‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್
Team Udayavani, May 17, 2021, 1:22 PM IST
ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದರು.
ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಶಾಸಕರ ನಿಧಿ 2 ಕೋಟಿ ರುಪಾಯಿಯಲ್ಲಿ ಶೇ.25 ರಷ್ಟು ಅನುದಾನ ಬಳಸಿಕೊಳ್ಳಲು ಸರ್ಕಾರ ಹೇಳಿದೆ. ಹಾಸಿಗೆ, ವೆಂಟಿಲೇಟರ್ ಖರೀದಿಗೆ ಬಳಸಲು ಅನುಮತಿ ಇದೆ. ಹೀಗಾಗಿ ನಾವು 100 ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಿ, ಸರ್ಕಾರದ ಅನುಮತಿ ಕೋರಿದ್ದೇವೆ.
ನಮ್ಮಲ್ಲಿ ಒಟ್ಟು 93 ಶಾಸಕರು ಹಾಗೂ ಪರಿಷತ್ ಸದಸ್ಯರಿದ್ದು, ಉಳಿದ ಮೊತ್ತವನ್ನು ನಮ್ಮ ಕಾರ್ಯಕರ್ತರ ಬಳಿ ಭಿಕ್ಷೆ ಎತ್ತಾದರೂ ಸಂಗ್ರಹಿಸುತ್ತೇವೆ. ಈ ಜನಪರ ಕೆಲಸಕ್ಕೆ ಸರ್ಕಾರ ಅನುಮತಿ ನೀಡಲಿ. ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?