ಡಿಕೆಶಿ ಒಬ್ರೇ ಆಸ್ತಿ ಮಾಡಿದ್ದಾರಾ?
Team Udayavani, Aug 6, 2017, 11:49 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಕೆಲವರನ್ನು ಗುರಿ ಇಟ್ಟುಕೊಂಡು ದಾಳಿ ಮಾಡುವುದು ಆ ಇಲಾಖೆ ಮೇಲೆ ಸಾರ್ವಜನಿಕರ ನಂಬಿಕೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
ಈ ದೇಶದಲ್ಲಿ ಸಾಕಷ್ಟು ಜನರ ಆಸ್ತಿಯಲ್ಲಿ ಏಕಾಏಕಿ ಹೆಚ್ಚಳವಾಗಿರುತ್ತದೆ. ಅನೇಕರು ಆದಾಯದ ಮೂಲ ತೋರಿಸದೇ ಶ್ರೀಮಂತರಾಗಿರುತ್ತಾರೆ. ಕಾರ್ಪೋರೇಟ್ ಕಂಪನಿಗಳು, ಖಾಸಗಿ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಏಕೆ ಐಟಿ ಅಧಿಕಾರಿಗಳು ದಾಳಿ ನಡೆಸುವುದಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
ಚುನಾವಣೆ ಸಂದರ್ಭದಲ್ಲಿ ಎಲ್ಲ ಜನಪ್ರತಿನಿಧಿಗಳೂ ತಮ್ಮ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿರುತ್ತಾರೆ. ಆ ಸಂದರ್ಭದಲ್ಲಿ ಅವರ ಆದಾಯ ದಿಢೀರ್ ಏರಿಕೆ ಹೇಗಾಯಿತು ಎಂದು ಯಾವತ್ತಾದರೂ, ಆದಾಯ ಇಲಾಖೆಯವರು ಪ್ರಶ್ನಿಸಿದ್ದಾರಾ ? ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆಯೇ ?
ಈ ರೀತಿ ಯಾವುದೋ ಕಾರಣಕ್ಕೆ ಗುರಿ ಇಟ್ಟುಕೊಂಡು ದಾಳಿ ಮಾಡಿದರೆ, ಆ ಇಲಾಖೆ ಮೇಲಿನ ವಿಶ್ವಾಸ ಕಡಿಮೆಯಾಗುತ್ತದೆ. ಈ ದೇಶದಲ್ಲಿ ಡಿ.ಕೆ.ಶಿವಕುಮಾರ್ ಒಬ್ಬರೇ ಅಸ್ತಿ ಮಾಡಿದ್ದಾರಾ? ಎಷ್ಟು ಜನರ ಆಸ್ತಿ ನೂರಾರು ಪಟ್ಟು ಹೆಚ್ಚಳವಾಗಿಲ್ಲಾ. ಅವರೆಲ್ಲಾ ಯಾಕೆ ಕಂಡಿಲ್ಲ ಇವರಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಧನ ಸಚಿವ ಡಿ.ಕೆ. ಶಿವಕುಮಾರ್ಗೆ ಇದೆಲ್ಲವನ್ನು ಎದುರಿಸುವ ಶಕ್ತಿ ಇದೆ. ಅವರು ಧೈರ್ಯದಿಂದ ಎದುರಿಸುತ್ತಾರೆ. ನಮ್ಮಂಥ ಬಡಪಾಯಿಗಳ ಮೇಲೆ ದಾಳಿ ಮಾಡಿದರೆ, ಹೇಗೆ ತಡೆದುಕೊಳ್ಳೋದು ಎಂದು ರಮೇಶ್ ಕುಮಾರ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ