ಪರಿಸರಕ್ಕೆ ಹಾನಿ ಬೇಡ: ಎಚ್ಡಿಕೆ
Team Udayavani, May 21, 2018, 11:30 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಬ್ಯಾನರ್, ಬಂಟಿಂಗ್ಸ್ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡದಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವುದು ಜನತೆ, ಕಾರ್ಯಕರ್ತರು, ಅಭಿಮಾನಿಗಳಿಗೆ ಹರ್ಷ ತಂದಿರಬಹುದು. ಈ ಸಂಭ್ರಮದಲ್ಲಿ ನಾನೂ ಕೂಡ ಭಾಗಿಯಾಗಿರುತ್ತೇನೆ. ಆದರೆ, ಈ ಸಂದರ್ಭದಲ್ಲಿ ಟಾಕಿಗಳನ್ನು ಸಿಡಿಸಿ, ಬ್ಯಾನರ್, ಬಂಟಿಂಗ್ಸ್ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡುವುದು ನನಗಿಷ್ಟವಿಲ್ಲ.
ನನ್ನ ಕಾರ್ಯಕರ್ತರೂ ಈ ರೀತಿ ಮಾಡಬಾರದು ಎಂಬುದು ನನ್ನ ಅನಿಸಿಕೆ. ನನ್ನ ಕಾರ್ಯಕರ್ತರು ಹೋರಾಟ, ಛಲಕ್ಕೆ ಎಷ್ಟು ಹೆಸರುವಾಸಿಯೋ ಹಾಗೆಯೇ ಪರಿಸರ ಪ್ರೇಮದಲ್ಲೂ ಮೇಲ್ಪಂಕ್ತಿ ಹಾಕಿಕೊಡಲಿದ್ದಾರೆ ಎಂದು ಭಾವಿಸಿಕೊಂಡಿದ್ದೇನೆ. ನಾವು ಪರಿಸರ ಸ್ನೇಹಿಗಳಾಗೋಣ. ಪರಿಸರ ಉಳಿಸೋಣ, ರಕ್ಷಿಸೋಣ ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ