ವಿಚ್ಛೇದನ: 4 ತಿಂಗಳಲ್ಲಿ 2,300 ಅರ್ಜಿ ಸಲ್ಲಿಕೆ


Team Udayavani, May 17, 2017, 10:27 AM IST

Divorce-Decree-600.jpg

ಬೆಂಗಳೂರು: ದೇಶದ ‘ಐಟಿ ಹಬ್‌’ ಎಂಬ ಹಿರಿಮೆ ಹೊಂದಿರುವ ಬೆಂಗಳೂರಿನಲ್ಲಿ ವೈವಾಹಿಕ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಕಳೆದ ನಾಲ್ಕೇ ತಿಂಗಳಲ್ಲಿ 2,300ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಅಚ್ಚರಿ ಎಂದರೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಐಟಿ – ಬಿಟಿ ವಲಯದ್ದೇ ಹೆಚ್ಚು. ವೈವಾಹಿಕ ಜೀವನಕ್ಕೆ ಕಾಲಿಟ್ಟ 6 ತಿಂಗಳು, 1 ವರ್ಷ, 2 ವರ್ಷದೊಳಗೆ ವಿವಾಹ ಬಂಧನ ಕಡಿದುಕೊಳ್ಳಲು ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಮತ್ತೂಂದು ಸಂಗತಿ ಎಂದರೆ ಇಡೀ ಭಾರತದಲ್ಲಿ ಅತಿ ಹೆಚ್ಚು ವಿಚ್ಛೇದನ ಕೋರುವ ಟಾಪ್‌ ಐದು ನಗರಗಳಲ್ಲಿ ಬೆಂಗಳೂರು ಸಹ ಸ್ಥಾನ ಪಡೆದುಕೊಂಡಿದೆ.

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ವಿವಾಹ ವಿಚ್ಛೇದನ ಕೋರಿ ಪ್ರತಿ ನಿತ್ಯ 25ರಿಂದ 30ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. 2015ರಲ್ಲಿ ಒಟ್ಟು  5,300 ಹಾಗೂ 2016ರಲ್ಲಿ ಸರಾಸರಿ 5,500 ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಈ ಬಾರಿ ನಾಲ್ಕೇ ತಿಂಗಳಲ್ಲಿ 2,300ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಹೀಗಾಗಿ ಈ ವರ್ಷಾಂತ್ಯಕ್ಕೆ ಸುಮಾರು 7,500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದರೂ ಅಚ್ಚರಿ ಇಲ್ಲ ಎನ್ನುತ್ತಾರೆ ಕೌಟುಂಬಿಕ ನ್ಯಾಯಾಲಯದ ಅಧಿಕಾರಿಗಳು. 

ವಿವಾಹ ಬಂಧನಕ್ಕೊಳಗಾದ ಒಂದೆರಡು ವರ್ಷಗಳ ಅಂತರದಲ್ಲೇ ವೈಯಕ್ತಿಕ ಕಾರಣ, ಕೌಟುಂಬಿಕ ಕಲಹ, ಹೊಂದಾಣಿಕೆ ಸಮಸ್ಯೆ, ಉದ್ಯೋಗ ಬದಲಾವಣೆ, ಸ್ಥಾನಮಾನದ ಅಹಂ, ಖಾಸಗಿ ಸ್ವಾತಂತ್ರ್ಯಕ್ಕೆ ಧಕ್ಕೆಯಂತಹ ಕಾರಣಗಳನ್ನು ಮುಂದಿಟ್ಟುಕೊಂಡು ಯುವ ದಂಪತಿಗಳು ಕೋರ್ಟ್‌ ಮೆಟ್ಟಿಲೇರುತ್ತಿದ್ದಾರೆ. ಈ ಪೈಕಿ ಎರಡೆರಡು ವಿವಾಹವಾಗಿ ಅನಂತರ ಸತ್ಯ ಗೊತ್ತಾಗಿ ವಿಚ್ಛೇದನಕ್ಕೆ ಮೊರೆ ಹೋಗುವ ಪ್ರಕರಣಗಳೂ ಇವೆ ಎಂದು ಹೇಳುತ್ತಾರೆ. ವ್ಯಾಸಂಗ ಮಾಡುವಾಗ ಹೆತ್ತವರಿಗೆ‌ ತಿಳಿಯದಂತೆ ವಿವಾಹವಾಗುವ ಯುವಜನರು ಮನೆಯವರಿಗೆ ವಿಷಯ ಗೊತ್ತಾದ ಕೂಡಲೇ ವಿಚ್ಛೇದನಕ್ಕೆ ಮುಂದಾಗುವುದು ಅಂತರ್‌ ಧರ್ಮೀಯ ಇಲ್ಲವೇ ಅಂತರ್‌ ಜಾತಿ ವಿವಾಹವಾಗುವ ಜೋಡಿ ಸಂಸ್ಕೃತಿ ಭಿನ್ನತೆ, ಆಚಾರ-ವಿಚಾರಗಳ ಸಣ್ಣಪುಟ್ಟ ಮನಸ್ತಾಪಗಳಿಂದಲೇ ಸಂಬಂಧ ಕಡಿದುಕೊಳ್ಳುವ ನಿರ್ಧಾರ ಮಾಡಿ ವಿಚ್ಛೇದನಕ್ಕೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ ಎಂದು ವಿವರಿಸುತ್ತಾರೆ.

ಮೊದಲ ರಾತ್ರಿಯೇ ಬಿರುಕು
ಬೆಂಗಳೂರಿನ ಜೆ.ಪಿ.ನಗರದ ಪ್ರಶಾಂತ್‌ ಹಾಗೂ ನೀಲಾ (ಹೆಸರು ಬದಲಿಸಲಾಗಿದೆ) ವಿವಾಹ 2015ರಲ್ಲಿ ನಡೆದಿತ್ತು. ಮೊದಲ ರಾತ್ರಿಯ ದಿನ ಪತಿ, ಬೆಡ್‌ರೂಮ್‌ನಲ್ಲಿ ಕುತೂಹಲಕ್ಕೆ ಪತ್ನಿಯ ಮೊಬೈಲ್‌ ಪರಿಶೀಲಿಸಿದಾಗ ಆಕೆಯ ಕುರಿತ ಕೆಲ ತೀರಾ ವೈಯಕ್ತಿಕ ಮೆಸೇಜ್‌ ಹಾಗೂ ಇನ್ನಿತರೆ ಮಾಹಿತಿ ಗೊತ್ತಾಗಿದೆ. ಇದರಿಂದ ತೀವ್ರ ವಿಚಲಿತಗೊಂಡ ಆತ ವಿಚ್ಛೇದನಕ್ಕೆ ನಿರ್ಧರಿಸಿ ಪ್ರತ್ಯೇಕವಾಗಿ ನೆಲೆಸಲು ನಿರ್ಧರಿಸಿದ್ದಾರೆ. ಪೋಷಕರ ರಾಜಿ ಸಂಧಾನ ಫ‌ಲ ನೀಡದ ಹಿನ್ನೆಲೆಯಲ್ಲಿ ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದು, ಮಧ್ಯಸ್ಥಿಕೆ ಕೇಂದ್ರದಲ್ಲಿಯೂ ಅರ್ಜಿ ಇತ್ಯರ್ಥವಾಗದೇ ಸದ್ಯ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.

– ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.