ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ಪದಚ್ಯುತಿ


Team Udayavani, Jul 31, 2018, 6:40 AM IST

dn-bettegowdavokkaligara-sangha.jpg

ಬೆಂಗಳೂರು: ದಿಢೀರ್‌ ಬೆಳವಣಿಗೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫ‌ಲರಾದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್‌.ಬೆಟ್ಟೇಗೌಡ ಹಾಗೂ ಇತರ ಪದಾಧಿಕಾರಿಗಳು ಸೋಮವಾರ ಪದಚ್ಯುತಿಗೊಂಡಿದ್ದು, ಆ.7ರಂದು ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ನಾಲ್ಕೂವರೆ ವರ್ಷದ ಹಿಂದೆ ಒಕ್ಕಲಿಗರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಮೂರು ವರ್ಷ ಡಾ.ಅಪ್ಪಾಜಿಗೌಡ ಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ 2017ರ ಜನವರಿಯಲ್ಲಿ ಡಿ.ಎನ್‌.ಬೆಟ್ಟೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣಮೂರ್ತಿ ಅವರನ್ನು ಹಂಗಾಮಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಒಕ್ಕಲಿಗರ ಸಂಘದ ಅಧೀನ ಸಂಸ್ಥೆಗಳಲ್ಲಿ ಅನಗತ್ಯವಾಗಿ ಸಾವಿರಾರು ಸಿಬ್ಬಂದಿಯನ್ನು ನೇಮಕ ಮಾಡುವ ಮೂಲಕ ಅಭ್ಯರ್ಥಿಗಳಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅನಗತ್ಯ ಸಿಬ್ಬಂದಿ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ಅಧೀನದಲ್ಲಿರುವ 18 ಸಂಸ್ಥೆಗಳ ನೌಕರರು ಎರಡು ಸುತ್ತಿನ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಿಮ್ಸ್‌ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಸಂಘದ ಸಂಸ್ಥೆಗಳ ಕಾಯಂ ನೌಕರರಿಗೆ ಸಕಾಲದಲ್ಲಿ ವೇತನ ನೀಡದ ಸ್ಥಿತಿ ಇರುವಾಗ ಅನಗತ್ಯ ಸಿಬ್ಬಂದಿ ನೇಮಕದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಿರ್ದೇಶಕರು ನೌಕರರ ಸಂಘಕ್ಕೆ ಕುಮ್ಮಕ್ಕು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬುದಾಗಿ ಪದಚ್ಯುತ ಅಧ್ಯಕ್ಷ ಬೆಟ್ಟೇಗೌಡ ಕೂಡ ಈ ಹಿಂದೆ ಆರೋಪಿಸಿದ್ದರು.

ಈ ನಡುವೆ ಸಂಘದ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ವಿರುದ್ಧ ಸಂಘದ 35 ನಿರ್ದೇಶಕರ ಪೈಕಿ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿ ನೋಟಿಸ್‌ ನೀಡಿದ್ದರು. ಅವಿಶ್ವಾಸ ನಿರ್ಣಯ ಮಂಡಿಸಿದ ಏಳು ದಿನದೊಳಗೆ ಅಧ್ಯಕ್ಷರು ವಿಶ್ವಾಸ ಮತ ಸಾಬೀತುಪಡಿಸಬೇಕು. ಆದರೆ 12 ದಿನ ಕಳೆದರೂ ಬೆಟ್ಟೇಗೌಡರು ಸಭೆ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ಎಲ್ಲ 35 ನಿರ್ದೇಶಕರಿಗೆ ನೋಟಿಸ್‌ ನೀಡಿ ಸೋಮವಾರ ಸಭೆ ಕರೆದಿದ್ದರು.

ಸೋಮವಾರ ನಡೆದ ಸಭೆಯಲ್ಲಿ 22 ನಿರ್ದೇಶಕರು ಪಾಲ್ಗೊಂಡಿದ್ದರು. ಬೆಟ್ಟೇಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವಿಶ್ವಾಸ ನಿರ್ಣಯದ ಪರ 21 ಮತ ಚಲಾವಣೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ಪದಚ್ಯುತಿಗೊಂಡರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.