ಹವ್ಯಕ ಮಹಾಸಭೆ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಪುನರಾಯ್ಕೆ


Team Udayavani, Mar 12, 2019, 6:36 AM IST

havyaka.jpg

ಬೆಂಗಳೂರು: ಕಳೆದ ಡಿಸೆಂಬರ್‌ನಲ್ಲಿ ನಡೆದ ಅಮೃತ ಮಹೋತ್ಸವ ಹಾಗೂ ವಿಶ್ವ ಹವ್ಯಕ ಸಮ್ಮೇಳನವು ಕೇವಲ ಜಾತಿಯ ಸಮಾವೇಶವಾಗಿರಲಿಲ್ಲ. ಸರ್ವ ಸಮಾಜದವರಿಗೂ ಅಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಹವ್ಯಕ ಸಂಸ್ಕೃತಿಯನ್ನು ನಾಡಿನಾದ್ಯಂತ ಪಸರಿಸುವ ಕಾರ್ಯಕ್ರಮವಾಗಿತ್ತು ಎಂದು ಅಖೀಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ.ಗಿರಿಧರ ಕಜೆ ಸಂತಸ ವ್ಯಕ್ತಪಡಿಸಿದ್ದಾರೆ. 

ಭಾನುವಾರ ನಡೆದ ಸರ್ವಸದಸ್ಯರ 75ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾಗಿ ಪುನರಾಯ್ಕೆಯಾದ ಅವರು, ಸಮ್ಮೇಳನವನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿದ್ದರು. ಆದರೆ ಸಮಾಜದ ಬಂಧುಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ನಮ್ಮ ಅಂದಾಜಿಗಿಂತಲೂ ಚೆನ್ನಾಗಿ ಕಾರ್ಯಕ್ರಮಗಳು ಮೂಡಿಬಂದವು. ಒಟ್ಟು ಮೂರು ದಿನಗಳಲ್ಲಿ 75 ಸಾವಿರಕ್ಕಿಂತಲೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಯಾಯಿತು ಎಂದರು.

ಗುರುಪೀಠದ ಆಶೀರ್ವಾದದಿಂದ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಿತು. ಸಹಸ್ರಾರು ಕಾರ್ಯಕರ್ತರು ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಸಮ್ಮೇಳನವನ್ನು ಇತರರಿಗೆ ಮಾದರಿಯಾಗುವಂತೆ ಯಶಸ್ವಿಯಾಗಿಸಿದ ಕೀರ್ತಿ ಪ್ರತಿಯೊಬ್ಬ ಕಾರ್ಯಕರ್ತರಿಗೆ ಸಲ್ಲಬೇಕು ಎಂದು ಹೇಳಿದರು. 
ಟೀಕಾಕಾರರಿಗೆ ಹವ್ಯಕ ದೇಶ ರತ್ನ ಪುರಸ್ಕಾರ ಉತ್ತರ

ಪುಲ್ವಾಮ ದಾಳಿಯ ಬಳಿಕ ದೇಶದಾದ್ಯಂತ ಯೋಧರ ಜಾತಿ ಲೆಕ್ಕಾಚಾರ ಚರ್ಚಿತವಾಯಿತು. ಕೀಳುಮಟ್ಟದ ಅಂತಹ ಚರ್ಚೆಗಳಿಗೆ ವಿಶ್ವ ಹವ್ಯಕ ಸಮ್ಮೇಳನದ “ಹವ್ಯಕ ದೇಶ ರತ್ನ ಪುರಸ್ಕಾರ’ ಸ್ಪಷ್ಟ ಪ್ರತ್ಯುತ್ತರವಾಗಿತ್ತು. ಅನೇಕರು ಹವ್ಯಕ ದೇಶರತ್ನ ಪುರಸ್ಕಾರದ ವಿಷಯವನ್ನು ಇಟ್ಟುಕೊಂಡೇ ಇಂತಹ ಕೀಳು ಪ್ರಶ್ನೆ ಹುಟ್ಟುಹಾಕಿದ್ದವರ ಬಾಯಿ ಮುಚ್ಚಿಸಿದ್ದಾರೆ ಎಂದು ತಿಳಿಸಿದರು. ಮಾಜಿ ಅಧ್ಯಕ್ಷ ಶ್ರೀಧರ ಭಟ್‌ ಕಲಸಿ, ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಎಂ.ಎನ್‌.ಹೆಗಡೆ ಹಾರೂಗಾರ್‌ ಹಾಜರಿದ್ದರು. 

ಡಾ.ಗಿರಿಧರ ಕಜೆ ಪುನರಾಯ್ಕೆ: ಸರ್ವ ಸದಸ್ಯರ ಸಭೆಯ ನಂತರ ನಡೆದ ನಿರ್ದೇಶಕರ ಸಭೆಯಲ್ಲಿ ಡಾ.ಗಿರಿಧರ ಕಜೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾದರು. ಆ ಮೂಲಕ ಡಾ.ಕಜೆ ಅವರು ನಾಲ್ಕನೇ ಬಾರಿಗೆ ಮಹಾಸಭೆಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಆರ್‌.ಎಂ.ಹೆಗಡೆ ಬಾಳೆಸರ ಹಾಗೂ ಕೆಕ್ಕಾರು ಶ್ರೀಧರ್‌ ಭಟ್‌ ಉಪಾಧ್ಯಕ್ಷರಾಗಿ, ಸಿ.ಎ.ವೇಣುವಿಘ್ನೇಶ್‌ ಸಂಪ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಶಾಂತ ಭಟ್‌ ಯಲ್ಲಾಪುರ, ಶ್ರೀಧರ್‌ ಭಟ್‌ ಸಾಲೇಕೊಪ್ಪ ಕಾರ್ಯದರ್ಶಿಗಳಾಗಿ ಹಾಗೂ ಕೃಷ್ಣಮೂರ್ತಿ ಭಟ್‌ ಯಲಹಂಕ ಕೋಶಾಧಿಕಾರಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು. ನೂತನ ಆಡಳಿತ ಮಂಡಳಿಗೆ ನಿರ್ದೇಶಕರು, ಸಂಚಾಲಕರು ಶುಭಕೋರಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.