2024- 25ನೇ ಸಾಲಿಗೆ ವಾರಾಹಿ ಕಾಮಗಾರಿ ಪೂರ್ಣ: ಡಿ.ಕೆ. ಶಿವಕುಮಾರ್
Team Udayavani, Jul 7, 2023, 8:00 AM IST
ಬೆಂಗಳೂರು: ವರಾಹಿ ನೀರಾವರಿ ಯೋಜನೆಯಡಿ ಬರುವ ಕಾಮಗಾರಿಗಳನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಉತ್ತರಿಸಿದ ಅವರು, 2023-24ನೇ ಸಾಲಿನ ವಾರಾಹಿ ಯೋಜನೆಗೆ ಅನುದಾನ ಹಂಚಿಕೆ ಮಾಡಬೇಕಾಗಿರುತ್ತದೆ. ಈ ಯೋಜನೆಯಡಿ ಬರುವ ಕಾಲುವೆಗಳ ನಿರ್ಮಾಣಕ್ಕೆ ಅರಣ್ಯ ಹಾಗೂ ಅರಣ್ಯೇತರ ಭೂಪ್ರದೇಶಗಳ ಹಸ್ತಾಂತರಕ್ಕಾಗಿ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗಳನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ವಾರಾಹಿ ನೀರಾವರಿ ಯೋಜನೆಗೆ 1997ರಲ್ಲಿ 9.43 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. 2003-04ರಲ್ಲಿ ಪರಿಷ್ಕೃತ ಅಂದಾಜು 569 ಕೋಟಿ ರೂ. ಆಯಿತು. 2014-15ರಲ್ಲಿ 1,789 ಕೋಟಿ ರೂ.ಗಳಿಗೆ ಪರಿಷ್ಕೃತ ಡಿಪಿಆರ್ ಸಿದ್ದಪಡಿಸಲಾಯಿತು. ಅದರಂತೆ 2023ರ ಮೇ ಅಂತ್ಯಕ್ಕೆ 1,302 ಕೋಟಿ ರೂ. ವೆಚ್ಚ ಮಾಡಲಾಗಿದೆ. ಒಟ್ಟು 15,702 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಇದ್ದು, 6,110 ಹೆಕ್ಟೇರ್ ಪ್ರದೇಶಕ್ಕೆ ಅಚ್ಚುಕಟ್ಟು ಸೃಷ್ಟಿಸಲಾಗಿದೆ.
ಈ ಯೋಜನೆಯಡಿ ವರುಣತೀರ್ಥ ಕೆರೆಯನ್ನು ತುಂಬಿಸುವ ಯೋಜನಾ ವರದಿಯನ್ನು 305 ಕೋಟಿ ರೂ.ಗಳಿಗೆ ತಯಾರಿಸಿದ್ದು, ಅದು ಪರಿಶೀಲನೆಯಲ್ಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು