ಸಿ.ಟಿ.ರವಿ ಲೂಟಿಕೋರ ಆಗಿರದಿದ್ದರೆ ಕ್ಷೇತ್ರದ ಜನ ‘ಲೂಟಿ ರವಿ’ ಎನ್ನಲು ಸಾಧ್ಯವೆ? ದಿನೇಶ್ ಗುಂಡೂರಾವ್ ಪ್ರಶ್ನೆ
Team Udayavani, Dec 8, 2022, 9:10 AM IST
ಬೆಂಗಳೂರು: ಸಿದ್ದರಾಮಯ್ಯರಿಗೆ ‘ಸಿದ್ರಾಮುಲ್ಲಾ ಖಾನ್’ ಎಂದು ನಾಮಕರಣ ಮಾಡಿರುವ ಸಿ.ಟಿ.ರವಿ, ತಮಗೆ ‘ಲೂಟಿ ರವಿ’ ಎಂದು ಜನ ನಾಮಕರಣ ಮಾಡಿರುವುದನ್ನು ಕ್ರೀಡಾ ಮನೋಭಾವದಿಂದ ಸ್ವಾಗತಿಸಬೇಕು. ಆದರೆ ‘ಲೂಟಿ ರವಿ’ ಎಂದರೆ ಸಿ.ಟಿ.ರವಿಯವರು ಅದ್ಯಾಕೆ ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಾರೆ.? ಒಂದು ವೇಳೇ ಸಿ.ಟಿ.ರವಿ ಲೂಟಿಕೋರರಾಗಿರದಿದ್ದರೆ ಅವರಿಗೆ ಆ ಕ್ಷೇತ್ರದ ಜನ ‘ಲೂಟಿ ರವಿ’ ಎನ್ನಲು ಸಾಧ್ಯವೆ.? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಸಿ.ಟಿ.ರವಿ ಪ್ರಕಾರ ಸಿದ್ದರಾಮಯ್ಯ ‘ಸಿದ್ರಾಮುಲ್ಲಾ ಖಾನ್’. ಆದರೆ, ಟಿಪ್ಪು ಬಗ್ಗೆ 400 ಪುಟಗಳ ಪುಸ್ತಕ ಬರೆಸಿ ಮುನ್ನುಡಿ ಬರೆದಿದ್ದ ಜಗದೀಶ್ ಶೆಟ್ಟರ್ ಯಾವ ‘ಖಾನ್’? ಟಿಪ್ಪು ಜಯಂತಿಯಂದು ಮುಸ್ಲಿಮರ ಟೋಪಿ ಧರಿಸಿದ್ದ ಯಡಿಯೂರಪ್ಪನವರು ಯಾವ ‘ಖಾನ್’. ರಂಜಾನ್ ಹಬ್ಬದಲ್ಲಿ ನಾವೆಲ್ಲರೂ ಒಂದೆ ಎಂದು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ಬಿರಿಯಾನಿ ತಿಂದಿದ್ದ ಈಶ್ವರಪ್ಪ ಯಾವ ‘ಖಾನ್’?
ಸರ್ವಧರ್ಮವನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತ. ಜಾತ್ಯಾತೀತ ತತ್ವದ ಬಗ್ಗೆ ಸಂವಿಧಾನದಲ್ಲೇ ಉಲ್ಲೇಖವಾಗಿದೆ. ಸಿದ್ದರಾಮಯ್ಯ ತಮ್ಮ ಬದುಕಿನುದ್ದಕ್ಕೂ ಇದೇ ತತ್ವದ ಆಧಾರದಲ್ಲಿ ಬದುಕಿದ್ದಾರೆ ಹಾಗೂ ರಾಜಕಾರಣ ಮಾಡಿದ್ದಾರೆ. ಎಲ್ಲರನ್ನೂ ಪ್ರೀತಿಸುವವನೇ ನಿಜವಾದ ಹಿಂದೂ. ಅನ್ಯಧರ್ಮದವರನ್ನು ಕಡಿ-ಕೊಲ್ಲು ಎನ್ನುವ ಸಿ.ಟಿ.ರವಿಯವರದ್ದು ಯಾವ ಧರ್ಮ.?
‘ಶಾದಿ ಭಾಗ್ಯ’ ಕೊಟ್ಟ ಮಾತ್ರಕ್ಕೆ ಸಿದ್ದರಾಮಯ್ಯ ‘ಸಿದ್ರಾಮುಲ್ಲಾ ಖಾನ್’ ಆಗುವುದಾದರೆ, ‘ಶಾದಿ ಶುಗುನ್ ಭಾಗ್ಯ’ ಕೊಟ್ಟ ಮೋದಿಯವರು ‘ಮೋದಿ ಖಾನ್’ ಆಗುವುದಿಲ್ಲವೆ.? ಸಿ.ಟಿ.ರವಿಯವರು ‘ಶಾದಿ ಶುಗುನ್ ಭಾಗ್ಯ’ ಕೊಟ್ಟ ಮೋದಿಯವರನ್ಯಾಕೆ ‘ಮೋದಿ ಖಾನ್’ ಎನ್ನುವುದಿಲ್ಲ. ಮೋದಿಯವರಿಗೆ ‘ಮೋದಿ ಖಾನ್’ ಎನ್ನಲು ಸಿ.ಟಿ.ರವಿಯವರಿಗೆ ನರ ದೌರ್ಬಲ್ಯವೇ.? ಎಂದು ಕಿಡಿಕಾರಿದ್ದಾರೆ.
ಹಳ್ಳಿ ಕಡೆ ಚೆನ್ನಾಗಿರುವ ಕುಟುಂಬಗಳ ಮಧ್ಯೆ ಜಗಳ ತಂದು ಕುಟುಂಬ ಒಡೆಯುವವರನ್ನು ‘ತಂದಾಕುವ ಗಿರಾಕಿ’ ಎನ್ನುತ್ತಾರೆ. ಸಿ.ಟಿ.ರವಿ ಕೂಡ ಇದೇ ಜಾತಿಗೆ ಸೇರಿದವರು. ಕಲಹ ಪ್ರಿಯ ಸಿ.ಟಿ.ರವಿಯವರು ತಂದಾಕುವ ಬುದ್ಧಿಯಿಂದ ರಾಜ್ಯ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಶಾಂತಿಯ ತೋಟ. ಈ ತೋಟದಲ್ಲಿ ಧರ್ಮದ ಅಫೀಮ್ ಬೆಳೆಸುವುದು ಸರಿಯೇ ಸಿ.ಟಿ.ರವಿಯವರೇ? ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಆಕ್ಸಿಲ್ ತುಂಡಾಗಿ ಪಲ್ಟಿಯಾದ ಟ್ರ್ಯಾಕ್ಟರ್: ಪ್ರಾಣಾಪಾಯದಿಂದ ಪಾರಾದ ಚಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ