ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್ ಪಾಟೀಲ್ ಹೇಳಿಕೆ ಸಾಕ್ಷಿ: ದಿನೇಶ್
Team Udayavani, Sep 12, 2021, 7:58 PM IST
ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಬಿಜೆಪಿ ಸೇರಲು ಹಣದ ಆಫರ್ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ ಬಳಕೆಯಾದ ಹಣದ ಮೂಲ ಯಾವುದು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರು ಸರ್ಕಾರ ರಚನೆಗೆ 17 ಶಾಸಕರ ಖರೀದಿಗೆ ಸುರಿದ ಅಕ್ರಮ ಹಣ ಯಾರು ತಿಂದು ವಿಸರ್ಜನೆ ಮಾಡಿದ ಹಣ ಎಂದ ಹೇಳಬೇಕು, ಈ ಅಕ್ರಮ ಹಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸರ್ಕಾರ ಮುಂದುವರಿಯಲು ನೈತಿಕತೆ ಉಳಿದಿಲ್ಲ, ಸಂವಿಧಾನಬದ್ಧವಾಗಿ ಚುನಾಯಿತವಾದ ಸರ್ಕಾರವನ್ನು ಸಂವಿಧಾನ ಬಾಹಿರವಾಗಿ ಕೆಡವುವ ಹೀನ ಸಂಸ್ಕೃತಿ ಬಿಜೆಪಿಯವರದ್ದು ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ :ಮಹಿಳೆಯ ಬ್ಯಾಗ್ ಕಳವಿಗೆ ಯತ್ನ : ಜಾಗೃತಿಗಾಗಿ ಅಣಕು ಕಾರ್ಯಾಚರಣೆ : ಶಶಿಕುಮಾರ್ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ