ಕೊಕ್ಕೆ ಹಾಕುವ ಮನಸ್ಥಿತಿಯಿಂದ ಹೊರ ಬನ್ನಿ


Team Udayavani, May 27, 2018, 6:30 AM IST

26bnp-1.jpg

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಸಚಿವಾಲಯದ ನೌಕರರಿಗೆ ಕ್ಲಾಸ್‌ ತೆಗೆದುಕೊಂಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, “ಉತ್ತಮ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಬಹುಮುಖ್ಯ. ಅಧಿಕಾರಿ ನೌಕರರು ಕೊಕ್ಕೆ ಹಾಕುವು ಮನಸ್ಥಿತಿಯಿಂದ ಹೊರಬರಬೇಕು. ಕಡತಗಳ ವಿಲೇವಾರಿ ತ್ವರಿತವಾಗಿ ಆಗಬೇಕೆಂದು ತಾಕೀತು ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶನಿವಾರ ಸಚಿವಾಲಯ ಪತ್ರಾಂಕಿತ ಅಧಿಕಾರಿಗಳ ಸಂಘದ ವಜ್ರ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಅಧಿಕಾರಿ-ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಬೇಕು. ಡ್ಯುಟಿ ವೇಳೆ ಮೊಬೈಲ್‌ ಫೋನ್‌ಗಳನ್ನು ಪಕ್ಕಕ್ಕಿಡಬೇಕು’ ಎಂದು ಖಡಕ್‌ ಆಗಿ ಹೇಳಿದರು.

ಜನರಿಗೆ ನೋವು ಕೊಡಲು ನೀವು (ನೌಕರರು) ಸರ್ಕಾರಿ ನೌಕರರಾಗಿ ನೇಮಕ ಆಗಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ದೇವರು ಈ ಜವಾಬ್ದಾರಿಯನ್ನು ನಿಮಗೆ ನೀಡಿದ್ದಾನೆ. ಆದರೆ, ಕಡತಗಳಿಗೆ ಕೊಕ್ಕೆ ಹಾಕಿ, ಜನರಿಗೆ ತೊಂದರೆ ಕೊಡಬೇ ಕೆಂಬ ಆಲೋಚನೆ ನಿಮ್ಮಲ್ಲಿ ಯಾಕೆ ಬರುತ್ತದೆ ಗೊತ್ತಿಲ್ಲ. ನಿಮ್ಮ ಹಂತದಲ್ಲೇ ವಿಲೇವಾರಿ ಆಗ
ಬೇಕಾದ ಎಷ್ಟೋ ಕಡತಗಳು ನನ್ನ ಬಳಿ ಬರುತ್ತವೆ.

ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಕೈಗೊಳ್ಳುವಲ್ಲಿ ನೀವು ಹಿಂದೆಬಿದ್ದಿದ್ದೀರಿ. ಕೊಕ್ಕೆ ಹಾಕುವ ಪ್ರವೃತ್ತಿ ಬಿಡಬೇಕು’ ಎಂದು ತಾಕೀತು ಮಾಡಿದರು.

ನೀವು ಅದೃಷ್ಟವಂತರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜನರ ನಿರೀಕ್ಷೆಗಳು ತುಂಬಾ ಇವೆ. ಅವುಗಳನ್ನು ಈಡೇರಿಸುವ ಮೂಲಕ ಉತ್ತಮ ಆಡಳಿತ ನೀಡುವುದರಲ್ಲಿ ಸರ್ಕಾರಿ ನೌಕರರ ಪಾತ್ರ ದೊಡ್ಡದು. 6.25 ಕೋಟಿ ಜನರಲ್ಲಿ ಕೆಲವೇ ಲಕ್ಷ ಜನರಿಗೆ ಸರ್ಕಾರಿ ನೌಕರಿ ಸಿಕ್ಕಿದೆ. ಉತ್ತರ ಪ್ರದೇಶದಲ್ಲಿ ಪಿ.ಎಚ್‌ಡಿ, ಎಂಎ, ಎಂμಲ್‌ ಪೂರೈಸಿದವರೆಲ್ಲಾ ಕಾನ್‌ಸ್ಟೆàಬಲ್‌ ಹುದ್ದೆಗೆ ಭರ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ನೀವು ಅದೃಷ್ಟವಂತರು ಎಂದು ಸೂಚ್ಯವಾಗಿ ಹೇಳಿದರು.

“ನಾನು ನಿಮಗೆ ಕ್ಲಾಸ್‌ ತೆಗೆದುಕೊಳ್ಳಲು ಬಂದಿಲ್ಲ. ಆದರೆ, ಇದೊಂದು ಅವಕಾಶ ಸಿಕ್ಕಿದ್ದರಿಂದ ನಿಮಗೆ ಹೇಳುತ್ತಿದ್ದೇನೆ’ ಎಂದೂ ಸ್ಪಷ್ಟಪಡಿಸಿದ ಕೆ. ರತ್ನಪ್ರಭಾ,ಮೊಬೈಲ್‌ ಫೋನ್‌ ದೊಡ್ಡ ಅಡ್ಡಿಯಾಗಿದೆ. ಕೆಲಸ ಮುಗಿಯುವವರೆಗೂ ಮೊಬೈಲ್‌ ಪಕ್ಕಕ್ಕಿಡಿ, ಕೆಲಸದ ಸಮಯ ಮುಗಿದ ನಂತರ ನಿಮಗೆ ಮುಕ್ತ ಅವಕಾಶ ಇರುತ್ತದೆ ಎಂದು ತಿಳಿಸಿದರು.

ಕಚೇರಿ ಎರಡನೇ ಮನೆ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮಾತನಾಡಿ, ನೌಕರರು ದಿನದ ಬಹುತೇಕ ಸಮಯವನ್ನು ಕಚೇರಿಗಳಲ್ಲಿ ಕಳೆಯುತ್ತಾರೆ. ಹಾಗಾಗಿ, ಕಚೇರಿ ಎರಡನೇ ಮನೆ ಇದ್ದಂತೆ.ನಿಮ್ಮ ಕುಟುಂಬದ ಸದಸ್ಯರ ಕಷ್ಟ-ಸುಖಗಳಿಗೆ ಸ್ಪಂದಿಸುವಂತೆ ಜನರ ಸಮಸ್ಯೆಗಳಿಗೂ ಸ್ಪಂದಿಸುವುದು
ನೌಕರರ ಜವಾಬ್ದಾರಿ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ಕೆ. ರಾಮು, ಕರ್ನಾಟಕ ಸರ್ಕಾರ ಸಚಿವಾಲಯ ಪತ್ರಾಂಕಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಎಸ್‌.ಎನ್‌. ಕೃಷ್ಣಕುಮಾರ್‌, ಪದಾಧಿಕಾರಿಗಳಾದ ಡಾ.ಎಲ್‌. ಗೀತಾ, ಬಿ.ಎಸ್‌.ನಾಗರಾಜ್‌, ಎ. ದಿನೇಶ್‌ ಸಂಪತ್‌ರಾಜ್‌, ಟಿ.ವಿ.ಜಾನ್ಸನ್‌ ಆಂಥೋಣಿ, ಆರ್‌. ಚಂದ್ರಶೇಖರ್‌ ಉಪಸ್ಥಿತರಿದ್ದರು.

ಇದೇ ವೇಳೆ, ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಬೇಕು. ಕೇಂದ್ರ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ನಿಗದಿಪಡಿಸಿದ ವೇತನ ಶ್ರೇಣಿಯನ್ನು ರಾಜ್ಯದ ಸಚಿವಾಲಯಕ್ಕೂ ಅನ್ವಯ ಆಗಬೇಕು. ಹಳೆಯ ಪಿಂಚಣಿ ಯೋಜನೆಯನ್ನು ಮುಂದು ವರಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘವು ಮನವಿ ಸಲ್ಲಿಸಿತು.

ಜನರಿಗೆ ವಿನಾಕಾರಣ ಸರ್ಕಾರಿ ನೌಕರರು ತೊಂದರೆ ಕೊಟ್ಟರೆ,ಶಾಪ ತಟ್ಟುತ್ತದೆ. ಜನರ ಸೇವೆ ಮಾಡಲು
ದೇವರು ನಿಮ್ಮನ್ನು (ನೌಕರರನ್ನು)ನೇಮಿಸಿದ್ದಾನೆ. ಆದರೆ, ವಿನಾಕಾರಣ ಕೊಕ್ಕೆ ಹಾಕಿ ಅಲೆದಾಡಿಸಿದರೆ, ಶಾಪ
ತಟ್ಟುತ್ತದೆ ಹುಷಾರು.

–  ರತ್ನಪ್ರಭಾ, ಸರ್ಕಾರದ ಮುಖ್ಯ ಕಾರ್ಯದರ್ಶಿ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.