ಅನ್ನದಾತರೇ ಹಳ್ಳಿಗಳ ಬಿಡಬೇಡಿ


Team Udayavani, Feb 24, 2020, 3:07 AM IST

annadataru

ಬೆಂಗಳೂರು: ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಹಳ್ಳಿ ಬಿಟ್ಟು ನಗರಕ್ಕೆ ಬರಬಾರದು ಎಂದು ನಟ ಶಿವರಾಜ್‌ಕುಮಾರ್‌ ರೈತರಲ್ಲಿ ಮನವಿ ಮಾಡಿದರು. ಕನಕಪುರ ರಸ್ತೆಯ ಆರ್ಟ್‌ ಆಫ್ ಲಿವಿಂಗ್‌ನಲ್ಲಿ ಭಾನುವಾರ ಕೃಷಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಭೂ ತಾಯಿ ಕೂಡ ಹೆತ್ತ ತಾಯಿ ಇದ್ದಂತೆ. ಆ ತಾಯಿಯನ್ನು ನಂಬಿ ಹಳ್ಳಿಯಲ್ಲೇ ನೆಲೆ ನಿಂತು ದುಡಿಮೆ ಮಾಡಿ ಎಂದು ಮನವಿ ಮಾಡಿದರು. ಹಸಿದವರಿಗೆ ತುತ್ತು ನೀಡುತ್ತಿ ರುವ ಕೈಗಳು ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದ ಕಡೆಗೆ ಮುಖ ಮಾಡುತ್ತಿವೆ. ಹಳ್ಳಿಯಲ್ಲೇ ಸುಖ ಜೀವನವಿದ್ದು ಹಳ್ಳಿಯತ್ತ ಮುಖ ಮಾಡಿ ಎಂದರು.

ರೈತರು ನಗರ ಪ್ರದೇಶಕ್ಕೆ ಬರಬೇಡಿ ಎಂದು ನಾನೂ ಹೇಳುವುದಿಲ್ಲ. ಬಂದರೂ ಒಂದೆರಡು ದಿನ ಇಲ್ಲಿದ್ದು ಮತ್ತೆ ಹಳ್ಳಿಗಳಿಗೆ ಮರಳಿರಿ. ಅನ್ನ ನೀಡವ ಕೈಗಳು ಯಾವತ್ತೂ ಹಳ್ಳಿಯಲ್ಲಿರಬೇಕು ಎಂದರು. ಶಾಸಕ ರವಿಸುಬ್ರಹ್ಮಣ್ಯ ಮಾತನಾಡಿ, ಮನುಷ್ಯ ತನ್ನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ತೋರುತ್ತಾನೆ.

ಆದರೆ ಅನ್ನ ನೀಡುವ ಭೂತಾಯಿ ಒಡಲಿಗೆ ರಾಸಾಯನಿಕ ಸಿಂಪಡಿಸುತ್ತಾನೆ. ಮಣ್ಣಿನಲ್ಲೂ ಅಸಂಖ್ಯಾತ ಜೀವಿಗಳಿವೆ. ಅವುಗಳಿಂದಲೂ ಪೋಷಕಾಂಶಗಳು ಇವೆ ಎನ್ನುವುದನ್ನು ಮನುಷ್ಯ ಸಂಕುಲ ಮರೆಯಬಾರದು ಎಂದರು. ಇತ್ತೀಚಿನ ದಿನಗಳಲ್ಲಿ ಅಧಿಕ ಬೆಳೆ ಬೆಳೆಯುವ ಉದ್ದೇಶದಿಂದ ರಾಸಾಯನಿಕ ಸಿಂಪಡಣೆ ಮಾಡುವ ಸಂಸ್ಕೃತಿ ಹೆಚ್ಚಾಗಿದೆ.

ಇದರಿಂದ ಭೂಮಿ ಕೂಡ ಕಲುಷಿತೊಳ್ಳುತ್ತದೆ. ಈ ನಿಟ್ಟಿನಲ್ಲಿ ಎಚ್ಚರಗೊಳ್ಳಬೇಕಾಗಿದೆ ಎಂದು ತಿಳಿಸಿದರು. ಮಣ್ಣಿನ ಸತ್ವದ ಬಗ್ಗೆ ಮಾಹಿತಿ ನೀಡಿದ ಮಣ್ಣು ತಜ್ಞ ಸಾಯಿಲ್‌ ವಾಸು, ಸಕಲ ಜೀವ ರಾಶಿಗಳು ಮಣ್ಣನಲ್ಲಿವೆ. ಅವುಗಳು ಭೂಮಿಗೆ ಹಲವು ರೀತಿಯಲ್ಲಿ ನೆರವಾಗುತ್ತಿವೆ.

ಅವುಗಳಿಗೆ ವಿಷ ಉಣಿಸುವ ಕೆಲಸ ಸಲ್ಲದು. ಜಗತ್ತಿನ ಏಳು-ಬೀಳುಗಳು ಮಣ್ಣಿನ ಮೇಲೆ ನಿಂತಿದೆ. ಮಣ್ಣಿನೊಂದಿಗೆ ಮನುಷ್ಯ ಅವಿನಾಭಾವ ಸಂಬಂಧ ಹೊಂದಿದ್ದಾನೆ. ಮಣ್ಣು ಸಂಜೀವಿನಿಯಾಗಿದ್ದು ಮತ್ತೂಂದು ಜೀವಕ್ಕೆ ಹುಟ್ಟುನೀಡುವ ತಾಕತ್ತಿದೆ ಎಂದು ತಿಳಿಸಿದರು. ಬೆಸ್ಟ್‌ ಯೂನಿವರ್ಸಿಟಿಯ ಕುಲಪತಿ ಡಾ.ಅಶೋಕ್‌ ಆಲೂರು, ಡಾ.ಪ್ರಭಾಕರ್‌ ರಾವ್‌, ಎಸ್‌.ಆರ್‌.ವೆಂಕಟೇಶ್‌ ಇತರರಿದ್ದರು.

ಸೂಕ್ತ ಬೆಂಬಲ ಬೆಲೆ ಅಗತ್ಯ: ಭಾರತದ ರೈತರಿಗೆ ಸಾವಯವ ಕೃಷಿ ಪದ್ಧತಿ ಹೊಸದೇನು ಅಲ್ಲ. ಹಲವು ವರ್ಷಗಳ ಹಿಂದೆ ಈ ಪದ್ಧತಿ ಅಳವಡಿಕೆಯಲ್ಲಿತ್ತು. ನಮ್ಮ ರೈತರು ಹೆಚ್ಚು ಸಾವಯವ ಕೃಷಿ ಪದ್ಧತಿ ಅಳವಡಿಸಿ ಕೊಳ್ಳುವುದಕ್ಕೆ ಸಿದ್ಧರಿದ್ದಾರೆ. ಆದರೆ, ಸೂಕ್ತ ಬೆಲೆ ಮತ್ತು ಮಾರುಕಟ್ಟೆ ಸೌಲಭ್ಯ ಲಭ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಾದ ಅಗತ್ಯವಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

ವಿದೇಶಗಳಿಂದ ನಾವು ಚಿನ್ನವನ್ನು ಆಮದು ಮಾಡಬಹುದು ಆದರೆ ಭೂಮಿಯನ್ನು ಅಲ್ಲ. ದೊಡ್ಡ ದೊಡ್ಡ ಬಂಡವಾಳ ಶಾಹಿಗಳು ರೈತರ ಭೂಮಿಯನ್ನು ಅಧಿಕ ಬೆಲೆಕೊಟ್ಟು ಖರೀದಿಗೆ ಮುಂದಾಗುತ್ತಿವೆ. ಯಾವುದೇ ಕಾರಣಕ್ಕೂ ರೈತರು ಭೂಮಿ ಮಾರಾಟ ಮಾಡಬಾರದು.
-ರವಿಸುಬ್ರಹ್ಮಣ್ಯ, ಶಾಸಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.