ಡಾ. ರಾಜ್‌ ಚಿತ್ರಗಳು ಜೀವನಕ್ಕೆ ನಿಘಂಟಿದ್ದಂತೆ

ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಅಧ್ಯಕ್ಷ ಚಿನ್ನೇಗೌಡ ಅಭಿಮತ

Team Udayavani, Jun 16, 2019, 3:05 AM IST

dr-raj

ಬೆಂಗಳೂರು: ಡಾ. ರಾಜಕುಮಾರ್‌ ಚಿತ್ರಗಳು ಎಲ್ಲಾ ಕಾಲಕ್ಕೂ ಸಲ್ಲುವಂಥವು. ಅವರ ಪ್ರತಿ ಚಿತ್ರಗಳಲ್ಲೂ ಬದುಕಿನ ಅರ್ಥಗಳಿರುತ್ತವೆ. ಒಂದೇ ಮಾತಿನಲ್ಲಿ ಹೇಳುವುದಾದರೆ ರಾಜಕುಮಾರ್‌ ಚಿತ್ರಗಳು ಅಂದ್ರೆ ಜೀವನಕ್ಕೆ ನಿಘಂಟು ಇದ್ದಂತೆ. ಅದನ್ನ ಅರ್ಥ ಮಾಡಿಕೊಂಡರೆ ಸಾಕು, ಎಲ್ಲರ ಬದುಕಿಗೂ ಅರ್ಥ ಬರುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ ಹೇಳಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಸ್‌.ಎ ಚಿನ್ನೇಗೌಡ, ವರನಟ ಡಾ. ರಾಜಕುಮಾರ್‌ ಮತ್ತು ತಮ್ಮ ಚಿತ್ರರಂಗದ ಸುದೀರ್ಘ‌ ಪ್ರಯಣದ ಅನುಭವಗಳನ್ನು ಮೆಲುಕು ಹಾಕಿದರು.

ಇದೇ ವೇಳೆ ಮಾತನಾಡಿದ ಎಸ್‌.ಎ ಚಿನ್ನೇಗೌಡ, ಇವತ್ತು ಚಿತ್ರರಂಗ ನನ್ನನ್ನು ಒಬ್ಬ ನಿರ್ಮಾಪಕ, ವಿತರಕನಾಗಿ ಗುರುತಿಸಿಕೊಂಡಿದ್ದೇನೆ ಎಂದರೆ ಅದಕ್ಕೆ ಕಾರಣ ನಮ್ಮ ಅಕ್ಕ ಪಾರ್ವತಮ್ಮ ಮತ್ತು ಭಾವ ರಾಜಕುಮಾರ್‌. ಚಾಮರಾಜನಗರದ ಹಳ್ಳಿಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವಜ್ರೆಶ್ವರಿ ಕಂಬೈನ್ಸ್‌ ಸಂಸ್ಥೆಯ ಉಸ್ತುವಾರಿಯನ್ನ ವಹಿಸಿಕೊಟ್ಟರು. ಆ ಮೂಲಕ ಚಿತ್ರರಂಗಕ್ಕೆ ನನ್ನನ್ನು ಪರಿಚಯಿಸಿದರು. ಇವತ್ತು ನಾನು ಏನಾಗಿದ್ದೇನೋ ಅದೆಲ್ಲದಕ್ಕೂ ಅವರೇ ಕಾರಣ ಎಂದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ. ನಾಗತಿಹಳ್ಳಿ ಚಂದ್ರಶೇಖರ್‌, ಹಿರಿಯ ನಟಿ ಜಯಂತಿ, ಹಿರಿಯ ನಟ ಶಿವರಾಂ, ರಾಘವೇಂದ್ರ ರಾಜಕುಮಾರ್‌, ಸುಂದರ ರಾಜ್‌, ಹಿರಿಯ ನಿರ್ದೇಶಕ ಟಿ.ಎಸ್‌ ನಾಗಾಭರಣ, ಸಾಯಿ ಪ್ರಕಾಶ್‌, ನಟರಾದ ವಿಜಯ ರಾಘವೇಂದ್ರ, ಶ್ರೀಮುರಳಿ, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ ಗೋವಿಂದು, ಥಾಮಸ್‌ ಡಿಸೋಜಾ, ಭಾ.ಮಾ ಹರೀಶ್‌ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

ಎಂಎಲ್‌ಸಿ ಆಗುವ ಅವಕಾಶ: 80ರ ದಶಕದಲ್ಲಿ ಅಂದಿನ ಸರ್ಕಾರ ಡಾ. ರಾಜಕುಮಾರ್‌ ಅವರನ್ನು ಎಂಎಲ್‌ಸಿ ಆಗಿ ನಾಮ ನಿರ್ದೇಶನ ಮಾಡುವ ಯೋಚನೆ ಮಾಡಿತ್ತು. ಆದರೆ ರಾಜಕುಮಾರ್‌ ತನಗೂ ರಾಜಕಾರಣಕ್ಕೂ ಆಗಿಬರುವುದಿಲ್ಲ ಎನ್ನುವ ಕಾರಣಕ್ಕೆ ಆ ಆಫ‌ರ್‌ ಅನ್ನು ತಿರಸ್ಕರಿಸಿದ್ದರು. ಆಗ ಜೊತೆಯಲ್ಲಿದ್ದ ಕೆಲವರಿಗೆ ರಾಜಕುಮಾರ್‌ ಅವರ ಬದಲು ಎಸ್‌.ಎ ಚಿನ್ನೇಗೌಡರನ್ನು ಎಂಎಲ್‌ಸಿ ಮಾಡಬಹುದಲ್ಲ ಎಂಬ ಮಾತಿಗೆ.

ರಾಜಕುಮಾರ್‌ ಅವರು ಚಿನ್ನೇಗೌಡರು ಆಗುವುದಾದರೆ ತಮ್ಮದೇನೂ ಅಭ್ಯಂತರವಿಲ್ಲ ಎಂದಿದ್ದರು. ಆದರೆ ನನಗೆ ಮಾತ್ರ ಅದು ಸುತಾರಾಂ ಇಷ್ಟವಿರಲಿಲ್ಲ. ರಾಜಕುಮಾರ್‌ ಅವರೇ ಬೇಡವೆಂದ ಹುದ್ದೆ ತನಗೇಕೆ ಎನ್ನುವ ಕಾರಣಕ್ಕೆ ಎಂಎಲ್‌ಸಿ ಆಗುವ ಅವಕಾಶವನ್ನೆ ತಿರಸ್ಕರಿಸಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.