‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಅಶೋಕ್ ಚಾಲನೆ


Team Udayavani, Aug 16, 2021, 4:46 PM IST

‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಅಶೋಕ್ ಚಾಲನೆ

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ದೇಶದಲ್ಲೇ ಮೊದಲ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್,”ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕೆಲ ದಿಟ್ಟ ನಿರ್ಧಾರಗಳನ್ನ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಹೀಗಾಗಿ ನನಗೆ ಈ ಕಾರ್ಯಕ್ರಮದ ಆಲೋಚನೆ ಹೊಳೆಯಿತು. ಪ್ರತಿ ಮನೆಯ ಸದಸ್ಯರನ್ನು ಪರೀಕ್ಷೆಗೊಳಪಡಿಸಿದರೆ ಖಂಡಿತಾ ನಿಯಂತ್ರಣದ ನಿಟ್ಟಿನಲ್ಲಿ ಮಹತ್ವದ ಯಶಸ್ಸು ಸಿಗಲಿದೆ ಎಂಬುದು ನನ್ನ ಅಭಿಪ್ರಾಯ. ಎಲ್ಲರಿಗೂ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗುವುದಿಲ್ಲ. ಆದರೆ ಈ ಪ್ರಯತ್ನದ ಮೂಲಕ ಅವರೆಲ್ಲರನ್ನ ತಲುಪುವ ಕೆಲಸವವಾಗಲಿದೆ. ಸಾರ್ವಜನಿಕರು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕು”, ಎಂದು ಮನವಿ ಮಾಡಿಕೊಂಡರು.

“ಈ ಕಾರ್ಯಕ್ರಮವು ಸಂಪೂರ್ಣವಾಗಿ ಪೇಪರ್ ಲೆಸ್ ಆಗಿದ್ದು, ತಂಡವು ಟ್ಯಾಬ್ ನಲ್ಲಿ ಮನೆಯ ಸದಸ್ಯರ ವಿವರಗಳನ್ನ ದಾಖಲಿಸಲಿದ್ದಾರೆ. ಅದು ಬಿಬಿಎಂಪಿ ತಂತ್ರಾಂಶದಲ್ಲಿಯೂ ಅಪ್ ಲೋಡ್ ಆಗಲಿದೆ. ಜನರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಏನೇನು ಕಠಿಣ ಕ್ರಮಗಳನ್ನ ತೆಗದುಕೊಳ್ಳಬಹುದೋ ಅದೆಲ್ಲವನ್ನು ಸರ್ಕಾರ ತೆಗೆದುಕೊಳ್ಳಲಿದೆ”, ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಜಮೀರ್ ಅಹಮದ್ ಖಾನ್ ಭೇಟಿಯಾದ ಮಾಜಿ ಡಿಸಿಎಂ ಜಿ. ಪರಮೇಶ್ವರ್

ಈ ವಿಶಿಷ್ಟ ಕಾರ್ಯಕ್ರಮದಡಿ ನಗರದ 54 ವಾರ್ಡ್‍ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ವೈದ್ಯರ ತಂಡವು ಪ್ರತಿನಿತ್ಯ 50 ಮನೆಗಳಿಗೆ ಭೇಟಿ ನೀಡಿ, ಆ ಕುಟುಂಬ ಸದಸ್ಯರ ಸಂಪೂರ್ಣ ಆರೋಗ್ಯದ ವಿವರಗಳನ್ನ ಪಡೆಯಲಿದ್ದಾರೆ. ಈ ವೇಳೆ ಬಿಪಿ, ಶುಗರ್ ಸೇರಿದಂತೆ ಕೆಲ ಸಾಮಾನ್ಯ ಕಾಯಿಲೆ ಹಾಗೂ ಗಂಭೀರ ಕಾಯಿಲೆಗಳ ಕುರಿತಂತೆಯೂ ಮಾಹಿತಿ ಕಲೆಹಾಕುವ ಕಾರ್ಯವಾಗಲಿದೆ. ಮನೆಯ ಸದಸ್ಯರು ಲಸಿಕೆ ಪಡೆದ ಬಗ್ಗೆ ಮಾಹಿತಿ ತೆಗೆದುಕೊಳ್ಳಲಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಆ ಮನೆಯಲ್ಲಿ ಭೇಟಿಯ ಸಮಯದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾದಲ್ಲಿ ಅವರಿಗೆ ಹೋಮ್ ಐಸೋಲೇಷನ್ ಕಿಟ್ ನೀಡಲಾಗುತ್ತದೆ.

ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಐವರು ಸದಸ್ಯರ ತಂಡವನ್ನ ರಚಿಸಲಾಗಿದ್ದು, ಅದರಲ್ಲಿ ಒಬ್ಬ ವೈದ್ಯಾಧಿಕಾರಿ (ಎಂಬಿಬಿಎಸ್/ಬಿಡಿಎಸ್/ಆಯುಷ್) ಹಾಗೂ ಉಳಿದಂತೆ ನರ್ಸ್, ಆಶಾಕಾರ್ಯಕರ್ತೆಯರು ಸೇರಿದಂತೆ ಅರೆ ವೈದ್ಯಕೀಯ ಸಿಬ್ಬಂದಿಗಳಿರುತ್ತಾರೆ. ಪ್ರತಿ ತಂಡದ ವೈದ್ಯಾಧಿಕಾರಿಗಳು ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ, ನಿಮ್ಮ ಆರೋಗ್ಯವೇ ನಮ್ಮ ಭಾಗ್ಯ’ ಎಂಬ ಘೋಷಣೆಯನ್ನೊಳಗೊಂಡ ಬಿಳಿ ಬಣ್ಣದ ಏಪ್ರಾನ್ ಧರಿಸಿರುತ್ತಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.