ಗುಂಡಿ ಮುಚ್ಚಲು ಮತ್ತೆ ಮಳೆ ಅಡ್ಡಿ
Team Udayavani, Oct 13, 2017, 10:21 AM IST
ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸಕ್ಕೆ ಹಿನ್ನಡೆಯಾಗಿದ್ದು, ಮಳೆ ನಿಂತರೆ ಗಡುವಿನೊಳಗೆ ಗುಂಡಿಗಳನ್ನು ದುರಸ್ತಿಪಡಿಸಲಾಗುವುದು ಎಂದು ಮೇಯರ್ ಸಂಪತ್ರಾಜ್ ತಿಳಿಸಿದ್ದಾರೆ.
ಗುರುವಾರ ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರಸ್ತುತ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳ ಕುರಿತು ಹಾಗೂ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಗರದಲ್ಲಿ ರಸ್ತೆಗುಂಡಿಗಳ ಮುಚ್ಚಲು 15 ದಿನಗಳ ಗಡುವು ನೀಡಿದ್ದಾರೆ. ಆದರೆ, ನಗರದಲ್ಲಿ ಮತ್ತೆ ಮಳೆ ಆರಂಭವಾಗಿರುವುದರಿಂದ ವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಸತತ ಎರಡು ದಿನಗಳಿಂದ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಬುಧವಾರ ಮಳೆಯಾದರಿಂದ ರಾತ್ರಿ ಗುಂಡಿ ಮುಚ್ಚಲಾಗಿಲ್ಲ ಎಂದು ತಿಳಿಸಿದರು.
ಇದರೊಂದಿಗೆ ಕೋಲ್ಡ್ ಮಿಕ್ಸ್ ಮೂಲಕ ತಾತ್ಕಾಲಿಕವಾಗಿ ಗುಂಡಿ ಮುಚ್ಚಲು ನಿರ್ಧರಿಸಲಾಗಿತ್ತು. ಆದರೆ, ಗುಂಡಿಗಳಲ್ಲಿ ತೇವಾಂಶ ಹೆಚ್ಚಾಗಿರುವುದರಿಂದಾಗಿ ಕೋಲ್ಡ್ಮಿಕ್ಸ್ ಸಹ ಗುಂಡಿಗಳಲ್ಲಿ ಕೂಡಿಕೊಳ್ಳುತ್ತಿಲ್ಲ. ತೇವಾಂಶ ಹೆಚ್ಚಾಗಿರದ ಪ್ರದೇಶಗಳಲ್ಲಿ ಕೋಲ್ಡ್ಮಿಕ್ಸ್ ಬಳಸಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದರು.
ಅಧಿಕಾರಿಗಳು ಪ್ರತ್ಯಕ್ಷಿಕೆಯ ಮೂಲಕ ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದ್ದು, ಕಾಮಗಾರಿಗಳನ್ನು ವಿಳಂಬಗತಿಯಲ್ಲಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ