DMK Leader Guruswamy Murthy ಹತ್ಯೆ ಯತ್ನ ಪ್ರಕರಣ: ಮಧುರೈನ ಆರೋಪಿ ಬಂಧನ
Team Udayavani, Sep 11, 2023, 1:41 PM IST
ಬೆಂಗಳೂರು: ಇತ್ತೀಚೆಗೆ ನಡೆದ ರೌಡಿಶೀಟರ್ ಹಾಗೂ ತಮಿಳುನಾಡಿನ ಡಿಎಂಕೆ ನಾಯಕ ಗುರುಸ್ವಾಮಿ ಹತ್ಯೆ ಯತ್ನ ಪ್ರಕರಣ ಸಂಬಂಧ ಮಧುರೈ ಮೂಲದ ಆರೋಪಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಮಧುರೈನ ಪ್ರಸನ್ನ (26) ಬಂಧಿತ.
ಆರೋಪಿ ತನ್ನ ಸ್ನೇಹಿತರ ಜತೆ ಸೆ.4ರಂದು ಡಿಎಂಕೆ ನಾಯಕ ಹಾಗೂ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳ ರೌಡಿಶೀಟರ್ ಗುರುಸ್ವಾಮಿ ಹತ್ಯೆಗೆ ಯತ್ನಿಸಿದ್ದ. ಈ ಸಂಬಂಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈತನ ವಿರುದ್ಧ ತಮಿಳುನಾಡಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗಲಾಟೆ, ರೌಡಿ ಚಟುವಟಿಕೆಗಳ ಆರೋಪದಡಿ ಪ್ರಕರಣಗಳು ದಾಖಲಾಗಿದೆ. ಆರೋಪಿ ಪ್ರಸನ್ನ ತಮಿಳುನಾಡಿನ ಎಐಡಿಎಂಕೆ ನಾಯಕ, ರೌಡಿಶೀಟರ್ ಪಾಂಡಿಯನ್ನ ಸಹಚರ ನವೀನ್ ಎಂಬಾತನ ಆತ್ಮೀಯ ಸ್ನೇಹಿತನಾಗಿದ್ದಾನೆ. ಈತನ ವಿಚಾರಣೆಯಲ್ಲಿ ಸ್ನೇಹಿತ ನವೀನ್ ಕೋರಿಗೆ ಮೇರೆಗೆ ಬೆಂಗಳೂರಿಗೆ ಬಂದು ಗುರುಸ್ವಾಮಿ ಹತ್ಯೆಗೆ ಯತ್ನಿಸಲಾಗಿತ್ತು. ಬೇರೆ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾನೆ. ಈತನ ಸ್ನೇಹಿತ ನವೀನ್ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಹೇಳಲಾಗಿದೆ.
ಆತನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ