ಷಕ ಡಾ.ಭಾನುಮೂರ್ತಿ ತಿಳಿಸಿದರು.

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸಂಯುಕ್ತಾಶ್ರಯದಲ್ಲಿ ಈ ಯೋಚನೆ ಜಾರಿಗೆ ಬಂದಿದ್ದು, ರಾಜ್ಯ ಸರ್ಕಾರದ 42 ಜಿಲ್ಲಾ ಮಟ್ಟದ ಆಸ್ಪತ್ರೆಗಳು, 146 ತಾಲೂಕು ಮಟ್ಟದ ಆಸ್ಪತ್ರೆಗಳು, 2508 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 204 ಸಾಮುದಾಯ ಆರೋಗ್ಯ ಕೇಂದ್ರಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. ಪ್ರಸ್ತುತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ 58 ರೋಗಗಳ ಪರೀಕ್ಷೆಗೆ ಪ್ರಯೋಗಾಲಯಗಳ ಸೌಲಭ್ಯವಿಲ್ಲ. ಆದರೆ, ಆಯಾ ಹಂತದ ಆಸ್ಪತ್ರೆಗಳಲ್ಲಿ ಯಾವ್ಯಾವ ಪರೀಕ್ಷೆಗಳನ್ನು ಮಾಡಲು ಸೌಲಭ್ಯವಿದೆಯೋ ಅವುಗಳೆಲ್ಲವನ್ನು ಉಚಿತವಾಗಿ ಮಾಡುವಂತೆ ಆದೇಶ ನೀಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್‌ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್‌ ಅಡಿ ಈ ವಿಶೇಷ ಕಾರ್ಯಕ್ರಮವನ್ನು ಆರಂಭಿಸಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸಹಾಯಕವಾಗಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಯ ಪ್ರಯೋಗಾಲಯಗಳಲ್ಲಿ ಲಭ್ಯವಿರುವ ಎಲ್ಲಾ ರೀತಿಯ ರೋಗಪತ್ತೆ ಪರೀಕ್ಷೆಗಳನ್ನು ಉಚಿತವಾಗಿ ಮಾಡುವಂತೆ ಕಳೆದ ವಾರ ಆದೇಶ ನೀಡಲಾಗಿದೆ.
– ಸ್ವಾತಂತ್ರಕುಮಾರ್‌ ಬಣಕಾರ್‌, ಉಪನಿರ್ದೇಶಕರು. ರಕ್ತಕೋಶ.

ಈ ಕಾರ್ಯಕ್ರಮದಡಿ ರಕ್ತದ ಗುಂಪಿನ ಪರೀಕ್ಷೆಯಿಂದ ಹಿಡಿದು ಸಿಟಿ, ಎಂಆರ್‌ಐ ಸ್ಕ್ಯಾನ್‌ವರೆಗೂ ಎಲ್ಲಾ ವಿಧದ ಪರೀಕ್ಷೆಗಳು ಉಚಿತವಾಗಿ ಮಾಡಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಗಳಲ್ಲಿ ಯಾವ ಯಾವ ರೋಗ ಪತ್ತೆಗೆ ಪ್ರಯೋಗಾಲಯಗಳ ಸೌಲಭ್ಯವಿದಯೋ ಅಲ್ಲಿ ಉಚಿತ ಸೇವೆ ಸಿಗಲಿದೆ. ಮುಂದಿನ ದಿನಗಳಲ್ಲಿ ಎಲ್ಲಾ 58 ರೋಗಗಳ ಪ್ರಯೋಗಾಲಯಗಳನ್ನು ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ.
– ರೇಣುಕಾ, ಉಪನಿರ್ದೇಶಕರು ಉಚಿತ ರೋಗ ಪತ್ತೆ ಪರೀಕ್ಷೆಗಳ ಕಾರ್ಯಕ್ರಮ.

ಉಚಿತ ಯೋಜನೆಯ ಮಾಹಿತಿಯೇ ಜನಕ್ಕಿಲ್ಲ.
ಕಳೆದ ವಾರವೇ ಈ ಉಚಿತ ರೋಗಪತ್ತೆ ಕಾರ್ಯಕ್ರಮಕ್ಕೆ ಇಲಾಖೆ ಆದೇಶಿಸಿದ್ದರೂ ಕೂಡ ಈ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಇಲ್ಲ. ಯಾವುದೇ ಮಾಹಿತಿ ಫ‌ಲಕಗಳಾಗಲಿ ಅಥವಾ ಸುತ್ತೋಲೆಗಳಾಗಲಿ ಆಸ್ಪತ್ರೆಗಳಲ್ಲಿ ಕಾಣುತ್ತಿಲ್ಲ. ಹೀಗಾಗಿ, ಅನಗತ್ಯ ಶುಲ್ಕ ವಸೂಲಿಯಾಗುವ ಸಾಧ್ಯತೆ ಅಥವಾ ಹೇಗಿದ್ದರೂ ಹಣ ನೀಡಬೇಕು ಎಂದು ಖಾಸಗಿ ಪ್ರಯೋಗಾಲಯ ಮೊರೆಹೋಗುತ್ತಿದ್ದಾರೆ. ಆದ್ದರಿಂದ ಇಲಾಖೆಯೂ ಈ ಜನಸ್ನೇಹಿ ಕಾರ್ಯಕ್ರಮದ ಮಾಹಿತಿಯನ್ನು ಜನರಿಗೆ ತಿಳಿಸುವತ್ತ ಕ್ರಮವಹಿಸಬೇಕಿದೆ.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.