ಡಾ. ಎಚ್‌ಎನ್‌ ಅವರದ್ದು ಸರಳ ವ್ಯಕ್ತಿತ್ವ


Team Udayavani, Jul 17, 2019, 3:04 AM IST

dr-hn-avara

ಬೆಂಗಳೂರು: ವೈಚಾರಿಕತೆ, ಸರಳತೆ ಜೊತೆಗೆ ವಾಸ್ತುಶಿಲ್ಪಿ ಕಲ್ಪನೆಗಳನ್ನು ಹೊಂದಿದ್ದ ಡಾ. ಎಚ್‌ ನರಸಿಂಹಯ್ಯ ಅವರದು ಸರಳ ವ್ಯಕ್ತಿತ್ವ ಎಂದು ಲೇಖಕ ಡಾ.ಬಿ.ಆರ್‌.ಮಂಜುನಾಥ ಹೇಳಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಅಯೋಜಿಸಿದ್ದ ಡಾ.ಎಚ್‌.ಎನ್‌.ಅವರ ವೈಚಾರಿಕ ಚಿಂತನೆಗಳು ಎಂಬ ಚಿಂತನಗೋಷ್ಠಿಯಲ್ಲಿ ಮಾತನಾಡಿದರು.

ನೈತಿಕ ನಾಯಕತ್ವ ಹೊಂದಿದ್ದ ಅವರು ವೈಚಾರಿಕತೆ ಹಾಗೂ ವಿಜ್ಞಾನದಲ್ಲಿ ನಂಬಿಕೆ ಉಳ್ಳವರಾಗಿದ್ದರು. ಮೂಡನಂಬಿಕೆ, ಪವಾಡ, ಜ್ಯೋತಿಷ್ಯಗಳನ್ನು ವಿರೋಧಿಸುತ್ತಿದ್ದ, ಅವರು ಅಂತಹ ಪವಾಡ ಪರುಷ ನಿಜ ಬಯಲು ಮಾಡಲು ಸತ್ಯಶೋಧನೆ ಎಂಬ ಸಮಿತಿ ರಚಿಸಿಕೊಂಡಿದ್ದರು ಎಂದರು.

ಧೈರ್ಯ ಹಾಗೂ ನೇರವಂತಿಕೆ ಅವರು ಖ್ಯಾತಿ ಪಡೆದ ನರಸಿಂಹಯ್ಯ, ಪುಟ್ಟಪರ್ತಿ ಸಾಯಿಬಾಬಾ ಅವರಿಗೆ ಮೂರು ಬಾರಿ ಪತ್ರ ಬರೆದು ಪವಾಡವನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕೆಂದು ಕೇಳಿಕೊಂಡರು. ಕೆಲ ವಿಜ್ಞಾನಿಗಳೊಂದಿಗೆ ಪುಟ್ಟಪರ್ತಿ ಆಶ್ರಮಕ್ಕೆ ಹೋಗಿದ್ದರು, ಅಲ್ಲಿ ಪ್ರವೇಶ ನೀಡದಿದ್ದರಿಂದ ವಾಪಸ್ಸಾದರು ಎಂದು ತಿಳಿಸಿದರು.

ಡಾ. ನರಸಿಂಹಯ್ಯ, ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರೂರವರ ಸಿದ್ಧಾಂತಗಳಿಗೆ ಮನಸೋತಿದ್ದರು. ನೆಹರೂ ಅವರ ಸ್ನೇಹಶೀಲತೆ ವೈಜ್ಞಾನಿಕ ಮನೋಭಾವನೆಯಂತ ಅಂಶಗಳನ್ನು ಮೆಚ್ಚಿಕೊಂಡಿದ್ದರು ಎಂದರು.

ವಿಶ್ವವಿದ್ಯಾಲಯಗಳು ವಿಶ್ವದ ಜ್ಞಾನವನ್ನು ಪ್ರಸರಿಸುವ ಕೆಲಸ ಮಾಡುತ್ತವೆ. ಕಟ್ಟಡದೊಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಉತ್ತಮ ವಿಚಾರ, ಜ್ಞಾನ ನೀಡದೆ, ಇಡೀ ದೇಶ, ರಾಜ್ಯದ ಜನತೆಗೆ ಅದು ತಲುಪಿಸುವ ಕಾರ್ಯವನ್ನು ವಿಶ್ವವಿದ್ಯಾಲಯಗಳು ಮಾಡಬೇಕೆಂದು ಹೇಳುತ್ತಿದ್ದರು ಎಂದರು.

ನರಸಿಂಹಯ್ಯ ಉಪಕುಲಪತಿಯಾದ ಸಂದರ್ಭದಲ್ಲಿ ಜಾತ್ಯಾತೀತವಾಗಿ ಎಲ್ಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂಪರ್ಕ ಹೊಂದುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಶಿಕ್ಷಣ ಸಂಸ್ಥೆಗಳಿಗಾಗಿ ಹಗಲಿರುಳೂ ಶ್ರಮಿಸಿ ಶಿಕ್ಷಣ ಕ್ರಾಂತಿ ಮಾಡಿದರು ಎಂದು ಹೇಳಿದರು. ಎಂ.ತಿಮ್ಮಯ್ಯ, ಶ್ರೀಧರ ಆರ್‌.ರಾಮಸ್ವಾಮಿ, ಸಿದ್ದಯ್ಯ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.