ವೈದ್ಯ, ದಂತ ವೈದ್ಯ ಪ್ರವೇಶಕ್ಕೆ ಏಕರೂಪ ಕೌನ್ಸೆಲಿಂಗ್‌


Team Udayavani, Mar 24, 2017, 3:45 AM IST

Sharan-Prakash-Patil.jpg

ವಿಧಾನಸಭೆ: ದೇಶಾದ್ಯಂತ ವೈದ್ಯ ಮತ್ತು ದಂತವೈದ್ಯ ಕೋರ್ಸ್‌ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ವೈದ್ಯ ಮತ್ತು ದಂತವೈದ್ಯ ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದಲೇ ಏಕರೂಪದ ಕೌನ್ಸೆಲಿಂಗ್‌ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅಲ್ಲದೆ, ಖಾಸಗಿ ವೈದ್ಯ ಕಾಲೇಜುಗಳ ಇನ್‌ಸ್ಟಿಟ್ಯೂಷನ್‌ ಕೋಟಾದ ಶೇ. 30ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ.ಈ ನಿಟ್ಟಿನಲ್ಲಿ ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ವಿಧೇಯಕ-2017ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ನೀಡಲಾಗಿದೆ. ವಿಧೇಯಕಕ್ಕೆ ವಿಧಾನ ಪರಿಷತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ಬಳಿಕ 2017-18ನೇ ಸಾಲಿನಿಂದಲೇ ಹೊಸ ಕೌನ್ಸೆಲಿಂಗ್‌ ವ್ಯವಸ್ಥೆ ಜಾರಿಗೆ ಬರಲಿದೆ.

ವಿಧೇಯಕವನ್ನು ಗುರುವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಪರ್ಯಾವಲೋಚನೆಗೆ ಮಂಡಿಸಿದ್ದು, ಈ ಕುರಿತು ಸುದೀರ್ಘ‌ ಸಮಾಲೋಚನೆ ನಡೆಸಿದ ಬಳಿಕ ಸದನ ಧ್ವನಿಮತದಿಂದ ವಿಧೇಯಕವನ್ನು ಅಂಗೀಕರಿಸಿತು. ಅದರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕವೇ ಕೌನ್ಸೆಲಿಂಗ್‌ ನಡೆಸಲಾಗುತ್ತದೆ.

ಈ ವಿಧೇಯಕದ ಅನ್ವಯ ಪ್ರಸ್ತುತ ದೇಶಾದ್ಯಂತ ವೈದ್ಯ ಮತ್ತು ದಂತವೈದ್ಯ ಕೋರ್ಸ್‌ಗಳಿಗೆ ನೀಟ್‌ ಆಯೋಜಿಸಲಾಗುತ್ತಿದೆ. ಆದರೆ, ಕಳೆದ ವರ್ಷ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಪ್ರತ್ಯೇಕ ಕೌನ್ಸೆಲಿಂಗ್‌ ನಡೆಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಏಕರೂಪದ ಕೌನ್ಸೆಲಿಂಗ್‌ ನಡೆಸಲಾಗುತ್ತದೆ.

ಜತೆಗೆ ಸರ್ಕಾರಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಲಭ್ಯವಾಗುವ ಶೇ. 50ರಷ್ಟು ಸೀಟುಗಳ ಜತೆಗೆ ಖಾಸಗಿ ಕಾಲೇಜುಗಳ ಶೇ. 30ರಷ್ಟು ಇನ್‌ಸ್ಟಿಟ್ಯೂಷನಲ್‌ ಸೀಟುಗಳಲ್ಲಿ ಶೇ. 30ರಷ್ಟನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುತ್ತದೆ.

ಖಾಸಗಿ ಕಾಲೇಜುಗಳೊಂದಿಗೆ ಸರ್ಕಾರ ಪ್ರತಿವರ್ಷ ಮಾಡಿಕೊಳ್ಳುವ ಸೀಟುಹಂಚಿಕೆ ಒಪ್ಪಂದ ಈ ಬಾರಿಯೂ ಮುಂದುವರಿಯಲಿದೆ. ಇದರೊಂದಿಗೆ ಖಾಸಗಿ ಕಾಲೇಜುಗಳಲ್ಲಿ (ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು) ಶೇ. 30ರಷ್ಟು ಹೆಚ್ಚುವರಿ ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ಲಭ್ಯವಾಗುವುದರಿಂದ ಸರ್ಕಾರಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಸೀಟುಗಳ ಸಂಖ್ಯೆ ಕಡಿಮೆಯಾದರೂ ಅದಕ್ಕಿಂತ ಹೆಚ್ಚಿನ ಸೀಟುಗಳು ಖಾಸಗಿ ಕಾಲೇಜುಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ಇದಲ್ಲದೆ, ಡೀಮ್ಡ್ ವಿಶ್ವವಿದ್ಯಾಲಯಗಳಲ್ಲೂ ರಾಜ್ಯ ಸರ್ಕಾರದಿಂದಲೇ ಕೌನ್ಸೆಲಿಂಗ್‌ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಇನ್‌ಸ್ಟಿಟ್ಯೂಷನಲ್‌ ಕೋಟಾದ ಶೇ. 25ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ನೀಡುವ ಕುರಿತು ಡೀಮ್ಡ್ ವಿವಿ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರಫೀಕ್‌ ಅಹ್ಮದ್‌, ಸಿ.ಎನ್‌.ಅಶ್ವತ್ಥನಾರಾಯಣ, ಸಿ.ಟಿ.ರವಿ, ರಾಜೀವ್‌, ಗುರು ಪಾಟೀಲ್‌, ಎಸ್‌.ಸುರೇಶ್‌ಕುಮಾರ್‌ ಅವರು ಕೆಲವೊಂದು ಅನುಮಾಗಳನ್ನು ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ಕೋಟಾದ ಸೀಟುಗಳು ಮತ್ತು ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕೌನ್ಸೆಲಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಲ್ಲದೆ, ರಾಜ್ಯದಲ್ಲಿ ಪ್ರಸ್ತುತ ಶುಲ್ಕ ನಿಯಂತ್ರಣ ಸಮಿತಿ ನಿರ್ಧರಿಸುವ ಶುಲ್ಕಗಳನ್ನು ಖಾಸಗಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳು ವಿಧಿಸುತ್ತಿಲ್ಲ. ಮೇಲಾಗಿ ಸರ್ಕಾರ ನಿಗದಿಪಡಿಸಿದ ಶುಲ್ಕವನ್ನೇ ಪಡೆಯುತ್ತವೆ. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಖಾಸಗಿ ಕಾಲೇಜುಗಳ ಶುಲ್ಕವೂ ಕಡಿಮೆಯಿದೆ ಎಂದು ವಿವರಿಸಿದರು.

ಉಳಿದಂತೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಕೋಟಾವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಕೋಟಾದಂತೆ ಶೇ. 20ರಿಂದ ಶೇ. 25ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡಲಾಗಿದೆ. ಏಕರೂಪದ ಕೌನ್ಸೆಲಿಂಗ್‌ಗಾಗಿ ಈಗಾಗಲೇ ಕೆಇಎ ವಿಶೇಷ ಸಾಫ್ಟ್ವೇರ್‌ ಸಿದ್ಧಪಡಿಸಿದೆ. ಅದರಲ್ಲಿ ಆಯಾ ಶಿಕ್ಷಣ ಸಂಸ್ಥೆಗಳ ಕೋಟಾ, ಸರ್ಕಾರಿ ಕೋಟಾ ಮತ್ತು ಇನ್‌ಸ್ಟಿಟ್ಯೂಷನಲ್‌ ಕೋಟಾ, ಅನಿವಾಸಿ ಭಾರತೀಯ ಕೋಟಾ ಮುಂತಾದ ಅಂಶಗಳನ್ನು ಸೇರಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.