ಕೋವಿಡ್‌ಗೆ ಡಿಜಿಟಲ್‌ ಸೂತ್ರ; ರಕ್ಷಾ ಯೋಜನೆ ಚಾಲನೆ


Team Udayavani, Aug 1, 2020, 9:05 AM IST

ಕೋವಿಡ್‌ಗೆ ಡಿಜಿಟಲ್‌ ಸೂತ್ರ; ರಕ್ಷಾ ಯೋಜನೆ ಚಾಲನೆ

ಬೆಂಗಳೂರು: ಕೋವಿಡ್‌-19 ನಿರ್ವಹಣೆ ಮತ್ತು ಡಿಜಿಟಲ್‌ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೋವಿಡ್‌ ರಕ್ಷಾ’ ವಿನೂತನ ಕಾರ್ಯ ಯೋಜನೆಗೆ ಉಸ್ತುವಾರಿ ಸಚಿವ ಆರ್‌.ಅಶೋಕ್‌, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಚಾಲನೆ ನೀಡಿದರು.

“ಕೋವಿಡ್‌ಗೆ ಸಂಬಂಧಿಸಿದಂತೆ ಆಸ್ಪತ್ರೆ, ರೋಗಿಗಳು ಮತ್ತು ವೈದ್ಯಕೀಯ ಸೌಲಭ್ಯಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಒಂದೇ ವೇದಿಕೆಯಡಿ ಕಲ್ಪಿಸಿ, ರೋಗಿಗಳು ಕೋವಿಡ್‌ ಸಂಬಂಧಿಸಿದ ಸಮಾಲೋಚನೆಗೆ ನುರಿತ ವೈದ್ಯರೊಂದಿಗೆ ನೇರ ಸಂಪರ್ಕ ಕಲ್ಪಿಸಿದರೆ ಅತ್ಯಂತ ಸಹಕಾರಿ. ಡಿಜಿಟಲ್‌ ತಂತ್ರಜ್ಞಾನದ ಸಹಾಯದೊಂದಿಗೆ ಮನೆಯಲ್ಲೇ ಕುಳಿತು ರೋಗಿಗಳು ನೇರವಾಗಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ತಮ್ಮ ಸಂದೇಹ ಪರಿಹರಿಸಿಕೊಳ್ಳುವುದರೊಂದಿಗೆ, ಅಗತ್ಯವಿದ್ದಲ್ಲಿ ಡಯಾಗ್ನೋಸ್ಟಿಕ್‌ ಟೆಸ್ಟ್‌ಗಳ ಸೇವೆ ಮತ್ತು ಔಷಧಿ ಸಾಮಗ್ರಿಗಳನ್ನು ನೇರವಾಗಿ ಮನೆಗೆ ಪಡೆಯಬಹುದು ಎಂದು ಕೋವಿಡ್‌ ರಕ್ಷಾ ಕಾರ್ಯ ಯೋಜನೆ ಕುರಿತು ಸಂಸದ ತೇಜಸ್ವಿ ಸೂರ್ಯ ವಿವರಿಸಿದರು. ಮನೆಯಲ್ಲಿಯೇ ಟೆಸ್ಟ್‌ ಮಾಡಿಸಿಕೊಳ್ಳಲು, ಹೋಂ ಕ್ವಾರಂಟೈನ್‌ ಆಗಲು, ಸಮೀಪದ ಫೀವರ್‌ ಕ್ಲಿನಿಕ್‌, ಪ್ರತಿ ವಾರ್ಡ್‌ ಗೆ ಸಂಬಂಧಿಸಿದ ಅಧಿಕಾರಿಗಳು, ಸ್ವಯಂ ಸೇವಕರ ಮಾಹಿತಿಯನ್ನೂ “ಕೋವಿಡ್‌ ರಕ್ಷಾ’ ಮೂಲಕ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

ಕೋವಿಡ್‌ ರಕ್ಷಾ: ಕೋವಿಡ್‌-19 ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು “ಕೋವಿಡ್‌ ರಕ್ಷಾ’ ವಿನೂತನ ಯೋಜನೆ ಡಿಜಿಟಲ್‌ ವೇದಿಕೆಯಾಗಿದೆ. ಈ ಕಾರ್ಯ ಯೋಜನೆ ಅನುಸಾರ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಸಹಾಯವಾಣಿ 080 61914960 ಸಂಖ್ಯೆಗೆ ಚಾಲನೆ ನೀಡಲಿದ್ದು, ಫೋನ್‌ ಅಥವಾ ವಾಟ್ಸಪ್‌ ಮೂಲಕ ಕೋವಿಡ್‌-19 ಗುಣ ಲಕ್ಷಣಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಟೆಲಿ/ವಿಡಿಯೋ ಸಮಾಲೋಚನೆ ಮೂಲಕ ಪರಿಹಾರ ಒದಗಿಸಲಿದ್ದಾರೆ. “ಇ-ಡಾಕ್ಟರ್‌’ಗಳು ಕೋವಿಡ್‌-19ಗೆ ಸಂಬಂಧಿಸಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಿದ್ದು, ಟೆಸ್ಟ್‌ ಮಾಡಿಸಿಕೊಳ್ಳುವ, ಹೋಂ ಕ್ವಾರಂಟೈನ್‌ ಕುರಿತು ಅಥವಾ ಆಸ್ಪತ್ರೆಗಳ ಮಾಹಿತಿ ಒದಗಿಸಲಿದ್ದು, ರೋಗಿಗಳಿಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಆಕ್ಸಿಜನ್‌ ಕಾನ್ಸನೆóàಟರ್ಸ್‌ ಸೌಲಭ್ಯ ಒದಗಿಸುವಲ್ಲಿಯೂ ಸಹಾಯ ನೀಡಲಿದೆ. “ಕೋವಿಡ್‌ ರಕ್ಷಾ’ ವೇದಿಕೆಯಲ್ಲಿ ಸುಮಾರು

3,200 ಡಾಕ್ಟರ್‌ ಗಳು ಕೋವಿಡ್‌ ರೋಗಿಗಳೊಂದಿಗೆ ನೇರ ಸಮಾಲೋಚನೆ ನಡೆಸಲಿದ್ದು, 350 ಡಾಕ್ಟರ್‌ ಕನ್ನಡದಲ್ಲಿಯೂ ಸಂಭಾಷಣೆ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ 200 ಆಕ್ಸಿಜನ್‌ ಕಾನ್ಸನೆಟರ್ಸ್‌, 200 ಆಕ್ಸಿಜನ್‌ ಸಿಲಿಂಡರ್‌ ವ್ಯವಸ್ಥೆ ಮಾಡಲಾಗಿದೆ. ಕೋವಿಡ್  ವೈರಸ್‌ ಟಾಸ್ಕ್ ಫೂರ್ಸ್ ನ 300ಕ್ಕೂ ಅಧಿಕ ಕಾರ್ಯಕರ್ತರು ಕರೆ ನಿರ್ವಹಣೆಯಲ್ಲಿ ಸಹಕರಿಸಲಿದ್ದು 300 ಸ್ವಯಂಸೇವಕರು ಕಾರ್ಯನಿರ್ವಹಿಸಲಿದ್ದಾರೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಇಂತಹ ಪ್ರಯತ್ನ ನಡೆಯುತ್ತಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಲು ವಿನಂತಿಸಲಾಗಿದೆ.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.