ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ
Team Udayavani, Sep 1, 2021, 5:17 PM IST
ಬೆಂಗಳೂರು : ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ತೆರಿಗೆ ವಿಚಾರವಾಗಿ ಸರಕಾರದ ವಿರುದ್ಧ ಟ್ವೀಟ್ ಮಾಡಿದ ದಿನೇಶ್, ಜನರನ್ನು ತೆರಿಗೆ ವಿಷವರ್ತುಲಕ್ಕೆ ತಳ್ಳಿರುವ ಡಬಲ್ ಇಂಜಿನ್ ಸರ್ಕಾರ, ರಕ್ತ ಹೀರುವ ತಿಗಣೆಯಂತೆ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾನದ ಹೆಣವಿದ್ದಂತೆ ಎಂದು ಹೇಳಿಕೊಂಡಿದ್ದಾರೆ.
ದೇಶದ ಜನ ಮೋದಿಯವರು ಹೇಳುತ್ತಿದ್ದ ‘ಅಚ್ಛೇದಿನ್’ ಪದವನ್ನು ತಪ್ಪಾಗಿ ಅರ್ಥೈಸಿಕೊಂಡು ಬಿಜೆಪಿಗೆ ಅಧಿಕಾರ ನೀಡಿದ್ದರು. ಈಗ ಅದೇ ಜನ ಕೇಂದ್ರ ಸರ್ಕಾರದ ತೆರಿಗೆ ದರೋಡೆ ಕಂಡು, ಅಚ್ಚೇದಿನ್ ಎಂದರೆ ಕನಸಿನಲ್ಲೂ ಬೆಚ್ಚುವಂತಾಗಿದೆ.
ಮೋದಿಯವರಿಗೆ ಅಧಿಕಾರ ಕೊಟ್ಟು,ಹರುಷದ ಕೂಳಿಗಾಗಿ,ವರುಷದ ಕೂಳು ಕಳೆದುಕೊಂಡಂತಾಗಿದೆ ದೇಶದ ಜನರ ಪರಿಸ್ಥಿತಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ಒಂದೊತ್ತಿನ ಊಟಕ್ಕೆ ಹಾಹಾಕಾರ| ಔಷಧಿಗಳಿಲ್ಲದೆ ನರಳಾಟ | ಇವು ಕಾಬೂಲ್ನ ಕರುಣಾಜನಕ ಕಥೆಗಳು
ಕೇಂದ್ರ ಕಾರ್ಪೊರೇಟ್ ತೆರಿಗೆಗಳನ್ನು ಇಳಿಸಿ,ಆ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸುತ್ತಿದೆ. ಕಾರ್ಪೋರೇಟ್ ಮಿತ್ರ – ಜನಸಾಮಾನ್ಯನ ಶತ್ರುವಾಗಿರುವ ಈ ಕೇಂದ್ರ ಸರ್ಕಾರ ದೇಶದ ಪಾಲಿಗೆ ಹೆಗಲೇರಿದ ಶನಿಯಂತೆ ಎಂದಿದ್ದಾರೆ.
ಜನರನ್ನು ತೆರಿಗೆ ಮೂಲಕ ಹುರಿದು ಮುಕ್ಕುತ್ತಿರುವ ಮೋದಿ ಸರ್ಕಾರಕ್ಕೆ ಜನರ ಹಿತಕ್ಕಿಂತ ಕಾರ್ಪೊರೇಟ್ ಕುಳಗಳ ಹಿತವೇ ಮುಖ್ಯವಾಗಿದೆ.
ಬೆಲೆಯೇರಿಕೆ ದೇಶದ ಜನರಿಗೆ ನರೇಂದ್ರ ಮೋದಿ ಸರ್ಕಾರ ಕೊಟ್ಟ ಶಾಪ. 2 ವರ್ಷದ ಅವಧಿಯಲ್ಲಿ ಕೆಲ ಅಗತ್ಯ ವಸ್ತುಗಳ ಬೆಲೆ ಶೇ 200% ರಷ್ಟು ಏರಿಕೆಯಾಗಿದೆ. ಆದರೆ ಜನರ ಆದಾಯ ಮೊದಲಿಗಿಂತ ಕಡಿಮೆಯಾಗಿದೆ. ಮೋದಿಯವರ ದುಬಾರಿ ದುನಿಯಾದಲ್ಲಿ ಅವರ ಕಾರ್ಪೋರೆಟ್ ಸ್ನೇಹಿತರು ಮಾತ್ರ ಬದುಕಬಹುದು. ಆದರೆ ಜನಸಾಮಾನ್ಯನ ಹೊಟ್ಟೆಗೆ ತಣ್ಣೀರು ಬಟ್ಟೆಯೇ ಗತಿ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…