ಡಿಪ್ಲೊಮಾ ಕೋರ್ಸ್: ಪರೀಕ್ಷೆ ಬರೆಯಲು ಅವಕಾಶ
Team Udayavani, Nov 5, 2018, 6:10 AM IST
ಬೆಂಗಳೂರು : ರಾಜ್ಯದ ಪಾಲಿಟೆಕ್ನಿಕ್ಗಳಲ್ಲಿ ಡಿಪ್ಲೊಮಾ ಕೋರ್ಸ್ಗಳಿಗೆ 2009-10ನೇ ಸಾಲಿನಲ್ಲಿ ಮೊದಲ ವರ್ಷಕ್ಕೆ ಹಾಗೂ 2011-12, 2012-13ರಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ವಿಸ್ತರಿಸಲಾಗಿದೆ.
2009-10 ಹಾಗೂ 2011-12, 2012-13ರಲ್ಲಿ ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 2018-19 ಏಪ್ರಿಲ್, ಮೇ ಸಮಿಸ್ಟರ್ ಪರೀಕ್ಷೆಯೇ ಕೊನೆಯ ಅವಕಾಶ ಆಗಿತ್ತು. ಆದರೆ, ಏಪ್ರಿಲ್, ಮೇನಲ್ಲಿ ನಡೆದ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರಿಂದ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಅವಧಿ ವಿಸ್ತರಿಸಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಈ ಅವಧಿಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಬೇರೆ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ. ನಿರ್ದಿಷ್ಟ ವರ್ಷದೊಳಗೆ ಕೋರ್ಸ್ ಪೂರೈಸಬೇಕು ಎಂಬ ಸ್ಪಷ್ಟ ನಿಯಮ ಇರುತ್ತದೆ. ಆದರೆ, ಕ್ಯಾರಿಓವರ್ ಪದ್ಧತಿಯಲ್ಲಿ ಕೆಲವು ವಿದ್ಯಾರ್ಥಿಗಳು ಅನುತ್ತೀರ್ಣ ವಿಷಯವನ್ನು ಮುಂದುವರಿಸಿಕೊಂಡು ಬರುತ್ತಿರುತ್ತಾರೆ. ಪಠ್ಯಕ್ರಮ ಬದಲಾದಂತೆ ಈ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗಲಿದೆ. ಹೀಗಾಗಿ 2009-10 ಹಾಗೂ 2011-12, 2012-13ರಲ್ಲಿ ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಪಾಸಾಗಲು ಒಂದು ಅವಕಾಶ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಅರ್ಹ ಅಭ್ಯರ್ಥಿಗಳು 2018ರ ನವೆಂಬರ್/ಡಿಸೆಂಬರ್ ಸೆಮಿಸ್ಟರ್ ಪರೀಕ್ಷೆ ಹಾಗೂ 2019ರ ಏಪ್ರಿಲ್/ಮೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಾಜರಾಗಲು ಅವಕಾಶ ಇದೆ. 2018ರ ನವೆಂಬರ್/ಡಿಸೆಂಬರ್ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗುವವರು ನ.13ರೊಳಗೆ ದಂಡ ರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್