ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌


Team Udayavani, Oct 20, 2021, 12:18 PM IST

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

ಬೆಂಗಳೂರು: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತರ ಕೊಡುಗೆ ನೀಡುವ ರೈತರನ್ನು ಪ್ರಶಂಸಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ಬ್ಯಾಂಕ್‌ ಆಫ್ ಬರೋಡದಿಂದ ದೇಶವ್ಯಾಪಿ “ರೈತ ದಿವಸ್‌’ ಆಚರಿಸಲಾಗುತ್ತಿದೆ ಎಂದು ಬ್ಯಾಂಕ್‌ ಆಫ್ ಬರೋಡದ ಕಾರ್ಯ ನಿರ್ವಾಹಕ ನಿರ್ದೇಶಕ ಅಜಯ್‌ ಖುರಾನಾ ತಿಳಿಸಿದರು.

ಆಲಗೊಂಡನಹಳ್ಳಿಯಲ್ಲಿ ಹಮ್ಮಿಕೊಂ ಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ ಬಂದು 75 ವರ್ಷಗಳಾದ ಹಿನ್ನೆಲೆ ಬರೋಡ ಬ್ಯಾಂಕ್‌ ದೇಶವ್ಯಾಪ್ತಿ ರೈತ ದಿವಸ ಆಚರಣೆಗೆ ಮುಂದಾಗಿದೆ. ಅ.16ರ ವಿಶ್ವ ಆಹಾರ ದಿನದಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಹಂತ ಹಂತವಾಗಿ ದೇಶದೆಲ್ಲೆಡೆ ಅ.31ರವರೆಗೆ ಆಚರಿಸಿ ರೈತರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ.

ಕೃಷಿ ಮಾರುಕಟ್ಟೆ ಸಂಸ್ಕರಣ ಕೇಂದ್ರಗಳನ್ನು ಆರಂಭಿಸಿ ರೈತರಿಗೆ ಉತ್ತೇಜನ ನೀಡುವ ಮೂಲಕ ರೈತರ ಅಭಿವೃದ್ಧಿಗೆ ಬ್ಯಾಂಕ್‌ ಶ್ರಮಿಸುತ್ತಿದೆ ಎಂದರು. ಬೆಂಗಳೂರು ವಲಯ ಪ್ರಬಂಧಕ ಸುಧಾಕರ್‌ ಡಿ. ಎ. ನಾಯಕ್‌ ಮಾತ ನಾಡಿ, ರೈತರ ಸರ್ವತೋಮುಖ ಅಭಿ ವೃದ್ಧಿಯನ್ನು ಗಮನದಲ್ಲಿಟ್ಟು ಕೊಂಡು ಬ್ಯಾಂಕ್‌ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಅದ್ಯತೆ ನೀಡಿದೆ.

ಇದನ್ನೂ ಓದಿ;- ಸಿಂದಗಿ: ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಕೃಷಿ ಉತ್ಪನ್ನಗಳಿಗೆ ಹಣಕಾಸು ನೆರೆವು ಒದಗಿಸುವುದು, ಕೃಷಿ ಮಾರ್ಕೆಟಿಂಗ್‌ ಚಟುವಟಿಕೆ ಹೆಚ್ಚಿನ ಗಮನ, ಕ್ರೆಡಿಟ್‌ ಖಾತೆ ನಿರ್ವಹಿಸುವ ತಿಳಿವಳಿಕೆ ತರಬೇತಿ ಪಡೆದ ಮಾನವ ಶಕ್ತಿಯ ಬೆಳವಣಿಗೆ ಪೂರಕವಾಗಿ ಶಕ್ತಿ ತುಂಬುವುದು, ಸ್ಥಳೀಯ ಸಂಸ್ಥೆಗಳ ಸಹಯೋಗ ಉತ್ತೇಜಿಸುವುದು ಬ್ಯಾಂಕ್‌ ನ ಉದ್ಧೇಶವಾಗಿದೆ ಎಂದರು. ಇದೇ ವೇಳೆ ರೈತರಿಗೆ ವಿವಿಧ ಯೋಜನೆಗಳ ಸಾಲಸೌಲಭ್ಯ ವಿತರಿಸಲಾಯಿತು. ಕೃಷಿ ರಂಗದಲ್ಲಿ ಸಾಧನೆಗೈದ ರೈತರನ್ನು ಸನ್ಮಾನಿಸಲಾಯಿತು.

ಕೃಷಿ ಉಪಕರಣಗಳು , ಉತ್ತಮ ತಳಿಯ ಹಸು ಕುರಿ-ಮೇಕೆ, ಸಾವಯವ ಕೃಷಿ ಗೊಬ್ಬರ, ನೈಸರ್ಗಿಕವಾಗಿ ತಯಾರಿಸಲ್ಪಟ್ಟ ಕ್ರಿಮಿನಾಶಕ ಕುರಿತು ಪ್ರಾತ್ಯಕ್ಷಿಕ ಆಯೋ ಜಿಸಲಾಗಿತ್ತು. ಶಿಬಿರದ ಮುಖ್ಯಸ್ಥ ಉದಯ ಹೆಗಡೆ, ದೊಡ್ಡನಲ್ಲಾಳ ಗ್ರಾಪಂ ಅಧ್ಯಕ್ಷ ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.