ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 114 ನೇ ವರ್ಷದ ಜನ್ಮದಿನೋತ್ಸವ ಆಚರಣೆ
Team Udayavani, Apr 1, 2021, 7:19 PM IST
ಬೆಂಗಳೂರು: ಬಡವರು ಬಡವರಾಗೇ ಉಳಿಯದೇ ಸಮಾಜದಲ್ಲಿ ತಲೆ ಎತ್ತಿ ಬದುಕಲು ಸೂಕ್ತವಾಗುವಂತೆ ಅವರ ಬದುಕನ್ನು ರೂಪಿಸುವುದು ಸಮಾಜದ ಎಲ್ಲರ ಕರ್ತವ್ಯವಾಗಿದೆ ಎಂದು ಸಿದ್ಧಗಂಗಾ ಪೀಠಾಧ್ಯಕ್ಷರಾಗಿದ್ದ ಶ್ರೀ ಶಿವಕುಮಾರಸ್ವಾಮೀಜಿಯವರು ಹೇಳುತ್ತಿದ್ದರು. ಅವರು ನೀಡಿದ ಸಂದೇಶವನ್ನು ಅನುಷ್ಠಾನಗೊಳಿಸುವ ಮೂಲಕ ಸ್ವಾಮೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ಹೇಳಿದರು.
ಗೋವಿಂದರಾಜ ನಗರ ಕ್ಷೇತ್ರದ ಮೂಡಲಪಾಳ್ಯ ವಾರ್ಡಿನ ಜ್ಞಾನಸೌಧದಲ್ಲಿ ವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಶಿವಯೋಗಿ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 114 ನೇ ವರ್ಷದ ಜನ್ಮದಿನೋತ್ಸವದ ಗುರುವಂದನಾ ಸಮಾರಂಭವದಲ್ಲಿ ಅವರು ಮಾತನಾಡಿದರು. ಕನಕಪುರದ ಶ್ರೀ ದೇಗುಲಮಠ ಶ್ರೀ ಚನ್ನಬಸವ ಸ್ವಾಮಿಗಳವರು ಸಾನ್ನಿಧ್ಯ ವಹಿಸಿದ್ದರು.
ಇದನ್ನೂ ಓದಿ:ಬೆಳಗಾವಿ ,ಮಸ್ಕಿ , ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ -ಕಟೀಲ್
ಈ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ನಾಡಿನ ಸಾಧಕರಾದ ಐಸಾಕ್ ನಿರ್ದೇಶಕ ಪ್ರೊ.ಆರ್.ಎಸ್.ದೇಶಪಾಂಡೆ, ಹಿರಿಯ ಪತ್ರಕರ್ತೆ ಡಾ. ಆರ್.ಪೂರ್ಣಿಮಾ, ಸಾಹಿತಿ ಡಾ.ಸಿ.ಶಿವಕುಮಾರಸ್ವಾಮಿ, ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಸೇರಿದಂತೆ 14 ಮಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಭಾಪತಿ ಡಾ. ಬಿಎಲ್ ಶಂಕರ್ ವಿ.ಸೋಮಣ್ಣ ನವರು ಮಾನವೀಯ ಸಂಬಂಧಗಳಿಗೆ ಒತ್ತು ನೀಡುವ ಸಜ್ಜನ ರಾಜಕಾರಣಿ ಎಂದು ಬಣ್ಣಿಸಿದರು. ಚಲನಚಿತ್ರ ನಟ ಶ್ರೀನಿವಾಸಮೂರ್ತಿ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಸೋಮಣ್ಣ, ಕಾರ್ಯಾಧ್ಯಕ್ಷರಾದ ಡಾ. ಅರುಣ್ ಸೋಮಣ್ಣ, ಕೋಶಾಧ್ಯಕ್ಷರಾದ ಡಾ. ಬಿ.ಎಸ್ ನವೀನ್, ಪ್ರಧಾನ ಕಾರ್ಯದರ್ಶಿಗಳಾದ ಫಾಲನೇತ್ರ, ಕಾರ್ಯದರ್ಶಿಗಳಾದ ಬಿ.ಎಸ್ ದಿವ್ಯ ಅವಿನಾಶ್ ಹಾಗೂ ಹಲವು ಗಣ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ