ಕಸದ ಲಾಭದ ಬಗ್ಗೆ ಕಾಂಪೋಸ್ಟ್‌ ಸಂತೆಯಲ್ಲಿ ಚರ್ಚೆ


Team Udayavani, Aug 13, 2017, 11:20 AM IST

kasada-labha.jpg

ಕೆ.ಆರ್‌.ಪುರ: “ಸ್ವಚ್ಚಗೃಹ’ ಹಾಗೂ ಬಿಬಿಎಂಪಿ ವತಿಯಿಂದ ಕೆಆರ್‌ಪುರದ ಹೊರಮಾವು ವಾರ್ಡ್‌ನ ಚೆಳಕೆರೆ ಗ್ರಾಮದಲ್ಲಿ ಶನಿವಾರ ಕಾಂಪೋಸ್ಟ್‌ ಸಂತೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾಂಪೋಸ್ಟ್‌ ಸಂತೆಯಲ್ಲಿ ಹೊರಮಾವು ಗ್ರಾಮದ ಸುತ್ತಲಿನ ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ಲ್ಯಾಸ್ಟಿಕ್‌ ಬಳಸದಂತೆ ಹಾಗೂ ವಿಘಟನೆ ಹೊಂದಬಲ್ಲ ಪ್ಲ್ಯಾಸ್ಟಿಕ್‌ಗಳನ್ನು ಬಳಸುವಂತೆ ಜಾಗೃತಿ ಮೂಡಿಸಿದರು.

ತರಕಾರಿಗಳನ್ನು ಕಾಂಪೋಸ್ಟ್‌ ಗೊಬ್ಬರದಿಂದ ಬೆಳೆಯುವಂತೆ ಮನವಿ ಮಾಡಿದರು. ಸ್ತ್ರೀಯರಿಗೆ ಮರು ಬಳಕೆ ಮಾಡಬಲ್ಲ ಸ್ಯಾನಿಟರಿ ಪ್ಯಾಡ್‌ ಕುರಿತೂ ಸಹ ವಿವರಿಸಿದರು. ಹಸಿ ಕಸವನ್ನು ಗೊಬ್ಬರವಾಗಿ ಒಣಗಿಸಿ ಇತರೆ ಉದ್ದೇಶಗಳಿಗೂ ಬಳಸಬಹುದೆಂಬ ಪ್ರತ್ಯಕ್ಷಿಕೆ ನೀಡಿದರು. 

ಕರಗದ ಪ್ಲ್ಯಾಸ್ಟಿಕ್‌ ಮತ್ತು ಲೋಹದಿಂದ ಭೂ ಪಲವತ್ತತೆಯ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ ಕಸ ವಿಂಗಡಣೆಯ ಅಗತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರು. ಕಾಂಪೋಸ್ಟ್‌ ಸಂತೆಯಲ್ಲಿ ಭಾಗವಹಿಸಿದ್ದ ಶಾಸಕ ಬಿ.ಎ.ಬಸವರಾಜ್‌ ಮಾತನಾಡಿ, ಬೆಂಗಳೂರು ನಗರ ಮಾಹಿತಿ ಮತ್ತು ಜೈವಿಕ ತಂತ್ರಜಾnನದ ಮೂಲಕ ಉತ್ತುಂಗಕ್ಕೇರುತ್ತಿದೆ.

ಜನಸಂದಣಿ ಹೆಚ್ಚಿದಂತೆ ಕಸ ಉತ್ಪತ್ತಿಯೂ ಹೆಚ್ಚುತ್ತಿದೆ. ಒಣ ಮತ್ತು ಹಸಿ ಕಸಗಳೆರಡೂ ಪ್ರತ್ಯೇಕ ಪರಿಣಾಮ ಬೀರಲಿದ್ದು ಇವೆರಡರ ವಿಂಗಡಣೆ ಅಗತ್ಯವಿದೆ. ಹಸಿ ಕಸ ವಿಂಗಡಿಸಿ ಮನೆಗಳಲ್ಲೇ ಕಾಂಪೋಸ್ಟ್‌ ಗೊಬ್ಬರವಾಗಿಸಿ ಕೈತೋಟಗಳನ್ನು ಬೆಳೆಸಬೇಕಿದೆ. ನಗರದ ನಾಗರಿಕರಿಗೆ ಒಳ್ಳೆಯ ಆರೋಗ್ಯ ಉತ್ತಮ ವಾತಾವರಣ ಕಲ್ಪಿಸಲು ಸಂಘ ಸಂಸ್ಥೆಗಳು ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕಾಗಿದೆ.

ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕಸ ವಿಂಗಡಣೆ ಹಾಗೂ ಹಸಿ ಕಸವನ್ನು ಗೊಬ್ಬರವಾಗಿಸಿ, ಅವಕಾಶವಿದ್ದೆಡೆ ಕೈತೋಟ ಬೆಳೆಸುವ ಬಗ್ಗೆ ತಿಳಿಸಿಕೊಡಬೇಕಿದೆ. ಅ ಮೂಲಕ ಹಣ ಗಳಿಸುವ ಅವಕಶಗಳಿವೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕಿದೆ ಎಂದರು. ಪಾಲಿಕೆ ಮತ್ತು ಸ್ವಚ್ಚಗೃಹ ಸ್ವಯಂ ಸೇವಾ ಸಂಸ್ಥೆಯು ಕೆಆರ್‌ಪುರ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಕಸ ವಿಂಗಡಿಸಿ, ಗೊಬ್ಬರ ತಯಾರಿಸುವ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಹಮಿಕೊಳ್ಳುತ್ತಿರುವುದು ಅಭಿನಂದನೀಯ.

ನಗರವನ್ನು ಮತ್ತಷ್ಟು ಸ್ವಚ್ಚ ಮಾಡಲು ಜನರೂ ಸಹ ಸಹಕರಿಸಬೇಕಿದೆ ಎಂದರು. ಮಹದೇವಪುರ ವಲಯ ಜಂಟಿ ಆಯುಕ್ತೆ ವಾಸಂತಿ ಅಮರ್‌, ಪಾಲಿಕೆ ಸದಸ್ಯೆ ರಾಧಮ್ಮ ವೆಂಕಟೇಶ್‌, ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಮುನೇಗೌಡ, ವಾರ್ಡ್‌ ಅಧ್ಯಕ್ಷ ನಾರಾಯಣ ಸ್ವಾಮಿ, ಚೆಳಕೆರೆ ರವಿ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.