ನಿರ್ದೇಶಕ, ನಿರ್ಮಾಪಕರ ಬಂಧನಕ್ಕೆ ವಿಶೇಷ ತಂಡ


Team Udayavani, Mar 31, 2019, 12:23 PM IST

Udayavani Kannada Newspaper

ಬೆಂಗಳೂರು: ಬಾಗಲೂರಿನಲ್ಲಿ “ರಣಂ’ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಕಂಪ್ರಸ್ಡ್ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ತಾಯಿ, ಮಗಳು ಮೃತಪಟ್ಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಚಿತ್ರತಂಡದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಿದೆ.

ಘಟನೆಯಲ್ಲಿ ಮೃತಪಟ್ಟ ಸುಮೈರಾ ಬಾನು ಅವರ ಪತಿ ತಬ್ರೇಜ್‌ ಖಾನ್‌ ನೀಡಿರುವ ದೂರಿನ ಅನ್ವಯ, ರಣಂ ಚಿತ್ರದ ನಿರ್ಮಾಪಕ ಆರ್‌.ಶ್ರೀನಿವಾಸ್‌, ನಿರ್ದೇಶಕ ವಿ.ಸಮುದ್ರಂ, ಚಿತ್ರದ ಮ್ಯಾನೇಜರ್‌ ಕಿರಣ್‌, ಸಾಹಸ ನಿರ್ದೇಶಕ ವಿಜಯನ್‌ ಮತ್ತು ತಂತ್ರಜ್ಞರ ವಿರುದ್ಧ ಐಪಿಸಿ 304 (ಉದ್ದೇಶಪೂರ್ವಕವಲ್ಲದ ಕೊಲೆ) 338 (ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಗಂಭೀರ ಗಾಯಕ್ಕೆ ಕಾರಣ) ಸ್ಫೋಟಕ ವಸ್ತುಗಳ ಬಳಕೆ ಕಾಯಿದೆ ಅನ್ವಯ ಬಾಗಲೂರು ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಘಟನೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಂಪಿಗೆಹಳ್ಳಿ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಕಲಾ ಕೃಷ್ಣಸ್ವಾಮಿ “ಉದಯವಾಣಿಗೆ’ ತಿಳಿಸಿದರು.

ಚಿತ್ರತಂಡದ 9 ವಾಹನಗಳು ಜಪ್ತಿ: ದುರ್ಘ‌ಟನೆ ಬಳಿಕ ಚಿತ್ರತಂಡ ಸ್ಥಳದಿಂದ ಪರಾರಿಯಾಗಿದ್ದು, ಕಾರವಾನ್‌, ಎರಡು, ಕಾರುಗಳು ಸೇರಿದಂತೆ 9 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಜತೆಗೆ. ಘಟನಾ ಸ್ಥಳದಲ್ಲಿ ದೊರೆತ ಸ್ಫೋಟಕ್ಕೆ ಸಂಬಂಧಿಸಿದ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಸಾಹಸ ದೃಶ್ಯದಲ್ಲಿ ಕಾರು ಸ್ಫೋಟಿಸಲು ಬಳಸಿದ್ದ ಕಂಪ್ರಸ್ಡ್ ಗ್ಯಾಸ್‌ ಸಿಲಿಂಡರ್‌ ಯಾವ ಮಾದರಿಯದ್ದು, ಜತೆಗೆ ಅದಕ್ಕೆ ತುಂಬಿಸುತ್ತಿದ್ದ ಗ್ಯಾಸ್‌ ಎಷ್ಟು ಅಪಾಯಕಾರಿ ಎಂಬುದು ಎಫ್ಎಸ್‌ಎಲ್‌ ವರದಿ ಬಳಿಕ ಖಚಿತವಾಗಲಿದೆ.

ಚಿತ್ರತಂಡ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ಸ್ಫೋಟ ಸಂಭವಿಸಿದೆ. ಸಿಲಿಂಡರ್‌ನ ಕ್ಯಾಪ್‌ ಬಡಿದು ಮಹಿಳೆ ಹಾಗೂ ಮಗು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಅಧಿಕಾರಿ ತಿಳಿಸಿದರು.

ಪ್ರಾಣಾಪಾಯದಿಂದ ಪಾರಾದ ಜೈನಬ: ದುರ್ಘ‌ಟನೆಯಲ್ಲಿ ಗಾಯಗೊಂಡಿದ್ದ ತಬ್ರೇಜ್‌ ಖಾನ್‌ರ ಮಗಳು ಜೈನಬ (8) ಚಿಕಿತ್ಸೆ ನಂತರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಾದ ಸುಮೈರಾ ಬಾನು ಹಾಗೂ ಮಗಳು ಆಯೆರಾ ಖಾನ್‌ (5) ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಕೋಲಾರದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು. ವೈದ್ಯರ ಸಲಹೆ ಮೇರೆಗೆ ಜೈನಬಳನ್ನು ತಾಯಿ ಹಾಗೂ ತಂಗಿಯ ಅಂತ್ಯ ಸಂಸ್ಕಾರಕ್ಕೆ ಕರೆದುಕೊಂಡು ಹೋಗಲಾಗಿತ್ತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.