ನಿರ್ದೇಶಕ ಪ್ರೇಮ್ ವಿರುದ್ಧ ಶ್ರೀನಿವಾಸ್ ಗರಂ
Team Udayavani, Dec 14, 2018, 11:24 AM IST
ಬೆಂಗಳೂರು: ನಿರ್ದೇಶಕ “ಜೋಗಿ’ ಪ್ರೇಮ್ ಅವರ ವಿರುದ್ಧ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಂಚನೆ ಆರೋಪ ಮಾಡಿದ್ದಾರೆ. “ಜೋಗಿ’ ಚಿತ್ರದ ಬಳಿಕ, ಶ್ರೀನಿವಾಸ್ ನಿರ್ಮಾಣದ ಚಿತ್ರವನ್ನು ನಿರ್ದೇಶಿಸಲು ಪ್ರೇಮ್ ಒಪ್ಪಿಕೊಂಡಿದ್ದು, ಇದಕ್ಕಾಗಿ ಮುಂಗಡವಾಗಿ 10 ಲಕ್ಷ ರೂ.ಅಡ್ವಾನ್ಸ್ ಪಡೆದಿದ್ದರು.
ಆದರೆ ಪ್ರೇಮ್ ನಂತರ ಆ ಚಿತ್ರವನ್ನು ಮಾಡಲಿಲ್ಲ. ಹೀಗಾಗಿ ಮುಂಗಡ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ 2 ಲಕ್ಷ ರೂ. ಮಾತ್ರ ನೀಡಿ ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿದ್ದಾರೆಂದು ಶ್ರೀನಿವಾಸ್ ಆರೋಪಿಸಿದ್ದಾರೆ.
ಇಲ್ಲಿಯವರೆಗೆ ಹಲವು ಬಾರಿ ತಿಳಿಸಿದ್ದರೂ, ಪ್ರೇಮ್ ಅವರಿಂದ ಯಾವುದೇ ಉತ್ತರ ಬಂದಿಲ್ಲ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ. ಹಾಗಾಗಿ ಪ್ರೇಮ್ ಅವರಿಂದ ಬಾಕಿ ಹಣ ಬರುವವರೆಗೂ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಕನಕಪುರ ಶ್ರೀನಿವಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ