ದೋಸ್ತಿಯದ್ದೇ ಮಿಶ್ರ ಅಭಿಪ್ರಾಯ


Team Udayavani, Aug 9, 2017, 11:45 AM IST

indeera-caanteen.jpg

ಬೆಂಗಳೂರು: ಸದ್ಯ ವಿವಾದದ ಕೇಂದ್ರಬಿಂದುವಾಗಿರುವ “ಇಂದಿರಾ ಕ್ಯಾಂಟೀನ್‌’ ಬಗ್ಗೆ  ಪಾಲಿಕೆಯಲ್ಲಿ ಕಾಂಗ್ರೆಸ್‌ ಜತೆಗೂಡಿ ಆಡಳಿತ ನಡೆಸುತ್ತಿರುವ ಜೆಡಿಎಸ್‌ನಲ್ಲಿ ಮಿಶ್ರ ಅಭಿಪ್ರಾಯ ಹೊಂದಿದೆ. ಇಂದಿರಾಕ್ಯಾಂಟೀನ್‌ ಯೋಜನೆ ಬಗ್ಗೆ ಪಾಲಿಕೆಯಲ್ಲಿ ಬೆಂಬಲ ನೀಡಿರುವ ನಮ್ಮ ಜತೆ ಆಡಳಿತಾ ರೂಢ ಕಾಂಗ್ರೆಸ್‌ ಯಾವುದೇ ಚರ್ಚೆಯನ್ನೂ ಸಹ ಮಾಡಿರಲಿಲ್ಲ ಎಂದು ಕೆಲವು ಜೆಡಿಎಸ್‌ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೆ ಕೆಲವರು ಬಡವರಿಗೆ ಒಳ್ಳೆಯದಾದರೆ ಆಗಲಿ ಬಿಡಿ ಎಂದು ಹೇಳುತ್ತಾರೆ. ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಲು ಕಾಂಗ್ರೆಸ್‌ ಮುಂದಾಗಿದೆ. ಆದರೆ, ಇದು ಹೆಚ್ಚು ದಿನ ಬಾಳುವುದಿಲ್ಲ ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷರೂ ಆಗಿರುವ ಪಾಲಿಕೆಯ ಮಾಜಿ ಪ್ರತಿಪಕ್ಷ ನಾಯಕ ಆರ್‌.ಪ್ರಕಾಶ್‌ ಅಭಿಪ್ರಾಯಪಟ್ಟಿದ್ದಾರೆ. 

“ಇಂದಿರಾಕ್ಯಾಂಟೀನ್‌ ಸ್ಥಾಪನೆ ತರಾತುರಿಯಲ್ಲಿ ಕೈಗೊಂಡ ತೀರ್ಮಾನ. ದೇವಾಲಯ, ಆಟದ ಮೈದಾನ, ಪಾರ್ಕ್‌ ಜಾಗಗಳಲ್ಲಿ ಕ್ಯಾಂಟೀನ್‌ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ. ಅಡುಗೆ ಒಂದು ಕಡೆ, ವಿತರಣೆ ಒಂದು ಕಡೆ ಮಾಡುವುದರಿಂದ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವೇ ಇಲ್ಲ. ಜತೆಗೆ ಪ್ರಾರಂಭದಿಂದಲೂ ಇದು ವಿವಾದವೇ ಆಗಿದೆ,’ ಎನ್ನುತ್ತಾರೆ.

100 ಕಡೆ ಸಾಧ್ಯವೇ ಇಲ್ಲ
ಪಾಲಿಕೆಯ ಹಿರಿಯ ಸದಸ್ಯ ಬಿಟಿಎಂ ವಾರ್ಡ್‌ನ ದೇವದಾಸ್‌, “198 ವಾರ್ಡ್‌ಗಳಲ್ಲಿ 100 ಕಡೆ ಕ್ಯಾಂಟೀನ್‌ ಮಾಡಲು ಸಾಧ್ಯವೇ ಇಲ್ಲ.  ಮೂಲತಃ ನಮ್ಮ ಬೆಂಗಳೂರಿಗೆ ಇದರ ಅಗತ್ಯವಿರಲಿಲ್ಲ. ನಮ್ಮ ಬಿಟಿಎಂ ವಾರ್ಡ್‌ನಲ್ಲಿ ಆಟದ ಮೈದಾನದಲ್ಲಿ ಕ್ಯಾಂಟೀನ್‌ ಪ್ರಾರಂಭಿಸಲು ಪಾಲಿಕೆ ಮುಂದಾಯಿತಾದರೂ ವಿರೋಧ ವ್ಯಕ್ತವಾದ ಕಾರಣ ಸ್ಥಗಿತಗೊಳಿಸಲಾಯಿತು. ನಮ್ಮ ವಾರ್ಡ್‌ನಲ್ಲಿ ಕ್ಯಾಂಟೀನ್‌ಗೆ ಬೇರೆ ಕಡೆ ಜಾಗವೂ ಇಲ್ಲ,’ ಎಂದಿದ್ದಾರೆ. 

ಮಾರೇನಹಳ್ಳಿ ವಾರ್ಡ್‌ನ ಮಹದೇವ್‌, “ನಮ್ಮ ವಾರ್ಡ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸ್ಥಳ ದೊರೆತಿಲ್ಲ. ಆದರೆ, ಕ್ಯಾಂಟೀನ್‌ನಿಂದ ಬಡವರಿಗೆ ಒಳ್ಳೆಯದಾದರೆ ಆಗಲಿ ಬಿಡಿ. ನಮ್ಮ ವಾರ್ಡ್‌ನಲ್ಲಿ ಕೊಳಗೇರಿ ವಾಸಿಗಳು ಹೆಚ್ಚಾಗಿದ್ದಾರೆ. ಅವರಿಗೆ ಕ್ಯಾಂಟೀನ್‌ನಿಂದ ಒಳ್ಳೆಯದಾಗುವುದಾದರೆ ನಾವೇಕೆ ಬೇಡ ಎಂದು ಹೇಳ್ಳೋಣ. ಆದರೆ, ಗುಣಮಟ್ಟದ ಆಹಾರ ಕೊಡಬೇಕು ಎಂಬುದಷ್ಟೇ ನಮ್ಮ ಬೇಡಿಕೆ,’ ಎಂದು ತಿಳಿಸುತ್ತಾರೆ.

ಟಾಪ್ ನ್ಯೂಸ್

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.