ಸಿಂಪಡಣಾ ದ್ರಾವಣದ ಸಾಮರ್ಥ್ಯ ಬಗ್ಗೆ ಸಂಶಯ


Team Udayavani, Apr 9, 2020, 12:38 PM IST

bng-tdy-4

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿಂಪಡಣೆ ಮಾಡುತ್ತಿರುವ ದ್ರಾವಣವು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವ ಕೀಟಗಳು ಅದರಲ್ಲೂ  ಕೋವಿಡ್ 19 ವೈರಸ್‌ಗಳನ್ನು ನಿಯಂತ್ರಿಸುವ ಸಾಮರ್ಥ್ಯದ ಬಗ್ಗೆ ಈಗ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ವೈರಸ್‌ ಹರಡುವಿಕೆಯನ್ನು ಇದುವರೆಗೆ ಯಶಸ್ವಿಯಾಗಿ ನಿಯಂತ್ರಣ ಮಾಡಿದ ಅತ್ಯಂತ ಹಿಂದುಳಿದ ಜಿಲ್ಲೆ ಕಲಬುರಗಿಯಲ್ಲಿ ನಿತ್ಯ ಆ್ಯಂಟಿಸೆಪ್ಟಿಕ್‌ ಲೋಷನ್‌ ಮತ್ತು ಫೆನಾಯಲ್‌ ಜತೆಗೆ ನೀರು ಮಿಶ್ರಣ ಮಾಡಿ ಸಿಂಪಡಣೆ ಮಾಡಲಾಗುತ್ತಿದೆ. ಸಂಜೆ ಬ್ಲೀಚಿಂಗ್‌ ಪೌಡರ್‌ ಬಳಸಲಾಗುತ್ತಿದೆ. ಆದರೆ, ಮುಂದುವರಿದ ನಗರದಲ್ಲಿ ಸೋಡಿಯಂ ಹೈಪೋಕ್ಲೋರೈಡ್‌ ದ್ರಾವಣ ಒಳಗೊಂಡ ಬ್ಲೀಚಿಂಗ್‌ ಪೌಡರ್‌ ಮಾತ್ರ ಸಿಂಪಡಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಾಲಿಕೆ ಕ್ರಮ ತೃಪ್ತಿಕರವಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಪೋಕ್ಲೋರೈಡ್‌ ದ್ರಾವಣ ಬಳಸಿದ ನಂತರ ಸಂಪೂರ್ಣ ಸ್ವಚ್ಛತೆಗೆ ಆ್ಯಂಟಿಸೆಪ್ಟಿಕ್‌ ಲೋಷನ್‌ ಹಾಕುವುದರಿಂದ ಪೂರ್ಣ ಸ್ವಚ್ಛತೆ ಕಾಪಾಡಿಕೊಳ್ಳಬಹುದು. ದ್ರಾವಣ ಸಿಂಪಡಣೆ ಮಾಡಿದ ಮೇಲೆ ಆ ಜಾಗದಲ್ಲಿ ನೀರು ಹಾಕಿ ಸ್ವಚ್ಛಗೊಳಿಸುವುದು ಉತ್ತಮ ಎಂದು ಬಿಎಂಸ್‌ ಇನ್‌ಮಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಸಿ.ಅಬ್ಟಾರ್‌ ತಿಳಿಸಿದರು.

ದರ ವ್ಯತ್ಯಾಸ; ಪರಿಣಾಮ ಒಂದೇ?: ಬ್ಲೀಚಿಂಗ್‌ ಪೌಡರ್‌ ಮತ್ತು ಆ್ಯಂಟಿಸೆಪ್ಟಿಕ್‌ ಲೋಷನ್‌ ಮತ್ತಿತರ ಸ್ಯಾನಿಟೈಸರ್‌ ದ್ರಾವಣದ ನಡುವೆ ದರದ ವ್ಯತ್ಯಾಸವಿದೆ. ಆದರೆ, ಅವುಗಳ ಪರಿಣಾಮ ಹೆಚ್ಚು-  ಕಡಿಮೆ ಒಂದೇ ಆಗಿದೆ. ಸೋಡಿಯಂ ಹೈಪೋಕ್ಲೋರೈಡ್‌ ಸೇರಿದಂತೆ ವಿವಿಧ ದ್ರಾವಣಗಳಿಂದ ನೆಲ ಮತ್ತು ಗೋಡೆಗಳಂತಹ ಪ್ರದೇಶದಲ್ಲಿರುವ ಸಾಂಕ್ರಾಮಿಕ ಸೋಂಕಿನ ಅಂಶಗಳು ಸಾವನ್ನಪ್ಪುತ್ತವೆ. ಗಾಳಿಯಲ್ಲಿ ಕೋವಿಡ್ 19 ಸೋಂಕು ಇರುವ ಸಾಧ್ಯತೆ ಕಡಿಮೆ. ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಬಳಸುತ್ತಿರುವ ಕ್ರಮಗಳು ಸರಿಯಾಗಿವೆ ಎಂದು ಸಾಂಕ್ರಾಮಿಕ ರೋಗಗಳ ಜಂಟಿ ನಿರ್ದೇಶಕ ಡಾ.ಪ್ರಕಾಶ್‌ ಕುಮಾರ್‌ ತಿಳಿಸುತ್ತಾರೆ.

ಅಗ್ನಿಶಾಮಕ ದಳದ 8 ವಾಹನ, ಜಲಮಂಡಳಿಯ 20 ಜಟ್ಟಿಂಗ್‌ ಯಂತ್ರ, ಹ್ಯಾಂಡಲ್‌ ಪವರ್‌ ಸಿಂಪಡಣೆ ಯಂತ್ರ, ಪ್ರತಿ ವಾರ್ಡ್‌ಗೆ ತಲಾ 2, ಡ್ರೋನ್‌ 6, 19 ಮಿಸ್‌ಬ್ಲೋರ್‌ ಯಂತ್ರಗಳನ್ನು ನಗರ ವ್ಯಾಪ್ತಿ ಬ್ಲೀಚಿಂಗ್‌ ಪೌಡರ್‌ ಸಿಂಪಡಣೆ ಮಾಡಲು ಬಳಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸೋಡಿಯಂ ಹೈಪೋಕ್ಲೋರೈಡ್‌ (ಬ್ಲೀಚಿಂಗ್‌) ಪೌಡರ್‌ಸಿಂಪಡಣೆ ಮಾಡಲಾಗುತ್ತಿದೆ. ಈ ದ್ರಾವಣಕ್ಕೆ ಸಾಂಕ್ರಾಮಿಕ ರೋಗ ತಡೆಯುವ ಶಕ್ತಿ ಇದೆ.ಜನ ಸಂಚಾರ ಇಲ್ಲದೇ ಇರುವುದರಿಂದ ನಗರದ ಪ್ರಮುಖ ಭಾಗಗಳನ್ನು ಆದ್ಯತೆಯ ಮೇಲೆ ಸ್ವಚ್ಛ ಮಾಡಲಾಗುತ್ತಿದೆ.  -ಸರ್ಫರಾಜ್‌ಖಾನ್‌, ಬಿಬಿಎಂಪಿ ಜಂಟಿ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

 

ಹಿತೇಶ್‌ ವೈ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.