ಅಣ್ಣಾ ಎನ್ನುವುದು ಬೇಡ ಅಂದರೆ ಸಾಹೇಬರೇ ಎನ್ನುತ್ತೇನೆ: ಕುಮಾರಸ್ವಾಮಿಗೆ ಡಿಕೆಶಿ

ಇದು ಎಂದು ಕಾಣದ ದ್ವೇಷದ ರಾಜಕಾರಣ

Team Udayavani, Jan 7, 2022, 7:18 PM IST

dk shi 2

ಬೆಂಗಳೂರು : ಕುಮಾರಸ್ವಾಮಿ ಅವರನ್ನು ಅಣ್ಣ ಎಂದು ಕರೆಯಬಾರದು ಎಂದಾದರೆ, ಕುಮಾರಸ್ವಾಮಿ ಸಾಹೇಬರು ಎಂದು ಕರೆಯುತ್ತೀನಿ, ಅವರಿಗೆ ಈ ಗೌರವವನ್ನು ನೀಡಬಾರದೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ತಮ್ಮನ್ನು ಅಣ್ಣಾ ಎಂದು ಕರೆದ ಬಗ್ಗೆ ಕುಮಾರಸ್ವಾಮಿ ಮಾಡಿದ ಆಕ್ಚೇಪಕ್ಕೆ ಉತ್ತರಿಸಿದ ಅವರು, ನಾವು ಜನರ ಮಧ್ಯೆ ಇದ್ದೇವೆ. ಅವರಿಗೆ ಜನರೇ ಉತ್ತರ ನೀಡಲಿದ್ದಾರೆ. ಜಲಧಾರೆ ಕಾರ್ಯಕ್ರಮವನ್ನು ಕೃಷ್ಣಭೈರೇಗೌಡ ಅವರು ಸಚಿವರಾಗಿದ್ದಾಗ ಜಾರಿಗೆ ತಂದಿದ್ದರು. ಕೇವಲ ಹೆಸರು ಇಟ್ಟುಕೊಂಡಿದ್ದಾರೆಯೇ?ರಾಜಕೀಯ ಪಕ್ಷವಾಗಿ ರಾಜ್ಯದ ಜನರ ಹಿತದೃಷ್ಟಿಯಿಂದ ಜೆಡಿಎಸ್ ನವರು ಏನು ಮಾಡುತ್ತಾರೋ ಮಾಡಲಿ, ಅವರಿಗೆ ಶುಭವಾಗಲಿ’ ಎಂದು ಉತ್ತರಿಸಿದರು.

ಯಾವ ಜಿಲ್ಲೆಯಲ್ಲಿ ಎಷ್ಟು ಕೋವಿಡ್ ಸೋಂಕಿತರು ಇದ್ದಾರೆ, ಅವರಲ್ಲಿ ಎಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರಲ್ಲಿ ಎಷ್ಟು ಮಂದಿ ವೆಂಟಿಲೇಟರ್ ಹಾಗೂ ಐಸಿಯುನಲ್ಲಿ ಇದ್ದಾರೆ ಎಂಬ ಮಾಹಿತಿ ಕಲೆ ಹಾಕಿದ್ದೇವೆ. ಇಡೀ ರಾಜ್ಯದಲ್ಲಿ 2% ರಷ್ಟು ಸೋಂಕು ಇಲ್ಲ. ಕರ್ಫ್ಯೂ ಅಥವಾ ಲಾಕ್ಡೌನ್ ಹಾಕಬೇಕಾದರೆ ಸರ್ಕಾರಕ್ಕೆ ತನ್ನದೇ ಆದ ಮಾನದಂಡ ಇದೆ. ಎಷ್ಟು ಸೋಂಕಿತರು, ಎಷ್ಟು ಮಂದಿ ಆಸ್ಪತ್ರೆಗೆ ಸೇರಿದ್ದಾರೆ, ಅವರಲ್ಲಿ ಎಷ್ಟು ಜನ ಐಸಿಯುನಲ್ಲಿ ಇದ್ದಾರೆ ಎಂಬ ಮಾನದಂಡ ಬೇಕು ಎಂದು ಆಗ್ರಹಿಸಿದರು.

2ನೇ ಅಲೆಯಲ್ಲಿ ಆಕ್ಸಿಜನ್ ಬೇಡಿಕೆ 800 ಮೆಟ್ರಿಕ್ ಟನ್ ಇತ್ತು, ಶೇ.40 ರಷ್ಟು ಆಸ್ಪತ್ರೆ ಬೆಡ್ ತುಂಬಿದ್ದವು. ಈಗ ವೀಕೆಂಡ್ ಕರ್ಫೂ ಹೇರಿದ್ದಾರೆ. ಜನವರಿ 6 ರಂದು ಸೋಂಕು ಪ್ರಮಾಣ ಶೇ. 3.9 ರಷ್ಟಿದೆ. ಈ ಹಿಂದೆ ಈ ಪ್ರಮಾಣ 5 % ಆದರೆ ಲಾಕ್ ಡೌನ್ ಮಾಡುವುದಾಗಿ ಹೇಳಿದ್ದರು. ಕಳೆದ ವರ್ಷ ಯಡಿಯೂರಪ್ಪನವರ ಸರ್ಕಾರ ಲಾಕ್ ಡೌನ್ ಮಾಡಿದಾಗ 33 % ಇತ್ತು. ಅಂದರೆ ಈಗಿನ ದರಕ್ಕಿಂತ 10 ಪಟ್ಟು ಹೆಚ್ಚಿತ್ತು.‌ಇದನ್ನು ಬಿಜೆಪಿ ಮರೆಯಬಾರದು ಎಂದರು.

ಕಳೆದ ಲಾಕ್ ಡೌನ್ ನಿಂದಾಗಿ ಹಿಂದೆ 12 ಕೋಟಿ ಜನ ಕೆಲಸ ಕಳೆದುಕೊಂಡಿದ್ದಾರೆ. ಅದರಲ್ಲಿ 1 ಕೋಟಿ ಕನ್ನಡಿಗರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಅಧಿಕೃತ ದಾಖಲೆಗಳಿವೆ. ಈ ರೀತಿ ಬಿಜೆಪಿ ಜನವಿರೋಧಿ ನೀತಿ ತೆಗೆದುಕೊಂಡಿದೆ.ಅವೈಜ್ಞಾನಿಕ ಲಾಕ್ ಡೌನ್ ನಿಂದ ರಾಜ್ಯದ ಆದಾಯದ ಮೇಲೂ ಇದು ಕೆಟ್ಟ ಪರಿಣಾಮ ಬೀರಿದೆ. ಸುಮಾರು ಶೇ.14.46 ರಷ್ಟು ಅಂದರೆ 78 ಸಾವಿರ ಕೋಟಿಯಷ್ಟು ಹೆಚ್ಚುವರಿ ಸಾಲ ಮಾಡಲಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ ಎಂದರು.

ಸಚಿವ ಸಂಪುಟದ ಆರು ಸಚಿವರು ನಿರ್ಬಂಧಕ್ಕೆ ವಿರೋಧಿಸಿದ್ದಾರೆ. ನಮ್ಮಲ್ಲಿ ಕೋವಿಡ್ ಇಲ್ಲ, ಎಲ್ಲಿ ಪ್ರಕರಣ ಹೆಚ್ಚಾಗಿದೆಯೋ ಅಲ್ಲಿ ಮಾಡಿ, ನೀವು ಈಗ ಮಾಡಿರುವ ನಿರ್ಬಂಧ ಸರಿ ಇಲ್ಲ ಎಂದಿದ್ದಾರೆ. ನಮ್ಮ ರಾಜಕಾರಣ ನಿಲ್ಲಿಸಲು ಎಲ್ಲ ವರ್ಗದ ಜನರ ವ್ಯಾಪಾರ ನಿಲ್ಲಿಸಿ, ಬಡವರ ಪ್ರಾಣ ಹಿಂಡುತ್ತಿದ್ದೀರಿ, ಈ ನಿರ್ಬಂಧ ವಾಪಸ್ ಪಡೆಯಿರಿ ಎಂದು ಸಿಎಂಗೆ ಪತ್ರ ಬರೆದು ಒತ್ತಾಯ ಮಾಡಿದ್ದೇನೆ ಎಂದರು.

ಬೀದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ನಿರ್ಬಂಧದಿಂದ ತಮಗಾಗುವ ನಷ್ಟವನ್ನು ತೋಡಿಕೊಂಡು ಕಣ್ಣೀರಿಡುವ ವಿಡಿಯೋಗಳು ಬರುತ್ತಿವೆ. ಜನ ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರನ್ನು ಬದುಕಿರುವಾಗಲೇ ಸಾಯಿಸುತ್ತಿದೆ. ಮುಖ್ಯಮಂತ್ರಿಗಳಿಗೆ ಭಗವಂತ ಬುದ್ಧಿ ನೀಡಲಿ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.