ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೋಚನೀಯ

ಕಸ ವಿಂಗಡಣೆ ಪ್ರಮಾಣದ ಬಗ್ಗೆ ಪಾರದರ್ಶಕ ಮಾಹಿತಿ

Team Udayavani, Sep 15, 2020, 11:51 AM IST

ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೋಚನೀಯ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾಲಿಕೆ ವ್ಯಾಪ್ತಿಯ 85ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ಒಟ್ಟಾರೆ ಕಸದಲ್ಲಿ ಶೇ. 1 ಪ್ರಮಾಣದಷ್ಟು ಕಸವನ್ನು ಮಾತ್ರ ಹಸಿ ಮತ್ತು ಒಣಕಸ ಎಂದು ವಿಂಗಡಣೆ ಮಾಡಲಾಗುತ್ತಿದೆ.

ಕಸ ವಿಂಗಡಣೆ ಪ್ರಮಾಣ (ಸ್ಕೋರ್‌) ಈ ವಾರ್ಡ್‌ ಗಳಲ್ಲಿ ಕೇವಲ ಒಂದು ಪ್ರಮಾಣಕ್ಕೆ ಇಳಿದಿರುವುದು ನಗರದಲ್ಲಿ ಕಸ ವಿಂಗಡಣೆ ಪ್ರಮಾಣ ಇಳಿಜಾರಿಗೆ ಇಳಿದಿರುವುದು ಸಾಬೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಕಸವಿಂಗಡಣೆಗೆ ಆದ್ಯತೆ ನೀಡದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಪಾಲಿಕೆ ಮುಂದಾಗಿದೆ. ನಗರದಲ್ಲಿ ಕಸ ವಿಂಗಡಣೆ ಪ್ರಮಾಣ ಹಾಗೂ ಪಾಲಿಕೆಯ ಹಸಿಕಸ ಸಂಸ್ಕರಣಾ ಘಟಕಗಳಿಗೆ ಎಷ್ಟು ತ್ಯಾಜ್ಯ ಹೋಗುತ್ತಿದೆ ಎಂದು ಪ್ರಗತಿ ಪರಿಶೀಲನೆ ಮಾಡಲಾಗಿದ್ದು, ಜುಲೈ ತಿಂಗಳಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ವಾರ್ಡ್‌ಗಳಲ್ಲಿ ಸಂಗ್ರಹವಾದಕಸದ ಪ್ರಮಾಣ, ಕಸ ವಿಂಗಡಣೆ, ಕಸ ವಿಲೇವಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹಾಗೂ ದಂಡಪ್ರಮಾಣ ಎಲ್ಲವನ್ನೂ ಪರಿಶೀಲನೆ ಮಾಡಿ ಎಲ್ಲ  ವಾರ್ಡ್‌ ಗಳಿಗೂ ರ್‍ಯಾಂಕ್‌ ನೀಡಲಾಗಿದೆ. ಇದರಲ್ಲಿ ಹಲವು ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಪ್ರಮಾಣ ಶೋಚನೀಯ ಸ್ಥಿತಿಗೆ ತಲುಪಿರುವುದು ಸ್ಪಷ್ಟವಾಗಿದೆ.

ನಗರದ 35ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೂನ್ಯಪ್ರಮಾಣಕ್ಕೆ ಇಳಿದಿದ್ದು, 80ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಶೇ..1 ಪ್ರಮಾಣಕ್ಕೆ,32 ವಾರ್ಡ್‌ಗಳಲ್ಲಿ ಶೇ.1 ಪ್ರತಿಶತಕಸವಿಂಗಡಣೆ ಹಾಗೂ 11 ವಾರ್ಡ್‌ಗಳಲ್ಲಿ ಶೇ. 2 ಪ್ರತಿಶತ ಕಸ ವಿಂಗಡಣೆಯಾಗುತ್ತಿದೆ. ಇನ್ನು ಹಲವು ವಾರ್ಡ್‌ಗಳು ಕಸ ವಿಂಗಡಣೆಯಲ್ಲಿ ಶೇ.10ಕ್ಕಿಂತ ಹೆಚ್ಚು ಮುಂದಕ್ಕೆ ಹೋಗಿಲ್ಲ.

ಪಾರದರ್ಶಕತೆ ಪ್ರದರ್ಶಿಸಿದ ಪಾಲಿಕೆ: ಬಿಬಿಎಂಪಿ ಇದೇ ಮೊದಲ ಬಾರಿಗೆ ನಗರದ ಯಾವ ವಾರ್ಡ್‌ ನಲ್ಲಿ ಎಷ್ಟು ಕಸ ಸಂಗ್ರಹವಾಗುತ್ತಿದೆ. ಎಷ್ಟು ಕಸ ಸಂಸ್ಕರಣೆ ಮಾಡುತ್ತಿದೆ. ಯಾವ ವಾರ್ಡ್‌ನಲ್ಲಿ ಶೂನ್ಯ ಪ್ರಮಾಣದ ಕಸ ವಿಂಗಡಣೆ ಆಗುತ್ತಿದೆ ಎಂಬ ಸಂಪೂರ್ಣ ಮಾಹಿತಿ ಪ್ರಕಟಿಸುವ ಮೂಲಕ ಪಾರದರ್ಶಕತೆ ಪ್ರದರ್ಶಿಸಿದೆ. ಈ ಮೂಲಕ ಸುಧಾರಣೆಗೆ ಮುಂದಾಗಿದೆ. ಆದರೆ, ಇದು ಯಾವ ಪ್ರಮಾಣದಲ್ಲಿಕಾರ್ಯರೂಪಕ್ಕೆ ಬರಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

38 ವಾರ್ಡ್‌ಗಳಲ್ಲಿ ಹೊಸ ಮಾದರಿ: ನಗರದ 38 ವಾರ್ಡ್‌ಗಳಲ್ಲಿ ಪ್ರತ್ಯೇಕ ಹಸಿಕಸ ಸಂಗ್ರಹಕ್ಕೆ ಈಗಾಗಲೇ ಟೆಂಡರ್‌ ನೀಡಲಾಗಿದ್ದು, ಸೆ.15ರ ಒಳಗೆ ಕೆಲಸಪ್ರಾರಂಭಿಸಲುಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ಒಣತ್ಯಾಜ್ಯ ಯಾರು ಸಂಗ್ರಹ ಮಾಡಬೇಕು ಎನ್ನುವ ಪಟ್ಟಿ ಇರುವುದರಿಂದ ಆ ಆಧಾರದ ಮೇಲೆ ಹಸಿ ಹಾಗೂ ಒಣಕಸ ವಿಂಗಡಣೆಶೀಘ್ರ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ನಗರದಲ್ಲಿಕಸ ವಿಂಗಡಣೆ ಚಿತ್ರಣ :  ನಗರದಲ್ಲಿ ಯಾವ ವಾರ್ಡ್‌ನಲ್ಲಿ ಎಷ್ಟು ಕಸ ವಿಂಗಡಣೆ ಆಗುತ್ತಿದೆ ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದ್ದು,ಇದನ್ನು ಸರಿಪಡಿಸಲು ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ) ರಂದೀಪ್‌ ತಿಳಿಸಿದರು. ನಗರದಲ್ಲಿ ಹಸಿಕಸ ಹಾಗೂ ಒಣಕಸ ವಿಂಗಡಣೆ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ. ಕಸ ವಿಂಗಡಣೆ ಮೇಲ್ವಿಚಾರಣೆ ಲೋಪ ವೆಸಗುವ ಅಧಿಕಾರಿಗಳಿಗೆ ನೋಟಿಸ್‌ ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.