Penalty: ಮೊಬೈಲ್‌ನಲ್ಲಿನ ದೋಷ ಸರಿಪಡಿಸಲು ಹಿಂದೇಟು


Team Udayavani, Oct 3, 2023, 12:38 PM IST

tdy-9

ಬೆಂಗಳೂರು: ಖರೀದಿಯ ವಾರಂಟಿ ಅವಧಿಯೊಳಗೆ ಮೊಬೈಲ್‌ನಲ್ಲಿ ಕಾಣಿಸಿಕೊಂಡ ದೋಷ ಸರಿಪಡಿಸಲು ಹಿಂದೇಟು ಹಾಕಿದ ಪ್ರತಿಷ್ಠಿತ ಮೊಬೈಲ್‌ ಕಂಪನಿಗೆ ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 30,000 ರೂ. ದಂಡ ವಿಧಿಸಿದೆ ಆದೇಶ ಹೊರಡಿಸಿದೆ.

ಬೆಂಗಳೂರಿನ ನಗರ ನಿವಾಸಿಯೊಬ್ಬರು 2021ರ ಅ.29ರಂದು ಪ್ರತಿಷ್ಠಿತ ಕಂಪನಿಯ ಫೋನ್‌ ಖರೀದಿಸಿದ್ದರು. 2022ರ ಆ.18ರಂದು ಮೊಬೈಲ್‌ ಸ್ಪೀಕರ್‌ ಹಾಗೂ ಬ್ಯಾಟರಿ ದೋಷ ಕಾಣಿಸಿಕೊಂಡಿದೆ. ಈ ವೇಳೆ ಇಂದಿರ ನಗರ ಮೊಬೈಲ್‌ ಕೇರ್‌ಗೆ ಸರ್ವಿಸ್‌ ನೀಡಲಾಗಿತ್ತು. ಈ ವೇಳೆ ಸೆಂಟರ್‌ ನವರು ಬ್ಯಾಟರಿ ಹಾಗೂ ಸ್ಟೀಕರ್‌ನಲ್ಲಿ ದೋಷವಿದ್ದು, 7ದಿನಗಳ ಒಳಗೆ ಸರಿಪಡಿಸುವುದಾಗಿ ಭರವಸೆ ನೀಡಿದ್ದರು.

ಹೆಚ್ಚುವರಿ ಹಣಕ್ಕೆ ಬೇಡಿಕೆ: 2022 ಆ.25ರಂದು ಮೊಬೈಲ್‌ ತೆಗೆದುಕೊಂಡು ಹೋಗುವಂತೆ ಕರೆ ಮಾಡಿದ್ದರು. ಇದಾದ 5 ದಿನದೊಳಗೆ ಸಮಸ್ಯೆ ಮರುಕಳಿಸಿದೆ. ತಕ್ಷಣ ದೂರುದಾರರು ಫೋನ್‌ ಹಿಂದಿರುಗಿಸಿದ್ದಾರೆ. ಕೆಲ ದಿನಗಳ ಬಳಿಕ ಸರ್ವೀಸ್‌ ಕೇರ್‌ ನವರು ಫೋನ್‌ ಮೆಷ್‌ನಲ್ಲಿ ದೂಳು ಮತ್ತು ಅಂಟು ಅಂಟಿಕೊಂಡಿದ್ದು, ಇದರಿಂದಾಗಿ ವಾರಂಟಿ ಬಳಕೆ ಮಾಡಲಾಗದು. ಸರಿಪಡಿಸಲು ಹೆಚ್ಚುವರಿ ಹಣ ನೀಡುವಂತೆ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ದೂರುದಾರರು, ಈ ಹಿಂದೆ ಸ್ಪೀಕರ್‌ ಬದಲಾಯಿಸಿರುವುದಾಗಿ ಕರೆ ಮಾಡಿ ತಿಳಿಸಿದ್ದರು. ಆದರೆ, ಇದೀಗ ವಾರಂಟಿ ಬಳಕೆ ಮಾಡುವುದಕ್ಕೆ ಸಾಧ್ಯವಿಲ್ಲ ಎನ್ನಲಾಗುತ್ತಿದೆ ಎಂದು ತಿಳಿಸಿ ಮೊಬೈಲ್‌ ಅನ್ನು ಸರ್ವಿಸ್‌ ಸೆಂಟರ್‌ನವರಿಗೆ ಹಿಂದಿರುಗಿಸಿದ್ದರು. ನಂತರ ಮೊಬೈಲ್‌ ಕಂಪನಿಯನ್ನು ಹಲವು ಬಾರಿ ಸಂಪರ್ಕಿಸಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಬೇಸರಗೊಂಡು ದೂರುದಾರ ಗ್ರಾಹಕರ ಪರಿಹಾರ ವೇದಿಕೆಯಲ್ಲಿ ದೂರು ದಾಖಲಿಸಿದ್ದರು.

ಎರಡು ಕಡೆಯ ವಾದ -ಪ್ರತಿವಾದ ಆಲಿಸಿದ ಆಯೋಗದ ಅಧ್ಯಕ್ಷೆ ಎಂ.ಶೋಭಾ ನೇತೃತ್ವದ ವಿಚಾರಣಾ ಪೀಠ ಪ್ರತಿಷ್ಠಿತ ಮೊಬೈಲ್‌ ಸರ್ವೀಸ್‌ ಕೇಂದ್ರದವರು ಮೊದಲ ಬಾರಿಯೇ ದೂಳು ಮತ್ತು ಅಂಟು ಇರುವುದನ್ನು ಗಮನಿಸಿ, ವಾರಂಟಿಯಲ್ಲಿ ಸರಿ ಪಡಿಸಲು ಸಾಧ್ಯವಿಲ್ಲ ಎನ್ನುವುದಾಗಿ ಸ್ಪಷ್ಟವಾಗಿ ತಿಳಿಸಬಹುದಾಗಿತ್ತು. ಆದರೆ, ಒಮ್ಮೆ ಸರಿಪಡಿಸಲಾಗಿದೆ ಎನ್ನುವುದಾಗಿ ತಿಳಿಸಿ, ಮತ್ತೆ ಸಮಸ್ಯೆ ಕುರಿತು ವಿವರಿಸಿದ್ದಾರೆ. ಜತೆಗೆ ಅವರ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ದೂರುದಾರರ ಮೇಲೆ ಹೊರೆ ವರ್ಗಾಯಿಸಲು ಪ್ರಯತ್ನ ಮಾಡಿದ್ದಾರೆ. ಇದು ಕಾನೂನು ಬಾಹಿರ ವ್ಯವಹಾರವಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಮೊಬೈಲ್‌ ಇಲ್ಲದೇ ದೂರುದಾರರು ಅನುಭವಿಸಿರುವ ಆರ್ಥಿಕ ನಷ್ಟ ಪರಿಹಾರವಾಗಿ 20,000 ರೂ. ಹಾಗೂ ಕಾನೂನು ಹೋರಾಟದ ವೆಚ್ಚವಾಗಿ 10,000 ಸೇರಿ ಒಟ್ಟು 30 ಸಾವಿರ ರೂ. ನೀಡಬೇಕು. ಜತೆಗೆ ಮೊಬೈಲ್‌ನ ಸಂಪೂರ್ಣ ವೆಚ್ಚ 79,900 ರೂ. ಹಿಂದಿರುಗಿಸಬೇಕು ಎಂದು ಆದೇಶ ಹೊರಡಿಸಿದೆ.

 

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.